ಕೋಲಾರದ ಮಾಲೂರು ತಾಲೂಕಿನ ಆನೇಪುರ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇಯಲ್ಲಿ ಕಾರು ಅಪಘಾತಗೊಂಡು ತಾಯಿ ಮೃತಪಟ್ಟಿದ್ದು, ಮಗ ಗಂಭೀರ ಗಾಯಗೊಂಡಿದ್ದಾರೆ.
ಕೆಜಿಎಫ್ ಮೂಲದ ಪುಷ್ಪಲತಾ (70) ಮೃತ ಮಹಿಳೆ. ಪುಷ್ಪಲತಾ ಪುತ್ರ ಮಂಜುನಾಥ್ ಗಂಭೀರ ಗಾಯಗೊಂಡಿದ್ದಾರೆ. ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಾಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.