Tuesday, December 09, 2025
Menu

ಹಾಸನಾಂಬೆಗೆ ಹರಿದು ಬಂದ ಭಕ್ತಸಾಗರ: ದರ್ಶನಕ್ಕೆ ನಾಳೆ ಕೊನೆಯ ದಿನ

hasanambe

ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದ್ದು, ಸೋಮವಾರದ ಅಂತ್ಯಕ್ಕೆ 23 ಲಕ್ಷ ಭಕ್ತರು ಭೇಟಿ ನೀಡಿದ್ದು, ನಾಳೆ ದರ್ಶನಕ್ಕೆ ಕೊನೆಯ ದಿನವಾಗಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು, ಸೆಪ್ಟೆಂಬರ್ 22ರಿಂದ ಇಲ್ಲಿಯವರೆಗೆ 23 ಲಕ್ಷ ಜನರು ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದಾರೆ ಎಂದರು.

ದರ್ಶನ ಬಹಳ ಸರಾಗವಾಗಿ ನಡೆಯುತ್ತಿದೆ. ಸೋಮವಾರ ಸುಮಾರು 2 ಲಕ್ಷ ಜನರು ದರ್ಶನ ಪಡೆದಿದ್ದಾರೆ. ಪ್ರಸ್ತುತ ವರ್ಷ ಇಲ್ಲಿಯವರೆಗೆ 23,00,000 ಜನರು ದರ್ಶನ ಪಡೆದಿದ್ದು, ಕಳೆದ ವರ್ಷದ ಒಟ್ಟಾರೆ 17,46,000 ಜನ ದರ್ಶನ ಪಡೆದ ದಾಖಲೆ ಮುರಿದಿದೆ ಎಂದಿದ್ದಾರೆ.

ಈ ವರ್ಷ 300 ಮತ್ತು 1000 ರೂ. ಮುಖಬೆಲೆಯ ಟಿಕೆಟ್‌ ಪಡೆದವರ ಸಂಖ್ಯೆ 3,40,260 ಜನರು ದರ್ಶನ ಪಡೆದಿದ್ದಾರೆ. ಕಳೆದ ವರ್ಷ ಈ ಸಾಲಿನಲ್ಲಿ ಒಟ್ಟಾರೆ 1,29,956 ಜನ ದರ್ಶನ ಪಡೆದಿದ್ದರು.ಈ ವರ್ಷ ಟಿಕೆಟ್ ಮಾರಾಟದಿಂದ ದಾಖಲೆ ಆದಾಯ ಬಂದಿದೆ ಎಂದು ಅವರು ಹೇಳಿದರು.

ಮಂಗಳವಾರ ಮತ್ತು ಬುಧವಾರ ದರ್ಶನ ಲಭ್ಯವಿದೆ. ಸೋಮವಾರ ಮಧ್ಯಾಹ್ನ 2 ರಿಂದ 3.30 ರವರೆಗೆ ನೈವೇದ್ಯ ಇರುವುದರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಸೋಮವಾರ ಸರತಿ ಸಾಲಿನಲ್ಲಿ ಪ್ರವೇಶ ದ್ವಾರಗಳು ರಾತ್ರಿ 9 ಗಂಟೆಗೆ ಮುಚ್ಚಲ್ಪಡುತ್ತವೆ ಮತ್ತು ದರ್ಶನ ಮಧ್ಯರಾತ್ರಿ 12 ಗಂಟೆಗೆ ಮಾತ್ರ ಇರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬುಧವಾರ – ದರ್ಶನ ಬೆಳಿಗ್ಗೆ 5 ರಿಂದ ಪ್ರಾರಂಭವಾಗಿ ಸಂಜೆ 7 ಗಂಟೆಯವರೆಗೆ ನಿರಂತರವಾಗಿ ಮುಂದುವರಿಯುತ್ತದೆ. ಸಾರ್ವಜನಿಕ ದರ್ಶನ ಸಂಜೆ 7 ಗಂಟೆಗೆ ಮುಗಿಯುತ್ತದೆ. ಹಾಸನಾಂಬೆ ದೇವಿಯ ದರ್ಶನಕ್ಕೆ ನಾಳೆ ಕೊನೆಯ ದಿನವಾಗಿದ್ದು, ಅದರ ನಂತರ ಅಂದರೆ ಗುರುವಾರದಿಂದ ಸಾರ್ವಜನಿಕ ದರ್ಶನವಿಲ್ಲ ಎಂದು ಕೃಷ್ಣ ಭೈರೇಗೌಡ ಸ್ಪಷ್ಟಪಡಿಸಿದ್ದಾರೆ.

Related Posts

Leave a Reply

Your email address will not be published. Required fields are marked *