Menu

Ahmedabad Air Crash: ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಮೃತದೇಹದ ಗುರುತು ಪತ್ತೆ

ಅಹ್ಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತ ನಡೆದ ಮೂರು ದಿನಗಳ ಬಳಿಕ ಗುಜರಾತ್‌ನ ಮಾಜಿ ಸಿಎಂ ವಿಜಯ್‌ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಅಪಘಾತ ಸ್ಥಳದಲ್ಲಿ ಪತ್ತೆಯಾದ ಮೃತದೇಹದೊಂದಿಗೆ ಡಿಎನ್‌ಎ ಮ್ಯಾಚ್ ಆಗಿದ್ದು, ಮೃತದೇಹ ಹಸ್ತಾಂತರ ತಯಾರಿ ಪ್ರಕ್ರಿಯೆ ಆರಂಭಗೊಂಡಿದೆ.

ಅಲ್ಲಿನ ಗೃಹ ಸಚಿವ ಹರ್ಷ್ ಸಾಂಘವಿ ಮಾಹಿತಿ ನೀಡಿದ್ದು, ಭಾನುವಾರ ಬೆಳಗ್ಗೆ ಬಂದ ವರದಿಯಲ್ಲಿ ರೂಪಾನಿ ಅವರ ಡಿಎನ್‌ಎಗೆ ಮ್ಯಾಚ್‌ ಆಗಿದೆ ಎಂದು ತಿಳಿಸಿದ್ದಾರೆ. ರೂಪಾನಿ ಅವರ ಸಹೋದರಿಯಿಂದ ಸ್ಯಾಂಪಲ್‌ ಪಡೆದು ಡಿಎನ್‌ಎ ಪರೀಕ್ಷೆ ಮಾಡಲಾಗಿತ್ತು.

ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಅವರು ಆಸ್ಪತ್ರೆಗೆ ಭೇಟಿ ನೀಡಲಿದ್ದು ಮೃತದೇಹ ಹಸ್ತಾಂತರಿಸಲಾಗುತ್ತದೆ. ರಾಜಕೋಟ್‌ನಲ್ಲಿ ವಿಜಯ್ ರೂಪಾನಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತಯಾರಿ ಮಾಡಿಕೊಂಡಿದ್ದಾರೆ.

Related Posts

Leave a Reply

Your email address will not be published. Required fields are marked *