Menu

ಕೋಲ್ಕತ್ತಾದ ಹೋಟೆಲ್‌ನಲ್ಲಿ 14 ಮಂದಿ ಬೆಂಕಿಗೆ ಬಲಿ

ಕೋಲ್ಕತ್ತಾದ ಹೋಟೆಲ್‌ನಲ್ಲಿ ಬೆಂಕಿ ದುರಂತ ನಡೆದಿದ್ದು, ಕನಿಷ್ಠ 14 ಜನರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಿತುರಾಜ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.

14 ಶವಗಳನ್ನು ಹೊರತೆಗೆಯಲಾಗಿದೆ. ಹಲವರನ್ನು ರಕ್ಷಿಸಿದ್ದು, ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ಸೂಚಿಸಿ ದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ತಿಳಿಸಿದ್ದಾರೆ.

ಕಟ್ಟಡದಲ್ಲಿ ಇನ್ನೂ ಬಹಳಷ್ಟು ಜನರು ಸಿಲುಕಿಕೊಂಡಿದ್ದಾರೆ. ಯಾವುದೇ ಸುರಕ್ಷತೆ ಅಥವಾ ಭದ್ರತೆ ಇರಲಿಲ್ಲ. ನಿಗಮ ಏನು ಮಾಡುತ್ತಿದೆ ಎಂದು ನನಗೆ ತಿಳಿದಿಲ್ಲ ಎಂದು ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಶುಭಂಕರ್ ಸರ್ಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *