Menu

ಪೊಕ್ಸೋ ಆರೋಪಿಯ ಕೊಲೆ: ಬಾಲಕಿಯ ತಂದೆ ಸೇರಿ ಮೂವರ ಬಂಧನ

ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಯುವಕನನ್ನು ಬಾಲಕಿಯ ತಂದೆಯೇ ಕೊಲೆಗೈದಿರುವ ಘಟನೆ ಯಲಹಂಕ ಬಳಿ ನಡೆದಿದೆ.  ರಮೇಶ್‌ ಕೊಲೆಯಾದ ಯುವಕ. ಆತ ಬೆಂಗಳೂರಿನಲ್ಲಿ ಫುಡ್​​ ಡೆಲಿವರಿ ಕೆಲಸ ಮಾಡುತ್ತಿದ್ದ, ಯಲಹಂಕದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ. ರಾಜಕಾಲುವೆಯಲ್ಲಿ ಶವ ಪತ್ತೆಯಾದ ಬಳಿಕ ಪೊಲೀಸರು ತನಿಖೆ ನಡೆಸಿ ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿಯ ತಂದೆ, ಚಿನ್ನಯ್ಯ ಮಾತಪತಿ (29), ಚೇತನ ಮದಾರ (26) ಮತ್ತು ವಿನಾಯಕ ಗುರುವ (19)

ವ್ಯಾಪಾರದಲ್ಲಿ ನಷ್ಟ: ಸಚಿವ ಜಮೀರ್‌ ಮನೆಯಲ್ಲಿ ಚಿನ್ನ ಕದ್ದ ಸಂಬಂಧಿಕ

ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಒಂದು ಕೋಟಿ ರೂ. ಮೌಲ್ಯದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಎಂಬುದು ಪತ್ತೆಯಾಗಿದೆ. ತಿಂಗಳ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ

ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಗೈದ ಜ್ಯೋತಿಷಿ

ಬೆಂಗಳೂರಿನಲ್ಲಿ ಪೂಜೆ, ಮಾಟ, ಮಂತ್ರ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿರುವ ಮಹಿಳೆಯುಇ ಜ್ಯೋತಿಷಿ ವಿರುದ್ಧ ಸಿ‌.ಕೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆಯೇ ಜ್ಯೋತಿಷಿ ಮೋಹನ ಕುಮಾರು ಪರಾರಿಯಾಗಿದ್ದಾನೆ.

ಹುಣಸಿಕಟ್ಟಿ ಗ್ರಾಮದಲ್ಲಿ‌ ಏಳು ಕುಟುಂಬಕ್ಕೆ ಬಹಿಷ್ಕಾರ: ಜಮಖಂಡಿ ಠಾಣೆಯಲ್ಲಿ ದೂರು ದಾಖಲು

ಹನುಮಂತ ದೇವರ ಪಟ್ಟಿ ಕೊಡದ ಹಿನ್ನೆಲೆ ಜಮಖಂಡಿ ತಾಲೂಕಿನ ಹುಣಸೀಕಟ್ಟಿ ಗ್ರಾಮದ 7 ಕುಟುಂಬಸ್ಥರಿಗೆ ಬಹಿಷ್ಕಾರ ವಿಚಾರಕ್ಜೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಂಗುರ ಸಾರಿದ ವ್ಯಕ್ತಿ ಪ್ರಭು ಹೂಗಾರ ಹಾಗೂ ಗ್ರಾಮದ ಇತರರು ಎಂದು ಜಮಖಂಡಿ ಕಂದಾಯ

ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಎಂಟು ಮಂದಿ ಸಾವು

ಬೆಂಗಳೂರಿನಲ್ಲಿ ಧಾರಾಕಾರ ಸುರಿದ ಮಳೆಗೆ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ ಎಂಟು ಮಂದಿ  ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಕೆಲವರು ಪಾದಚಾರಿಗಳು ಇರಬಹುದು ಎಂಬ ಅನುಮಾನವಿದೆ.  ಗೋಡೆ

ಕಡೂರಿನಲ್ಲಿ ಕೌಟುಂಬಿಕ ಕಲಹಕ್ಕೆ ನೊಂದು ಎಸ್‌ಐ ಪತ್ನಿ ಆತ್ಮಹತ್ಯೆ

ಚಿಕ್ಕಮಗಳೂರಿನ ಕಡೂರು ತಾಲೂಕಿನ ಬೀರೂರಲ್ಲಿ ಕೌಟುಂಬಿಕ ಕಲಹದಿಂದ ನೊಂದು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮಾ (34) ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್- ಪದ್ಮಾ ಪ್ರೀತಿಸಿ