ಅಪರಾಧ
ಧಾರವಾಡ ಹಾಸ್ಟೆಲ್ನಲ್ಲಿ ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ
ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (DIMHANS)ಯ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ (24) ಆತ್ಮಹತ್ಯೆ ಮಾಡಿಕೊಂಡವರು. ಡಾ. ಪ್ರಜ್ಞಾ ಡಿಮ್ಹಾನ್ಸ್ ಸಂಸ್ಥೆಯಲ್ಲಿ ಮನೋವೈದ್ಯಶಾಸ್ತ್ರ ವಿಭಾಗದ ಪ್ರಥಮ ವರ್ಷದ ಪಿಜಿ ವಿದ್ಯಾರ್ಥಿನಿಯಾಗಿ ಎರಡು ವಾರಗಳ ಹಿಂದಷ್ಟೇ ವ್ಯಾಸಂಗ ಆರಂಭಿಸಿದ್ದರು. ಡಾ. ಪ್ರಜ್ಞಾ ಅವರ ಪೋಷಕರು ಮಗಳನ್ನು ಭೇಟಿಯಾಗಲು ಮಂಗಳವಾರ ಧಾರವಾಡಕ್ಕೆ ಆಗಮಿಸಿದ್ದರು. ಮಗಳೊಂದಿಗೆ ಸಮಯ ಕಳೆದು
ಬೆಂಗಳೂರು ಬಿಲ್ಡರ್ ನಿವಾಸದಿಂದ ಮನೆಗೆಲಸ ದಂಪತಿ ದೋಚಿದ್ದು 18 ಕೋಟಿ ರೂ.ಗಳ ಚಿನ್ನಾಭರಣ
ಬೆಂಗಳೂರಿನ ಮಾರತ್ತಹಳ್ಳಿಯ ಯಮಲೂರಿನಲ್ಲಿ ಬಿಲ್ಡರ್ ಶಿವಕುಮಾರ್ ಎಂಬವರ ಮನೆಯಿಂದ 18 ಕೋಟಿ ರೂಪಾಯಿ ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ಮತ್ತು ನಗದು ಕಳ್ಳತನವಾಗಿದೆ. ದಿನೇಶ್ ಮತ್ತು ಕಮಲಾ ಎಂಬ ದಂಪತಿಯನ್ನು ಕೆಲವು ದಿನಗಳ ಹಿಂದೆ ಮನೆ ಕೆಲಸಕ್ಕೆಂದು ನೇಮಿಸಿಕೊಳ್ಳಲಾಗಿತ್ತು. ಆದಂಪತಿ ಈ
ಐಟಿ ಕಂಪನಿಯ 87 ಕೋಟಿ ರೂ. ಮೌಲ್ಯದ ಡೇಟಾ ಕದ್ದ ಉದ್ಯೋಗಿ
ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿ 87 ಕೋಟಿ ರೂ. ಮೌಲ್ಯದ ಸಾಫ್ಟ್ವೇರ್ ಸೋರ್ಸ್ ಕೋಡ್ ಕದ್ದಿರುವ ಆರೋಪ ಕೇಳಿ ಬಂದಿದ್ದು, ಕಂಪೆನಿಯಿಂದ ವಜಾಗೊಳಿಸಲಾಗಿದೆ. ಕಂಪನಿಯ ಆಂತರಿಕ ತನಿಖೆಯ ನಂತರ ವೈಟ್ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಡೇಟಾ ಕಳವಿನಿಂದ ಕಂಪನಿಗೆ ದೊಡ್ಡ
ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ: ಉದ್ಯಮಿ ಪುತ್ರಿ, ಬಿಬಿಎಂ ವಿದ್ಯಾರ್ಥಿನಿ ಅರೆಸ್ಟ್
ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಉದ್ಯಮಿಯ ಪುತ್ರಿಯಾಗಿರುವ ಬಿಬಿಎಂ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ನಿವಾಸಿ ಮೇಘನಾ ಹಾಗೂಸ್ನೇಹಿತ ಆದಿತ್ಯ ಬಂಧಿತ ಆರೋಪಿಗಳು. ಬಂಧಿತರಿಂದ 4 ಕೆಜಿ ಗಾಂಜಾ, 37 ಗ್ರಾಂ ಎಡಿಎಂಎ, 35
ಶಿವಮೊಗ್ಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಬಚಾವ್
ಶಿವಮೊಗ್ಗದ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡ ರಾತ್ರಿ ಆಕಸ್ಮಿಕವಾಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್ಪೋರ್ಟ್ ಸಂಸ್ಥೆಗೆ ಸೇರಿದ ಬಸ್
ಮದುವೆಯಾಗಿ ಎರಡು ತಿಂಗಳಿಗೆ ಬೇರೆಯವನ ಜೊತೆ ಪತ್ನಿ ಎಸ್ಕೇಪ್: ದಾವಣಗೆರೆಯಲ್ಲಿ ಪತಿ ಸುಸೈಡ್
ಮದುವೆಯಾಗಿ ಎರಡು ತಿಂಗಳಾಗಿದ್ದು, ಪತ್ನಿ ಬೇರೊಬ್ಬನ ಜತೆ ಪರಾರಿಯಾಗಿದ್ದಕ್ಕೆ ನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ನಡೆದಿದೆ. ಹರೀಶ್ (32) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೂ ಮುನ್ನ ಹರೀಶ್ ಡೆತ್ನೋಟ್ ಬರೆದಿಟ್ಟಿದ್ದು, ಹೆಂಡತಿ ಬೇರೊಬ್ಬನ
ಕೋರಮಂಗಲದಲ್ಲಿ ಎಟಿಎಂಗೆ ತುಂಬಬೇಕಿದ್ದ ಹಣದೊಂದಿಗೆ ಸಿಬ್ಬಂದಿ ಪರಾರಿ
ಎಟಿಎಂಗೆ ತುಂಬಲು ನೀಡಿದ್ದ ಒಂದು ಕೋಟಿಗೂ ರೂಪಾಯಿಗೂ ಹೆಚ್ಚಿನ ಹಣವನ್ನು ಖಾಸಗಿ ನಗದು ನಿರ್ವಹಣಾ ಸಂಸ್ಥೆ ಹಿಟಾಚಿ ಕಂಪನಿಯ ಸಿಬ್ಬಂದಿ ತೆಗೆದುಕೊಂಡು ಹೋಗಿ ಪರಾರಿಯಾಗಿದ್ದಾರೆ. ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ. ಹಿಟಾಚಿ ಪೇಮೆಂಟ್ ಸರ್ವೀಸ್ ಸಂಸ್ಥೆಯು ಎಸ್ಬಿಐ
ಬೆಂಗಳೂರಿನಲ್ಲಿ ಲೈಟರ್ ಜಗಳ: ಕಾರು ಚಲಾಯಿಸಿ ಗೆಳೆಯನ ಕೊಲೆ
ಲೈಟರ್ ವಿಚಾರಕ್ಕೆ ಗೆಳೆಯರಿಬ್ಬರ ನಡುವೆ ಶುರುವಾದ ಗಲಾಟೆ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯ ವೀರಸಂದ್ರದ ಬಳಿ ನಡೆದಿದೆ. ಸಾಫ್ಟ್ವೇರ್ ಎಂಜಿನಿಯರ್ ರೋಷನ್ ಹೆಗ್ಡೆ ಸ್ನೇಹಿತ ಪ್ರಶಾಂತ್ ಮೇಲೆ ಕಾರು ಚಲಾಯಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಇದು ಅಪಘಾತವಲ್ಲ,
ಲಿಂಗಸೂಗೂರಿನಲ್ಲಿ ಆಸ್ತಿಗಾಗಿ ತಾಯಿಯ ಕೊಲೆಗೈದ ಮಗ
ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ಆಸ್ತಿಗಾಗಿ ನಡೆದ ಕೌಟುಂಬಿಕ ಕಲಹದಲ್ಲಿ ಮಗನೊಬ್ಬನ ತಾಯಿಯ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನು ಕೊಲೆ ಮಾಡಿ ಪರಾರಿಯಾದವ. ಕುಮಾರ ಮದ್ಯದ ಅಮಲಿನಲ್ಲಿ ತಾಯಿಯ ತಲೆ
ವಿಜಯಪುರದಲ್ಲಿ ಜ್ಯುವೆಲ್ಲರಿ ಶಾಪ್ ದರೋಡೆ, ವೀಡಿಯೊ ಮಾಡಲು ಹೋದಾತನಿಗೆ ಫೈರಿಂಗ್
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಚಿನ್ನದಂಗಡಿ ದರೋಡೆ ನಡೆದಿದೆ. ಈ ವೇಳೆ ವೀಡಿಯೊ ಸೆರೆ ಹಿಡಿಯಲು ಹೋದವನ ಮೇಲೆ ದರೋಡೆಕೋರರು ಫೈರಿಂಗ್ ಮಾಡಿದ್ದಾರೆ. ದರೋಡೆ ನಡೆಯುವಾಗ ಅನಿಲ್ ಎಂಬಾತ ವೀಡಿಯೊ ಸೆರೆ ಹಿಡಿಯಲು ಹೋದಾಗ ಆತನ ಮೇಲೆ ಗುಂಡು




