ಜೀ಼ ಕನ್ನಡ ವಾಹಿನಿ ಒಂದು ತಿಂಗಳಲ್ಲಿ 12.2ಮಿಲಿಯನ್ ಮನೆಗಳ 45 ಕ್ಕೂ ಅಧಿಕ ಮಿಲಿಯನ್ ವೀಕ್ಷಕರನ್ನು ತಲುಪಿದ್ದು, ಈಗ ‘ಸದಾ ನಿಮ್ಮೊಂದಿಗೆ’ ಎಂಬ ಮೂಲಕ ಹೊಸತನದೊಂದಿಗೆ ನಿಮ್ಮ ಮುಂದೆ ಬಂದಿದೆ. ಸದಾ ನಿಮ್ಮೊಂದಿಗೆ ಅಭಿಯಾನವು ಈ ನಾಡಿನ ಸಂಸ್ಕೃತಿ ಮತ್ತು ಒಗ್ಗಟ್ಟನ್ನು ಬಿಂಬಿಸುತ್ತದೆ.
‘ಕೂಡಿ ಬಾಳಿದರೆ ಸ್ವರ್ಗ ಸುಖ’ ಎಂಬ ಅಂಶವನ್ನು ಇಟ್ಟುಕೊಂಡು ಮಾಡಿರುವ ಈ ಅಭಿಯಾನವು ಎಲ್ಲರೂ ಜೊತೆ ಯಾಗಿ ಬೆಳೆಯೋಣ, ಜೊತೆಯಾಗಿ ಸಂಭ್ರಮಿಸೋಣ ಮತ್ತು ಜೊತೆಯಾಗಿದ್ದರೆ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ತೋರಿಸಿಕೊಡುತ್ತದೆ. ಜೊತೆಯಾಗಿರುವ ಪ್ರತಿಯೊಂದು ಕ್ಷಣವೂ ಭರವಸೆಯನ್ನು ಕೊಡುತ್ತದೆ, ಬೆಂಬಲ ವನ್ನು ಸೂಚಿಸುತ್ತದೆ ಮತ್ತು ನಮ್ಮ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ನಾವು ಯಾವುದೇ ತರಹದ ಸವಾಲು ಗಳನ್ನು ಎದುರಿಸಬಹುದು ಎಂಬುದನ್ನು ಸಾರಿ ಹೇಳುತ್ತದೆ.
ಜೀ಼ ಕನ್ನಡದ ಬ್ರಾಂಡ್ ಫಿಲಂ ನಲ್ಲಿ ಕನ್ನಡಿಗರ ವಿಶ್ವಾಸ, ಪ್ರೀತಿ, ಒಗ್ಗಟ್ಟು ಹಾಗು ಹಳೆಯ ಮತ್ತು ಶ್ರೇಷ್ಠವಾದ ಪರಂಪರೆ ಯನ್ನು ತುಂಬಾ ಸುಂದರವಾಗಿ ಕಂಡುಬಂದಿದೆ. ಮಂಡ್ಯದ ಪ್ರಕೃತಿ ಸೌಂದರ್ಯದ ನಡುವೆ ಸೆರೆಹಿಡಿಯಲಾದ ಈ ಚಿತ್ರದಲ್ಲಿ ಕರ್ನಾಟಕದ ಸಾಂಪ್ರದಾಯಿಕ ಮದುವೆಯು ಕಂಡುಬರುತ್ತದೆ. ಇಲ್ಲಿ ಕಾಣಿಸುವ ಪುರಾತನ ದೇವಸ್ಥಾನ , ರಂಗು ರಂಗಾದ ರಂಗೋಲಿ, ಚಪ್ಪರ, ಅರಶಿನ ಶಾಸ್ತ್ರ ಸೇರಿ ಬಗೆ ಬಗೆಯ ಸಾಂಸ್ಕೃತಿಕ ಅಂಶಗಳು ಸುಂದರ ದೃಶ್ಯ ಕಾವ್ಯವಾಗಿವೆ.
ಮಗಳ ಮದುವೆಯ ಹಿಂದಿನ ದಿನ ಕರ್ತವ್ಯ ನಿಷ್ಠೆಯ ನಿಮಿತ್ತ ಮತ್ತೆ ಸೈನ್ಯಕ್ಕೆ ಹೋಗುವ ಅಪ್ಪನ ಭಾವನೆಗಳನ್ನು ಈ ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸಲಾಗಿದೆ. ತಂದೆಯ ಅನುಪಸ್ಥಿತಿಯಲ್ಲಿ ಇಡೀ ಗ್ರಾಮವೇ ತಾಯಿಯ ಬೆಂಬಲಕ್ಕೆ ಬಂದು ಮದುವೆಯ ಒಂದೊಂದು ಜವಾಬ್ದಾರಿಯನ್ನು ಒಬ್ಬೊಬ್ಬರು ಹೊತ್ತುಕೊಂಡು ಸಲೀಸಾಗಿ ಮಗಳ ಮದುವೆಯನ್ನು ನೆರವೇರಿಸಲು ಸಹಾಯ ಮಾಡುತ್ತಾರೆ. ಸೈನಿಕ ವಾಪಸಾದಾಗ ಆತನ ಹೆಂಡತಿ “ಇಷ್ಟು ದೊಡ್ಡ ಕುಟುಂಬವೇ ನಮ್ಮ ಜೊತೆ ಇದ್ದ ಮೇಲೆ, ನಮಗೇನು ಚಿಂತೆ” ಎನ್ನುತ್ತಾಳೆ.
ಸದಾ ನಿಮ್ಮೊಂದಿಗೆ ನಿಮ್ಮ ಜೀ಼ ಕನ್ನಡ ಅಭಿಯಾನವು ನಾವು ನಮ್ಮ ವೀಕ್ಷಕರ ಜೊತೆಗೆ ಹೊಂದಿರುವ ಭಾವನೆಗಳ ಸಂಭ್ರಮಾಚರಣೆ. ಜೀ಼ ಕನ್ನಡದ ಬ್ರಾಂಡ್ ಫಿಲಂ ಕರ್ನಾಟಕದ ಪರಂಪರೆ, ಸಂಸ್ಕೃತಿ ಮತ್ತು ಮೌಲ್ಯಗಳನ್ನು ಬಿಂಬಿಸು ತ್ತದೆ. ಇದು ಬರೀ ರಿಬ್ರ್ಯಾಂಡಿಂಗ್ ಆಗಿರದೆ ವೀಕ್ಷಕರ ಜೊತೆಗೆ ನಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಮಾಡಲಿದೆ ಎಂದು ಜೀ಼ ಕನ್ನಡ ವಾಹಿನಿಯ ಬಿಸಿನೆಸ್ ಹೆಡ್ ದೀಪಕ್ ಶ್ರೀರಾಮುಲು ಹೇಳಿದ್ದಾರೆ.
23ನೇ ಜೀ ಸಿನಿ ಅವಾರ್ಡ್ಸ್ 2025 ರ ಪ್ರಸಾರದ ಸಂದರ್ಭ ಈ ಅಭಿಯಾನವನ್ನು ಅನಾವರಣಗೊಳಿಸಲಾಯಿತು. ಎಲ್ಲಾ ಏಳು ಭಾಷೆಯಲ್ಲಿ ಈ ಅಭಿಯಾನವು ಏಕಕಾಲದಲ್ಲಿ ಪ್ರದರ್ಶನಗೊಳ್ಳುವುದರೊಂದಿಗೆ ಒಂದೇ ಸಮಯದಲ್ಲಿ ಏಳು ವಿಭಿನ್ನ ಧ್ವನಿಗಳ ಮೂಲಕ ಒಂದೇ ಕಲ್ಪನೆಯನ್ನು ಪ್ರೇಕ್ಷಕರು ಅನುಭವಿಸುವಂತಾಗಿದೆ.
ಧಾರಾವಾಹಿಗಳು, ನಾನ್ ಫಿಕ್ಷನ್ ಷೋಗಳಲ್ಲಿ ಅಭಿಯಾನದ ಮುಖ್ಯ ಧ್ಯೇಯವನ್ನು ಕಥೆ, ಸ್ಕಿಟ್ ಗಳ ಮೂಲಕ ವೀಕ್ಷಕ ರಿಗೆ ಇನ್ನಷ್ಟು ತಲುಪಿಸುವ ಪ್ರಯತ್ನ ಮಾಡಲಾಗುತ್ತದೆ ‘ಸದಾ ನಿಮ್ಮೊಂದಿಗೆ ನಿಮ್ಮ ಜೀ಼ ಕನ್ನಡ’ ಅಭಿಯಾನ ದಿಂದ ಜೀ಼ ಕನ್ನಡ ಬರೀ ಕಂಟೆಂಟ್ ಪ್ರೊವೈಡರ್ ಆಗಿರದೇ, ಒಗ್ಗಟ್ಟು, ಮೌಲ್ಯಗಳು, ಸಾಂಸ್ಕೃತಿಕ ಹಾಗೂ ಕನ್ನಡನಾಡಿನ ಪರಂಪರೆಯನ್ನು ಎತ್ತಿಹಿಡಿಯುವ ಕಲ್ಚರಲ್ ಪ್ರೊವೈಡರ್ ಆಗಲಿದೆ.