ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು.
ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ 8 ವರ್ಷಗಳ ಹಿಂದೆ ಸೂರ್ಯ ಎಂಬಾತನನ್ನು ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ.
ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ ಕರೆ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜಪೇಟೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.