ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜಾತಿಗಣತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯ ಮತ್ತೆ ಚರ್ಚೆ ಬರಲಿದೆ, ಹಲವು ಸಚಿವರು ವಿರೋಧ ಮಾಡಿದ ಹಿನ್ನೆಲೆ ಸಚಿವ ಸಂಪುಟ ಮುಂದೂಡಿಕೆಯಾಗಿದೆ.
ಕಳೆದ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಿತ್ತು. ಬಳಿಕ ಸಂಪುಟದ ಎಲ್ಲ ಸದಸ್ಯರಿಗೂ ಈ ವರದಿಯ ದತ್ತಾಂಶ, ಪ್ರಮುಖ ಶಿಫಾರಸು ಒಳಗೊಂಡ ಪ್ರತಿಯನ್ನು ನೀಡಲಾಗಿತ್ತು. ಆ ಬಳಿಕ ಗುರುವಾರ ವಿಶೇಷ ಸಚಿವ ಸಂಪುಟ ನಡೆಸುವುದಾಗಿ ತಿಳಿಸಲಾಗಿತ್ತು. ವರದಿಯ ಬಗ್ಗೆ ಅಧ್ಯಯನ ನಡೆಸಿಕೊಂಡು ತಮ್ಮ ತಮ್ಮ ಸಮುದಾಯಗಳ ಜತೆ ಚರ್ಚೆ ಮಾಡಿ ಬಂದ ಸಚಿವರು ಸಂಪುಟ ಸಭೆಯಲ್ಲಿ ಅಭಿಪ್ರಾಯ ಮಂಡಿಸಿದರು.
ಮುಂದಿನ ಸಚಿವ ಸಂಪುಟದಲ್ಲಿ ನಿರ್ಣಯಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳಬೇಕೋ ಅಥವಾ ನಿರಾಕರಣೆ ಮಾಡಬೇಕೋ ಎಂಬ ನಿಟ್ಟಿನಲ್ಲಿ ಮುಂದಿನ ಸಚಿವ ಸಂಪುಟದಲ್ಲಿ ತೀರ್ಮಾನ ಆಗಲಿದೆ ಎಂದು ಹಲವು ಸಚಿವರು ತಿಳಿಸಿದರು. ಹೀಗಾಗಿ, ಮುಂದಿನ ಸಚಿವ ಸಂಪುಟದಲ್ಲಿ ಮತ್ತೆ ಜಾತಿ ಗಣತಿ ವರದಿ ಜಾರಿ ಬಗ್ಗೆ ಚರ್ಚೆ ನಡೆಯಲಿದೆ.
ಸಚಿವರಿಂದ ವಿರೋಧ:
ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಬಗ್ಗೆ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ ಸಚಿವರು ಜಾತಿ ಗಣತಿ ಸ್ಪಷ್ಟವಾಗಿಲ್ಲ, ಮರು ಗಣತಿ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂತೆ. ಹಲವು ಸಚಿವರಿಂದ ಅಪಸ್ವರ ಕೇಳಿ ಬಂದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ಸಚಿವರ ಬಳಿ ಮಾತನಾಡಿದ್ದಾರೆ.
ಸಚಿವ ಸಂಪುಟ ಸಭೆ ಮುಗಿದ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಜಾತಿ ಗಣತಿ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ. ಏನು ತೀರ್ಮಾನ ಆಗಲಿದೆಯೋ ಗೊತ್ತಿಲ್ಲ’ ಎಂದರು. ಸಭೆಯಲ್ಲಿ ಸಚಿವರು ಅವರವರ ಅಭಿಪ್ರಾಯವನ್ನು ಹೇಳಿದ್ದಾರೆ. ವರದಿಯನ್ನು ಯಾರೂ ವಿರೋಧಿಸಿಲ್ಲ’ ಎಂದು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು
ಸಭೆಯಲ್ಲಿ ಚರ್ಚೆ ನಡೆದಿದೆ. ನಾನು ನನ್ನ ಅಭಿಪ್ರಾಯವನ್ನು ಇನ್ನಷ್ಟೆ ವ್ಯಕ್ತಪಡಿಸಬೇಕಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮುಂದುವರಿಯಲಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಸಚಿವ ಸಂಪುಟ ಸಭೆಯ ಬಳಿಕ ಹೊರ ಬಂದ ಗಣಿ, ತೋಟಗಾರಿಕೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ ಅವರು,ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಹಲವು ಸಚಿವರಿಗೆ ಗೊಂದಲಗಳಿಗೆ. ಆ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಆ ಬಗ್ಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ನಮ್ಮ ತಂದೆಯವರಿಗೆ ಜಾತಿ ಗಣತಿಗೆ ವಿರೋಧವೇನಿಲ್ಲ. ಅವರು ಕೂಡ ಹಲವು ಪ್ರಶ್ನೆಗಳನ್ನು ಮಾಡಿ ವರದಿ ಬಗ್ಗೆ ಗೊಂದಲ ಪರಿಹಾರ ಪಡೆದುಕೊಳ್ಳುತ್ತಿದ್ದಾರಷ್ಟೇ ಎಂದು ತಿಳಿಸಿದರು.
ಗುಡ್ನ್ಯೂಸ್ ಇಲ್ಲ:
ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಗುಡ್ನ್ಯೂಸ್ ಏನಿಲ್ಲ. ಸದ್ಯಕ್ಕೆ ನಿರ್ಧಾರ ಕೈಗೊಂಡಿಲ್ಲ. ಮತ್ತಷ್ಟು ಚರ್ಚೆ ಬಳಿಕ ತೀರ್ಮಾನ ಮಾಡಲಾಗುತ್ತದೆ. ಯಾರ ವಿರೋಧವೂ ಇಲ್ಲ. ಸಾಕಷ್ಟು ಚರ್ಚೆಯಾಗಿದೆ ಎಂದು ಹೇಳಿದ್ದಾರೆ.