ಮೈಸೂರು: ನಟ ದರ್ಶನ್, ಡಾಲಿ ಧನಂಜಯ್ ಆಷಾಢ ಶುಕ್ರವಾರದ ವಿಶೇಷ ದಿನವಾದ ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.
ಮೈಸೂರು ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಚಾಮುಂಡಿ ದರ್ಶನ ಪಡೆಯುತ್ತಾ ಬಂದಿರುವ ದರ್ಶನ್ ಆಷಾರ ಎರಡನೇ ಶುಕ್ರವಾರವಾದ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್ ಜೊತೆ ಚಾಮುಂಡಿಯ ದರ್ಶನ್ ಪಡೆದರು.
ಇದೇ ವೇಳೆ ಇತ್ತೀಚೆಗೆ ದಾಂಪತ್ಯಕ್ಕೆ ಕಾಲಿರಿಸಿದ್ದ ನಟ ಧನಂಜಯ್ ಕೂಡ ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಆಷಾಢ ಮಾಸದ ಎರಡನೇ ಶುಕ್ರವಾರದ ಇಂದು ಚಾಮುಂಡೇಶ್ವರಿಗೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಜಾಮೀನಿನ ಮೇಲಿರುವ ದರ್ಶನ್ ಡೆವಿಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ವಿದೇಶಕ್ಕೆ ತೆರಳಲು ಇತ್ತೀಚೆಗೆ ಸಿನಿಮಾ ಶೂಟಿಂಗೆ 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು.