ಅಪರಾಧ
ಅಡ್ಡಾದಿಡ್ಡಿ ಆಟೊ ಚಾಲನೆ: ಶಿವಮೊಗ್ಗದಲ್ಲಿ ಚಾಲಕನ ಬಂಧನ
ಸಾರ್ವಜನಿಕ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಹಾಗೂ ಅಪಾಯಕಾರಿಯಾಗಿ ಆಟೊ ಚಲಾಯಿಸುತ್ತಿದ್ದ ಚಾಲಕನನನ್ನು ಬಂಧಿಸಿರುವ ಶಿವಮೊಗ್ಗದ ಪಶ್ಚಿಮ ಸಂಚಾರ ಠಾಣೆಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ NH-69 ಆಯನೂರು ಗೇಟ್ ಸರ್ಕಲ್ ಸಮೀಪ ಆಟೊವನ್ನು ಚಾಲಕ ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದ. ಗಮನಿಸಿದ ಸಾರ್ವಜನಿಕರು ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಮಾಡಿ ದೂರು ನೀಡಿದ್ದರು. ತಕ್ಷಣ ಕಾರ್ಯಪ್ರವೃತ್ತರಾದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ, ಸ್ಥಳಕ್ಕೆ
ದ್ವಿಚಕ್ರ ವಾಹನಕ್ಕೆ ಹಾಲು ಟ್ಯಾಂಕರ್ ಡಿಕ್ಕಿ: ಇಬ್ಬರ ಸಾವು
ದ್ವಿಚಕ್ರ ವಾಹನಕ್ಕೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತಪಟ್ಟವರು. ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ,
ಪತ್ನಿಯ ಕೊಂದು ತಲೆ ಫ್ರಿಡ್ಜ್ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಸಾವು
ಗುವಾಹಟಿಯ ಹತಿಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ತಲೆ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿದ್ದಾನೆ. ರಾಮಾನುಜ್ ಗೋಸ್ವಾಮಿ (30) ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಾತ, ಗುವಾಹಟಿಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮುಗಿಸಿ
ಅಕ್ರಮ ಸಂಬಂಧ ಬಯಲು: ಚಿಕ್ಕಮ್ಮ-ಮಗ ಆತ್ಮಹತ್ಯೆ
ಚಿಕ್ಕಮ್ಮ ಮತ್ತು ಮಗ ಹೊಂದಿದ್ದ ಅಕ್ರಮ ಸಂಬಂಧ ಬಯಲಾಗುತ್ತಲೇ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಸಂಕನೂರು ಬೆಟ್ಟದಲ್ಲಿ ಮಹಿಳೆ ಮತ್ತು ಆಕೆಯ ಅಕ್ಕನ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಇವರಿಬ್ಬರು ಪರಸ್ಪರ
ಪ್ರೀತಿಸಿ ಮದುವೆ: ಪತ್ನಿ ತೊರೆದಳೆಂದು ಯುವಕ ಆತ್ಮಹತ್ಯೆ
ಪ್ರೀತಿಸಿ ಮದುವೆಯಾಗಿದ್ದ ಯುವತಿ ಪೋಷಕರ ಒತ್ತಾಯಕ್ಕೆ ಮಣಿದು ತನ್ನನ್ನು ತೊರೆದುಹೋದಳೆಂದು ನೊಂದ ಯುವಕ ಹಾವೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 24 ವರ್ಷದ ಮಂಜುನಾಥ್ ಅಗಡಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಎರಡು ವರ್ಷಗಳಿಂದ ಹಾವೇರಿಯ ಯುವತಿಯನ್ನು ಪ್ರೀತಿಸುತ್ತಿದ್ದ ಮಂಜುನಾಥ, ಇತ್ತೀಚೆಗೆ ದೇವಸ್ಥಾನವೊಂದರಲ್ಲಿ
ವಿದ್ಯಾರ್ಥಿಗಳಿಗೆ ಕಳಪೆ ಶೂ: ಲೋಕಾಯುಕ್ತ ತನಿಖೆ
ರಾಜ್ಯ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂ ಪೂರೈಕೆ ಬಗ್ಗೆ ಮಾಧ್ಯಮ ವರದಿ ಪರಿಗಣಿಸಿದ ಲೋಕಾಯುಕ್ತ ಸ್ವಯ ಪ್ರೇರಿತ ದೂರು ದಾಖಲಿಸಿಕೊಂಡಿದೆ. ವಿದ್ಯಾ ವಿಕಾಸ ಯೋಜನೆಯಡಿ ರಾಜ್ಯದ 36.56 ಲಕ್ಷ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ ಸಾಕ್ಸ್ ವಿತರಿಸಲು 72
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ವಿವಾಹಿತೆ ಮತ್ತು ಯುವಕ
ಕಲಬುರಗಿಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರ ವಲಯದಲ್ಲಿ ಮಹಿಳೆ ಮತ್ತು ಯುವಕ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಳೆತ ಸ್ಥಿತಿಯಲ್ಲಿ ಇಬ್ಬರ ಶವ ಪತ್ತೆಯಾಗಿದೆ, ಇವರಿಬ್ಬರು ಪ್ರೇಮಿಗಳೆಂಬ ಶಂಕೆ ವ್ಯಕ್ತವಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಎಡಿಜಿಪಿ ಕಂಪನಿಯಿಂದ ಕಿಕ್ಬ್ಯಾಕ್: ಸತೀಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಆರೋಪ
ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ತೀವ್ರಗೊಳಿಸಿದ್ದು, ಎಡಿಜಿಪಿ ಕಂಪನಿಯಿಂದ ಕಿಕ್ಬ್ಯಾಕ್ ಪಡೆದಿರುವ ಆರೋಪವೂ ಕೇಳಿಬಂದಿದೆ. ಜಾರಕಿಹೊಳಿ ನಿವಾಸದಲ್ಲಿ ಪಿಡಬ್ಲ್ಯುಡಿ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆ ದಾಖಲೆಗಳನ್ನು ಪರಿಶೀಲಿಸಲು ಇಡಿ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಮದುವೆಯಾಗೆಂದು ಒತ್ತಾಯಿಸಿದ ಪ್ರೇಯಸಿಯ ಕೊಲೆ
ಮದುವೆಯಾಗುವಂತೆ ಒತ್ತಾಯಿಸಿದ ಪ್ರೇಯಸಿಯನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಡೆದಿದ್ದು, ಮೂರು ತಿಂಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಪ್ರೇಯಸಿಯನ್ನು ಕೊಲೆ ಮಾಡಿರುವ ಆರೋಪಿಯು ಆಕೆಯ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣ
ಪಾರ್ಶ್ವವಾಯು ಪೀಡಿತ ವ್ಯಕ್ತಿಯ ಕೊಲೆಗೈದ ಪತ್ನಿ, ಪ್ರಿಯಕರ, ಅತ್ತೆ
ಪಾರ್ಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದದಿದ ವ್ಯಕ್ತಿಯನ್ನು ಪತ್ನಿ, ಆಕೆಯ ಪ್ರಿಯಕರ ಮತ್ತು ಅತ್ತೆ ಸೇರಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್ನಲ್ಲಿ ನಡೆದಿದೆ. ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಬಾರಕ್ (40) ಕೊಲೆಯಾದ ವ್ಯಕ್ತಿ, ಎರಡು ವರ್ಷದಿಂದ ಪಾರ್ಶ್ವವಾಯುಪೀಡಿತರಾಗಿ




