Menu

ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ

basavaraj bommai

ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಮಾಜಿ ಮುಖ್ಯಮಂತಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಈಗಾಗಲೇ ಡಿಪಿಆರ್‌ಗೆ ಒಪ್ಪಿಗೆ ಕೊಟ್ಟಿದೆ. ಪರಿಸರ ಇಲಾಖೆಯ ಅನುಮತಿ ಅತಿ ಶೀಘ್ರವೇ ಸಿಗಲಿದೆ. ಎತ್ತಿನ ಹೊಳೆ ಯೋಜನೆಗೆ ಕೇಂದ್ರದ ಯಾವುದೇ ಅನುಮತಿ ಅಗತ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಆಗ ನಾವು ಈ ಪ್ರಕರಣ ಅಂತಾರಾಜ್ಯ ವಿವಾದದಲ್ಲಿ ಕೋರ್ಟ್‌ನಲ್ಲಿದೆ ಅಂತ ಹೇಳಿದಾಗ ಕಾಂಗ್ರೆಸ್ ನಾಯಕರು ತಾವು ಅನುಮತಿ ತರುತ್ತೇವೆ ಎಂದಿದ್ದರು. ಈಗ ಅವರ ಮಿತ್ರ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು ಎಂದು ಆಗಹಿಸಿದರು. ಕೊವಿಡ್ ಹಗರಣದ ಕುರಿತು ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರು ನೀಡಿದ ಮಧ್ಯಂತರ ವರದಿ ಕುರಿತು ಕೇಳಿದ ಪ್ರಶ್ನೆಗೆ ಆ ಬಗ್ಗೆ ವರದಿಯ ವಿವರ ಮಾಹಿತಿ ಇಲ್ಲ ಎಂದು ಹೇಳಿದರು.

ಏ.10ಕ್ಕೆ ಧರಣಿ

ರಾಜ್ಯ ಸರ್ಕಾರದ ಬೆಲೆ ಏರಿಕೆ, ಜನ ವಿರೋದಿ ನೀತಿ ವಿರುದ್ಧ ಏಪ್ರಿಲ್ 10 ರಂದು ಬಿಜೆಪಿ ಹಗಲು ರಾತ್ರಿ ಧರಣಿ ನಡೆಸಲಿದೆ. ಬಿಜೆಪಿ ಸಂಸ್ಥಾಪನೆಯಾಗಿ 45 ವರ್ಷಗಳಾಗಿವೆ. ನಮ್ಮ ಹಿರಿಯರು ಕಟ್ಟಿರುವ ಪಕ್ಷವನ್ನು ಆ ಧೈಯ ಉದ್ದೇಶ ಆದರ್ಶಗಳಿಗೆ ಅನುಗುಣವಾಗಿ ಸಮಾಜ ನಿರ್ಮಾಣ ಮಾಡುವ ಸಂಕಲ್ಪ ಮಾಡಿ ನಾವು ಇಂದು ಆಚರಣೆ ಮಾಡಿದ್ದೇವೆ. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಬಂದಿದೆ ಎಂದರು.

ಇದೇ ವೇಳೆ ವಕ್ಸ್ ಕಾಯ್ದೆ ಜಾರಿ ಕುರಿತು ಕೇಳಿದ ಪಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಷ್ಟ್ರದಲ್ಲಿ ರೂಲ್ ಆಫ್ ಲಾ ಸ್ಥಾಪನೆ ಆಗಬೇಕು. ವಕ್ಸ್ ಹೆಸರಿನಲ್ಲಿ ದೇವಸ್ಥಾನ, ಸರ್ಕಾರಿ ಕಚೇರಿಗಳು, ಸಂಸತ್ತು ಭವನ ವಕ್ಸ್ ಆಸ್ತಿ ಎಂದು ಹೇಳಿದ್ದಾರೆ. ಅವೆಲ್ಲಕ್ಕೂ ತೆರೆ ಬೀಳಲಿದೆ. ಹಲವಾರು ರೈತರಿಗೆ, ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ಅವರು ಸಿವಿಲ್ ನ್ಯಾಯಾಲಯಕ್ಕೆ ಹೋಗಲು ಅವಕಾಶವಿದೆ. ಅದಕ್ಕೆ ಕಾನೂನು ಪುನರ್ ಸ್ಥಾಪನೆಯಾಗಲಿದೆ. ಬರುವ ದಿನಗಳಲ್ಲಿ ಎಲ್ಲರಿಗೂ ನ್ಯಾಯ ಕೊಡಲು ನಿರ್ಣಯವಾಗಿದೆ. ಅದು ಜಾರಿಯಾದಾಗ ಎಲ್ಲರಿಗೂ ಅನುಭವಕ್ಕೆ ಬರುತ್ತದೆ ಎಂದರು.

Related Posts

Leave a Reply

Your email address will not be published. Required fields are marked *