ಅಪರಾಧ
ಪುತ್ತೂರಿನ ಯುವಕ ಬೆಂಗಳೂರಲ್ಲಿ ಸಾವು: ಸಿಗರೇಟ್, ಪುಡ್ ಪಾಯಿಸನ್, ಅಸ್ತಮಾ ಕಾರಣವೇ?
ಪುತ್ತೂರಿನ ಯುವಕನೊಬ್ಬ ಕೊಡಗಿನ ಯುವತಿ ಜೊತೆ ಬೆಂಗಳೂರಿನ ಮಡಿವಾಳ ಲಾಡ್ಜ್ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ. ಈ ಸಾವಿಗೆ ಫುಡ್ ಪಾಯ್ಸನ್ ಅಥವಾ ಅತಿಯಾದ ಸಿಗರೇಟ್ ಸೇವನೆ ಕಾರಣವೇ ಅಥವಾ ಅವರ ಕುಟುಂಬವನ್ನು ಬಾಧಿಸುತ್ತಿದ್ದ ಅಸ್ತಮಾ ಕಾರಣ ಇರಬಹುದೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ತಕ್ಷಿತ್ ಮೃತದೇಹ ಪತ್ತೆಯಾದಾಗ ರೂಮ್ ನಲ್ಲಿ ಸಿಗರೇಟ್ ತುಂಡುಗಳು ಪತ್ತೆಯಾಗಿದ್ದವು, ಅತಿಯಾದ ಸಿಗರೇಟ್ ಸೇವನೆಯಿಂದ ಸಾವು ಸಂಭವಿಸಿರಬಹುದು, ತಕ್ಷಿತ್ ಕುಟುಂಬದಲ್ಲಿ ಕೆಲವರಿಗೆ ಅಸ್ತಮಾ
ಡಾ. ಕೃತಿಕಾ ಕೊಲೆ ಪ್ರಕರಣ: ಮಹೇಂದ್ರ ರೆಡ್ಡಿ ಖುದ್ದು ಡ್ರಗ್ಸ್ ಖರೀದಿ
ಬೆಂಗಳೂರಿನಲ್ಲಿ ವೈದ್ಯೆಯಾಗಿದ್ದ ಪತ್ನಿ ಕೃತಿಕಾ ರೆಡ್ಡಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ವೈದ್ಯ ಮಹೇಂದ್ರ ರೆಡ್ಡಿ ಪೊಲೀಸ್ ವಿಚಾರಣೆಯಲ್ಲಿ ತಾನು ಆಕೆಗೆ ಅನಸ್ತೇಷಿಯಾ ನೀಡಿ ಕೊಲೆ ಮಾಡಿರುವುದಾಗಿ ಈಗಾಗಲೇ ಒಪ್ಪಿಕೊಂಡಿದ್ದಾನೆ. ತಾನೇ ಖುದ್ದಾಗಿ ಮೆಡಿಕಲ್ ಶಾಪ್ಗೆ ತೆರಳಿ ಡ್ರಗ್ಸ್ ಖರೀದಿಸಿರುವುದಾಗಿಯೂ ಪೊಲೀಸರಿಗೆ
ಯಲ್ಲಾಪುರದಲ್ಲಿ ಬಸ್ ಮರಕ್ಕೆ ಡಿಕ್ಕಿ: ಬಸ್ಸಲ್ಲೇ ಸಿಲುಕಿತು ಚಾಲಕನ ಮುರಿದ ಕಾಲು
ಮುಂಬೈಯಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ಕಾಲು ಮುರಿದು ಬಸ್ನಲ್ಲೇ ಸಿಕ್ಕಿಕೊಂಡ ಘಟನೆ ಯಲ್ಲಾಪುರದ ಹಳಿಯಾಳ ಕ್ರಾಸ್ ಬಳಿ ನಡೆದಿದೆ. ಸ್ಥಳೀಯರು ಮತ್ತು ಪೊಲೀಸರು ಧಾವಿಸಿ ಚಾಲಕನನ್ನು ರಕ್ಷಣೆ ಮಾಡಿದ್ದಾರೆ, ಘಟನೆಯಲ್ಲಿ
ದರ್ಶನ್ಗೆ ಮತ್ತೆ ಬೆನ್ನು ನೋವು: ಹೀಟಿಂಗ್ ಬೆಲ್ಟ್ ಗೆ ಜೈಲು ವೈದ್ಯರ ಮನವಿ
ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೆ ಬೆನ್ನುನೋವು ಹೆಚ್ಚಾದ ಹಿನ್ನೆಲೆಯಲ್ಲಿ ಹೀಟಿಂಗ್ ಬೆಲ್ಟ್ ಒದಗಿಸಲು ಜೈಲಿನ ವೈದ್ಯಾಧಿಕಾರಿಗಳು ಪತ್ರ ಬರೆದಿದ್ದಾರೆ. ಕಾರಾಗೃಹ ಆಸ್ಪತ್ರೆಯ ಮುಖ್ಯ ವೈದ್ಯರು, ಸಿ.ವಿ.ರಾಮನ್ ನಗರ ಆಸ್ಪತ್ರೆ ವೈದ್ಯಕೀಯ
ಹಾಸನಾಂಬೆ ದರ್ಶನ ಪಡೆದು ವಾಪಸಾಗುತ್ತಿದ್ದ ಮೂವರು ಅಪಘಾತಕ್ಕೆ ಬಲಿ
ಹಾಸನಾಂಬೆಯ ದರ್ಶನ ಪಡೆದುಕೊಂಡು ವಾಪಸಾಗುತ್ತಿದ್ದ ಎರಡು ಬೈಕ್ಗಳಿಗೆ ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿಕಾವಲು ಫಾರೆಸ್ಟ್ ಬಳಿ ಕಾರು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಬೈಕ್ನಲ್ಲಿದ್ದ ಇಬ್ಬರು ಅಸು ನೀಗಿದ್ದಾರೆ. ಸ್ನೇಹಿತ ಬಸವರಾಜು ಜೊತೆಯಲ್ಲಿ ಬೆಂಗಳೂರಿನಿಂದ ಯಮಹಾ
ಹೆಲ್ಮೆಟ್ ಧರಿಸದ ಬೈಕ್ ಸವಾರ ಅಪಘಾತಕ್ಕೆ ಬಲಿ: ಪರಿಹಾರ ಮೊತ್ತ ಕಡಿತಗೊಳಿಸಿದ ಹೈಕೋರ್ಟ್
ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್, ಅಪಘಾತ ವೇಳೆ ಬೈಕ್ ಸವಾರ ಹೆಲ್ಮೆಟ್ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ. ಹೆಲ್ಮೆಟ್ ಧರಿಸದೆ ಇರುವುದು ಬೈಕ್ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್, ನಿಗದಿಪಡಿಸಿದ ಒಟ್ಟು
ಚನ್ನಪಟ್ಟಣದಲ್ಲಿ ನೀರಿನ ಟಬ್ಗೆ ಬಿದ್ದು ಮಗು ಸಾವು
ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನೀರಿನ ಟಬ್ ಒಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಯ ಪುತ್ರಿ ಖುಷಿ ಮೃತ ಪಟ್ಟ ದುರ್ದೈವಿ. ಮಗು ಆಟವಾಡುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಅಸು
ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಸುಸೈಡ್: ಸಿಇಒ ಸೇರಿ ಇಬ್ಬರ ವಿರುದ್ಧ ಎಫ್ಐಆರ್
ಬೆಂಗಳೂರಿನಲ್ಲಿ ಓಲಾ ಕಂಪನಿ ಸಿಬ್ಬಂದಿ ಅನಾಮಾನಸ್ಪದವಾಗಿ ಮೃತಪಟ್ಟಿರುವ ಪ್ರಕರಣ ಸಂಬಂಧ ಓಲಾ ಎಲೆಕ್ಟ್ರಿಕ್ ಕಂಪನಿ ಸಿಇಒ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಇಒ ಭವೇಶ್, ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ವಿರುದ್ಧ ಕೇಸ್ ದಾಖಲಾಗಿದೆ. ಕಂಪನಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್
ಪತ್ನಿಯ ಶೀಲ ಶಂಕಿಸಿ ಕೊಲೆ: ವಿದ್ಯುತ್ ಶಾಕ್ನಿಂದ ಸಾವು ಎಂದು ನಂಬಿಸಿದ್ದ ಪತಿ
ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮರಗೊಂಡನಹಳ್ಳಿಯಲ್ಲಿ ಶೀಲ ಶಂಕಿಸಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪರಾರಿಯಾಗಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮರಗೊಂಡನಹಳ್ಳಿಯಲ್ಲಿ ವಾಸವಿದ್ದ ನಿವಾಸಿ ಪ್ರಶಾಂತ್ ಬಂಧಿತ, ಮೂರು ದಿನಗಳ ಹಿಂದೆ ಪತ್ನಿ ರೇಷ್ಮಾಳನ್ನು ಕೊಂದು ತಪ್ಪಿಸಿಕೊಂಡಿದ್ದ. ಮೃತ ರೇಷ್ಮಾಳ
ಯಾದಗಿರಿ ಕಾಟನ್ ಮಿಲ್ನಲ್ಲಿ ಪಡಿತರ ಅಕ್ಕಿ, ಜೋಳ ಆಯ್ತು, ಈಗ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆ
ಯಾದಗಿರಿ ಕಾಟನ್ ಮಿಲ್ನಲ್ಲಿ ಪಡಿತರದ ಅನ್ನಭಾಗ್ಯ ಅಕ್ಕಿ, ಜೋಳ ಆಯ್ತು, ಈಗ ಕ್ಷೀರ ಯೋಜನೆಯಡಿ ಶಾಲೆಗಳಿಗೆ ಪೂರೈಕೆಯಾಗುವ ಶಾಲಾ ಮಕ್ಕಳ ಹಾಲಿನ ಪೌಡರ್ ಪತ್ತೆಯಾಗಿದೆ. ಗುರುಮಠಕಲ್ ಪಟ್ಟಣದ ಹೊರಭಾಗದ ನಾರಾಯಣಪುರ ಗ್ರಾಮದ ಶ್ರೀ ಲಕ್ಷ್ಮಿ ತಿಮ್ಮಪ್ಪ ವೇರ್ ಹೌಸ್ ಹಾಗೂ ಶ್ರೀ