Wednesday, August 27, 2025
Menu

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ, ಜನಾಭಿಪ್ರಾಯಗಳಿಗೆ ಮನ್ನಣೆ: ಸಿಎಂ

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು
ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು.  ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ  ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ  ನಡೆಯಿತು.

ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು. ನಾನು ವಿಕೇಂದ್ರೀಕರಣದ ಪರ, ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು.  ಸಂವಿಧಾನದ (73)(74) ರನ್ವಯ ಗ್ರಾಮ , ನಗರ ಸ್ಥಳೀಯ ಸಂಸ್ಥೆ ಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಗ್ರಾಮ ಹಾಗೂ ಸ್ಥಳೀಯ ಸಂಸ್ಥೆ ಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದರು. ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು. ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ.  ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ ಎಂದು ಮಾಹಿತಿ ನೀಡಿದರು.

2ನೇ ಹಂತದಲ್ಲಿ  ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣ ಗೊಳಿಸಲು ಸೂಚಿಸಿದರು. ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು  ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ  ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ , ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

Related Posts

Leave a Reply

Your email address will not be published. Required fields are marked *