Menu

ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾ ಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ ಸಲಹೆ ಕೇಳಲಾಗುವುದು. ಸದನದಲ್ಲಿ ಈ ಬಗ್ಗೆ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಕ್ಯಾಬಿನೆಟ್ ಉಪ ಸಮಿತಿ ರಚನೆ ಮಾಡಲಾಗಿತ್ತು. ಅವರ ಶೇ 90 ರಷ್ಟು ಅಭಿಪ್ರಾಯಗಳನ್ನು ಪರಿಗಣಿಸಲಾಗಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಚುನಾವಣೆ ನಡೆಸಲಾಗುವುದು. ಹೊಸ ಪ್ರದೇಶಗಳನ್ನು ಸೇರಿಸಲು ವಿಳಂಬವಾಗುತ್ತದೆ. ಈಗ ಹೇಗಿದೆಯೋ ಅದೇ ರೀತಿ ಮುಂದುವರೆಯಲಾಗುವುದು ಎಂದು ಉತ್ತರಿಸಿದರು.

ಪ್ರತಿಪಕ್ಷ  ನಾಯಕ ಆರ್.ಅಶೋಕ್ ಅವರು ಇದನ್ನು ಕ್ವಾರ್ಟರ್ ಬೆಂಗಳೂರು ಎಂದು ಲೇವಡಿ ಮಾಡಿರುವ ಬಗ್ಗೆ ಕೇಳಿ ದಾಗ, ಈ ವಿಧೇಯಕವು ಮೊದಲಿಗೆ ಬಂದಾಗಲೇ ವಿರೋಧ ವ್ಯಕ್ತಪಡಿಸಬೇಕಿತ್ತು. ಸದನದಲ್ಲೇಕೆ ಜಾರಿಗೆ ತರಲು ಒಪ್ಪಿಗೆ ಸೂಚಿಸಿದರು. ಅವರು ಕ್ವಾರ್ಟರ್ ಬೆಂಗಳೂರು, ಫುಲ್ ಬೆಂಗಳೂರು ಎಂದು ಏನಾದರು ಹೇಳಲಿ. ಆದರೆ ಅವರು ಏಕೆ ಸದನದಲ್ಲಿ ಸಲಹೆಗಳನ್ನು ನೀಡಿದರು. ವಿರೋಧ ಪಕ್ಷದವರು ಅಷ್ಟು ಮಾತನಾಡಲಿಲ್ಲ ಎಂದರೆ ಗೌರವ ಕಡಿಮೆ ಅಲ್ಲವೇ, ಹೀಗಾಗಿ ಮಾತನಾಡುತ್ತಿದ್ದಾರೆ. ಅವರು ಬೆಂಗಳೂರಿನ ಒಂದು ಭಾಗ ಅವರಿಗೆ ಏನು ಗೌರವ ನೀಡಲಾಗು ವುದೋ ಅದನ್ನು ನಾವು ನೀಡುತ್ತೇವೆ ಎಂದರು.

ಶಿವಕುಮಾರ್ ಹಿಡಿದ ಕೆಲಸ ಮಾಡಿ ಮುಗಿಸುತ್ತಾರೆ. ಆದರೆ ರಾಮನಗರ ಹೆಸರು ಬದಲಾವಣೆಯಲ್ಲಿ ತಡವಾಗುತ್ತಿರುವ ಬಗ್ಗೆ ಕೇಳಿದಾಗ,ತಡವಾಗುತ್ತಿದೆ ಎಂದು ಹೇಳಿದವರು ಯಾರು, ಒಳ್ಳೆ ಶುಭ ಮುಹೂರ್ತ, ಶುಭ ಘಳಿಗೆಯಲ್ಲಿ ಕಾನೂನಿನ ಅಡಿಯಲ್ಲಿಯೇ ಘೋಷಣೆ ಮಾಡಲಾಗುವುದು. ಶೀಘ್ರದಲ್ಲಿಯೇ ಸಮಯ ತಿಳಿಸುತ್ತೇನೆ ಎಂದರು.

ಪೆಹಲ್ಗಾಮ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ತೀರ್ಮಾನ ಮಾಡಿರುವ ಬಗ್ಗೆ ಕೇಳಿ ದಾಗ, ಪಕ್ಷ, ವ್ಯಕ್ತಿಗಿಂತ ದೇಶ ದೊಡ್ಡದು ಎಂಬುದು ನಮ್ಮ ಒಮ್ಮತದ ತೀರ್ಮಾನ. ಪ್ರಧಾನಿಗಳಿಗೆ ನೀವು ಯಾವ ತೀರ್ಮಾನ ತೆಗೆದುಕೊಂಡರೂ ಬೆಂಬಲ ಸೂಚಿಸುವುದಾಗಿ, ಜೊತೆಗೆ ಯಾವ ರಾಷ್ಟ್ರಕ್ಕೂ ಮಣಿಯಬಾರದು ಎಂದು ಹೇಳಿದ್ದೆವು ಎಂದು ಉತ್ತರಿಸಿದರು. ನಮ್ಮ ಸಂಸದರು ಸಹಿ ಮಾಡಿ ಪ್ರಧಾನಿಗಳಿಗೆ ನೀಡುತ್ತಿದ್ದಾರೆ. ಏನು ಬೆಳವಣಿಗೆ ಯಾಗಿದೆ ಎಂದು ತಿಳಿಸಬೇಕು ಎಂದು ಹೇಳಿದ್ದೇವೆ. ಬೇರೆ ದೇಶದವರು ನಮ್ಮ ದೇಶದ ಸ್ವಾಭಿಮಾನದ ಬಗ್ಗೆ ಮಾತನಾ ಡುತ್ತಿದ್ದಾರೆ. ಇಂದಿರಾಗಾಂಧಿ ಅವರ ಕಾಲದಿಂದಲೂ ನಾವು ಯಾರ ಹಂಗಿಗೂ ಒಳಗಾದವರಲ್ಲ. ಇಂತಹ ಸಂದರ್ಭದಲ್ಲಿ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು ಎಂದು ಕೇಳುವುದು ನಮ್ಮ ಹಕ್ಕು ಎಂದರು.

ಕಬಿನಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಗಳ ಬಗ್ಗೆ ಕೇಳಿದಾಗ, ಈ ಬಗ್ಗೆ ಪಟ್ಟಿ ಮಾಡಿ ನನಗೆ ನೀಡಿದರೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಪ್ರತಿಕ್ರಿಯಿಸಿದರು. 63 ನೇ ಹುಟ್ಟುಹಬ್ಬ ಆಚರಣೆಗೆ ಶುಭಸುದ್ದಿ ನೀಡುವಿರಾ ಎಂದು ಕೇಳಿದಾಗ, ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ಹೊರಗಡೆ ಹೋಗುವುದು ಬೇಡವೆಂದು ನಮ್ಮ ಕುಟುಂಬ ಸದಸ್ಯರ ಜೊತೆ ರಾಜ್ಯದ ಅರಣ್ಯ ಸಂಪತ್ತು ವೀಕ್ಷಣೆ ಮಾಡಿದ್ದೇನೆ. ಈ ಬಗ್ಗೆ ನಿಮ್ಮೆಲ್ಲರ ಆಶೀರ್ವಾದವಿರಲಿ ಎಂದರು.

Related Posts

Leave a Reply

Your email address will not be published. Required fields are marked *