Menu

ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್‌ ಮಾಡಿಕೊಂಡು ಮಗ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್​ ಗನ್​ನಿಂದ ಫೈರಿಂಗ್​ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ.

ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ.

ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯವರೆಲ್ಲ ತಿರುಪತಿಗೆ ಹೋಗಿದ್ದಾರೆ. ಬೈಯೇಶ್​​ ಮನೆಯಲ್ಲಿ ಒಬ್ಬಂಟಿಯಾಗಿದ್ದ, ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಬಗ್ಗೆ ಪೊಲೀಸ್‌ ತನಿಖೆಯ ಬಳಿಕ ಮಾಹಿತಿ ಲಭಿಸಬೇಕಿದೆ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Posts

Leave a Reply

Your email address will not be published. Required fields are marked *