Menu

ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಬಾಲಕ ಆತ್ಮಹತ್ಯೆ

ಯಾದಗಿರಿಯಲ್ಲಿ ಶಿಕ್ಷಕರು ಬೈದರೆಂದು ಮನ ನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಪವನ್ (15) ಆತ್ಮಹತ್ಯೆ ಮಾಡಿಕೊಂಡ ಒಂಬತ್ತನೇ ತರಗತಿಯ ವಿದ್ಯಾರ್ಥಿ. ಶಾಲೆ ಆವರಣದ ಹಿಂಭಾಗದಲ್ಲಿರುವ ಗಿಡಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ತಂದೆ ಮಲ್ಲಪ್ಪ ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು

ಕುಕಿ ಪ್ರೇಯಸಿ ಭೇಟಿಗೆ ಬಂದ ಮೈಥಿಯಿ ಪ್ರಿಯಕರನ ಗುಂಡಿಕ್ಕಿ ಕೊಲೆ: ಮಣಿಪುರ ಮತ್ತೆ ಉದ್ವಿಗ್ನ

ಕುಕಿ ಸಮುದಾಯದ ತನ್ನ ಪ್ರೇಯಸಿಯ ಭೇಟಿಗಾಗಿ ಬಂದಿದ್ದ ಮೈಥಿಯಿ ಯುವಕನ ಕೈಕಾಲು ಕಟ್ಟಿ ಹಾಕಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಣಿಪುರದ ಚುರಾಚಂದ್‌ಪುರದಲ್ಲಿ ನಡೆದಿದೆ. ಈ ಘಟನೆಯಿಂದಾಗಿ ಮಣಿಪುರ ಮತ್ತೆ ಉದ್ವಿಗ್ನಗೊಂಡಿದೆ. ಮಣಿಪುರವು ಕುಕಿ ಹಾಗೂ ಮೈಥಿಯಿ ಸಮುದಾಯಗಳ ನಡುವಿನ ಸಂಘರ್ಷದಿಂದ

ಬಳ್ಳಾರಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ

ಬಳ್ಳಾರಿಯಿಂದ  ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 523 ಚೀಲ ಪಡಿತರ ಅಕ್ಕಿಯನ್ನು ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ  ತಂಡ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡನ ಒಳ ಆವರಣದಲ್ಲಿ ತಡೆ ಹಿಡಿದಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ

ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್‌ ಮಾಡಿಕೊಂಡ ಪತಿ

ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್

ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲವೆಂದು ಹೆಂಡತಿಯ ಕಿರಿಕಿರಿ: ಕೊಲೆಗೈದು ಹೃದಯಾಘಾತ ಕತೆ ಕಟ್ಟಿದ ಗಂಡ

ಬೆಳಗಾವಿಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ (21) ಕೊಲೆಯಾಗಿದ್ದು, ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಆರೋಪಿ. ಪತ್ನಿಯನ್ನು

ಮನೆಯವರ ವಿರೋಧವಿದ್ದರೂ ಮದುವೆ: ಯುವ ಜೋಡಿಯನ್ನು ಹತ್ಯೆಗೈದ ಕುಟುಂಬ

ಮನೆಯವರ ವಿರೋಧದ ನಡುವೆಯೇ ಮದುವೆಯಾಗಿದ್ದ ಯುವ ಜೋಡಿಯನ್ನು ಯುವತಿಯ ಸಹೋದರರು ಕೊಂದು ಹೊಲದಲ್ಲಿ ಹೂತು ಹಾಕಿರು ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ  ನಡೆದಿದೆ. ಈ ಜೋಡಿ ಕೊಲೆಗೆ ಸಂಬಂಧಿಸಿದಂತೆ ಯುವತಿಯ ಸೋದರರನ್ನು ಬಂಧಿಸಲಾಗಿದೆ. ಕಾಜಲ್‌ ಮತ್ತು ಆಕೆಯ ಸಂಗಾತಿ ಅರ್ಮಾನ್‌

ಪುಸ್ತಕದ ರಟ್ಟಿನಲ್ಲಿ ಬಚ್ಚಿಟ್ಟಿದ್ದ 38.60 ಕೋಟಿ ಮೌಲ್ಯದ ಕೊಕೇನ್ ವಶ

ಬೆಂಗಳೂರು: ಬ್ರೆಜಿಲ್‌ನ ಸಾವೊ ಪಾಲೊದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 38.60 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ

ರಾಜ್ಯದ ಪ್ರತಿಷ್ಠಿತ ಸ್ವಾಮೀಜಿ ಬಳಿ 1 ಕೋಟಿಗೆ ಬ್ಲಾಕ್ ಮೇಲ್: ಮಹಿಳೆ ಅರೆಸ್ಟ್

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ರಾಜೀವ್​ ಗೌಡ ಬೆದರಿಕೆ: ಎಫ್​​ಐಆರ್​ ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದ ಎಫ್​​ಐಆರ್​ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್​​ ಮುಖಂಡ ರಾಜೀವ್​ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​​ ವಜಾಗೊಳಿಸಿದೆ. ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಬಗ್ಗೆ ಆದೇಶ ನೀಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ರಾಜೀವ್‌ ಗೌಡ ಮತ್ತಷ್ಟು

ಗಂಡನ ಮೇಲಿನ ಕೋಪಕ್ಕೆ ಮಗುವನ್ನೇ ಕೊಂದ ಮಹಾತಾಯಿ

ಪತಿ ತಡವಾಗಿ ಮನೆಗೆ ಬಂದಿದ್ದಕ್ಕೆ ಜಗಳವಾಡಿದ ತಾಯಿ 18 ತಿಂಗಳ ಮಗುವನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಡೆದಿದೆ. ಪತಿ ನೀಡಿದ ದೂರಿನ ಅನ್ವಯ ಪೊಲೀಸರು ಮಗುವನ್ನು ಕೊಂದ ಆರೋಪಿ ತಾಯಿ ಅಶ್ವಿನಿಯನ್ನು ಬಂಧಿಸಿದ್ದಾರೆ. ಪತಿ ಮನೆಗೆ