Menu

ಇಡಿ ಅಧಿಕಾರಿಗಳೆಂದು ನಂಬಿಸಿ 30 ಲಕ್ಷ ರೂ. ದೋಚಿದ ಖದೀಮರು

ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಜಾರಿ ನಿರ್ದೇಶನಾಲಯದ ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿ 30 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಸುಲೈಮಾನ್ ಹಾಜಿ ಎಂಬುವರು ಸಿಂಗಾರಿ ಬೀಡಿ ಉದ್ಯಮ ನಡೆಸುತ್ತಿದ್ದಾರೆ. ತಡರಾತ್ರಿ ತಮಿಳುನಾಡು ಮೂಲದ ತಂಡ ಸುಲೈಮಾನ್ ಮನೆಗೆ ಕಾರ್​ನಲ್ಲಿ ಆಗಮಿಸಿ, ನಾವು ಇಡಿ ಅಧಿಕಾರಿಗಳು ಎಂದು ನಂಬಿಸಿ ಎರಡು ಗಂಟೆ ಮನೆ ಪರಿಶೀಲಿಸಿದ್ದಾರೆ. ಕೊನೆಗೆ ಮನೆಯಲ್ಲಿದ್ದ 30 ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ.

ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಟ್ಲ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *