Menu

ಪ್ರಜ್ವಲ್‌ ರೇವಣ್ಣ ವಿರುದ್ಧ ಸಾಕ್ಷಿಗೆ ಬೆದರಿಕೆ ಆರೋಪ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿರುವುದಾಗಿ ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಮತ್ತು ತನ್ನ ಮಗನ ಸುರಕ್ಷತೆ ಬಗ್ಗೆ ಆತಂಕ ಹೊಂದಿರುವುದಾಗಿ ತಿಳಿಸಿದ್ದಾರೆ. ಹೊಳೆನರಸೀಪುರದ 43 ವರ್ಷದ ಸಮಾಜ ಸೇವಕಿ ಜುಲೈ 6, 2026ರಂದು ಪ್ರಾಸಿಕ್ಯೂಷನ್ ಸಾಕ್ಷಿ-4 ಆಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ದಾಖಲಿಸಿದ್ದರು. ಸಾಕ್ಷಿಯು ಬೆದರಿಕೆ

ಹನೂರು ಎನ್‌ಕೌಂಟರ್‌: ಬಲಿಯಾದವರು ಬೇಟೆಗಾರರು ಎಂದು‌ ಸಾಕ್ಷಿ ನೀಡಿದ ಅರಣ್ಯ ಇಲಾಖೆ

ಹನೂರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಎನ್‌ಕೌಂಟರ್‌ಗೆ ಬಲಿಯಾಗಿರುವ ಪ್ರಕರಣದ ತನಿಖೆ ಮುಂದುವರಿದಿದ್ದು, ಎನ್‌ಕೌಂಟರ್‌ನಲ್ಲಿ ಸತ್ತಿರುವ ಮೂವರು ಬೇಟೆಗೆ ಹೋಗಿದ್ದವರು, ದನ ಮೇಯಿಸಲು ಹೋಗಿದ್ದವರು ಅಲ್ಲ ಎಂದು ಇಲಾಖೆ ಸಾಕ್ಷಿ ಸಮೇತ ಹೇಳಿದೆ. ಸ್ಥಳದಲ್ಲಿ ಸಿಕ್ಕ ಬ್ಯಾಗ್​, ಮಾಂಸ, ಅಡುಗೆ

ಬೆಂಗಳೂರಿನಲ್ಲಿ ಕಾರೊಳಗೆ ಒಂಬತ್ತು ಕೋಟಿ ಅಕ್ರಮ ನಗದು ಪತ್ತೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಕಾರು ತಡೆದು ತಪಾಸಣೆ ನಡೆಸಿದ ಪೊಲೀಸರು ಒಂಬತ್ತು ಕೋಟಿ ರೂಪಾಯಿ ಅಕ್ರಮ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಆದಾಯ ಇಲಾಖೆ ಅಧಿಕಾರಿಗಳು ನೀಡಿದ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ

ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನಲ್ಲಿ ಉರುಳಿ ಇಬ್ಬರ ಸಾವು

ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಹಿರಿಯೂರಿನ ಐಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಚರಂಡಿಗೆ  ಉರುಳಿ, ಇಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ 20 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಬಸ್ ಚಾಲಕ ಗುರುಪ್ರಸಾದ್ ಹಾಗೂ ಕ್ಲೀನರ್ ಶಂಕರ್ ಎಂದು ಗುರುತಿಸಲಾಗಿದೆ. ಒಬ್ಬ ಪ್ರಯಾಣಿಕನ

ಬಿಡದಿ ನಕಲಿ ಔಷಧಿ ಜಾಲಕ್ಕೆ ಐದು ರಾಜ್ಯಗಳ ಲಿಂಕ್‌

ಬೆಂಗಳೂರಿನ ಬಿಡದಿಯಲ್ಲಿ ಪತ್ತೆಯಾಗಿರುವ ನಕಲಿ ಔಷಧಿ ಪೂರೈಕೆ ಜಾಲದ ಆಳ, ಅಗಲ ಜಾಲಾಡುತ್ತಿರುವ ತನಿಖಾ ತಂಡವು ಈ ಹಗರಣದಲ್ಲಿ ಐದು ರಾಜ್ಯಗಳ ಲಿಂಕ್‌ ಇರುವುದನ್ನು ಪತ್ತೆ ಹಚ್ಚಿದೆ. ಹಿಮಾಚಲ ಪ್ರದೇಶ, ತೆಲಂಗಾಣ, ದೆಹಲಿ, ಚೆನ್ನೈ, ಆಂಧ್ರಪ್ರದೇಶ ರಾಜ್ಯಗಳೊಂದಿಗೆ ಈ ನಕಲಿ ಔಷಧಿ

ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ವಿವಾಹಿತೆ ಆತ್ಮಹತ್ಯೆ

ಹುಚ್ಚು ಪ್ರೇಮಿಯ ಕಾಟಕ್ಕೆ ಬೇಸತ್ತ ವಿವಾಹಿತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾನಗರದ ಲಕ್ಷ್ಮೀಪುರಂನಲ್ಲಿ ನಡೆದಿದೆ.  ಕವಿತಾ (21) ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಹಳೆಯ ಪ್ರೇಮಿ ಕಿರಣ್‌ ಎಂಬಾತನನ್ನು ಪೊಲೀಸರು

ಪತಿ ಮನೆಯವರ ಕಿರುಕುಳ: ಪ್ರೀತಿಸಿ ಮದುವೆಯಾಗಿದ್ದ ಮಹಿಳೆ ಮಗು ಕೊಂದು ಆತ್ಮಹತ್ಯೆ

ಪತಿ ಮನೆಯವರು ಕಿರುಕುಳ ನೀಡಿ, ಮನೆಯಿಂದ ಹೊರ ಹಾಕಿದ್ದಕ್ಕೆ ನೊಂದ ಮಹಿಳೆ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಆಲೂರು ಹೌಸಿಂಗ್‌ ಬೋರ್ಡ್‌ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಗಳು ಮತ್ತು ಮಗುವಿನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಮಗು ಆರ್ಯನ್

ಹನೂರು ಎನ್‌ಕೌಂಟರ್‌: ಪ್ರತೀಕಾರಕ್ಕೆ ಹತ್ತು ಎಕರೆ ಅರಣ್ಯ ಭಸ್ಮ

ಹನೂರು ಅರಣ್ಯಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ ಮೂವರು ಬಲಿಯಾಗಿರುವುದಕ್ಕೆ ಪ್ರತೀಕಾರವಾಗಿ ಸ್ಥಳೀಯರು ಮಲೆ ಮಹದೇಶ್ವರ ವನ್ಯಜೀವಿಧಾಮದ ಹತ್ತು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಎನ್‌ಕೌಂಟರ್ ಬಳಿಕ ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರ, ಕಾವೇರಿ ಹಾಗೂ ಮಲೆ

ಲಿಂಗಸುಗೂರಿನಲ್ಲಿ ಮಹಿಳೆಯ ಶವ ಪತ್ತೆ: ರೇಪ್‌ ಅಂಡ್‌ ಮರ್ಡರ್‌ ಶಂಕೆ

ಲಿಂಗಸುಗೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕರಡಕಲ್ ಗ್ರಾಮದ ತಿಪ್ಪಣ್ಣ ಬಜಲರ ಅವರ ಪತ್ನಿ ರಾಣೆಮ್ಮ (35) ಎಂಬವರು ಶವವಾಗಿ ಪತ್ತೆಯಾಗಿದ್ದು,  ಈ ಸಾವು ಅನುಮಾನಗಗಳಿಗೆ ಕಾರಣವಾಗಿದೆ. ಅತ್ಯಾಚಾರ ನಡೆಸಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.  ಜಾಲಿಬೆಂಚಿ ಗ್ರಾಮದ ಮಾರ್ಗ ಮಧ್ಯದ ಹೊಲವೊಂದರಲ್ಲಿ  ಈ

ಷೇರು ಮಾರುಕಟ್ಟೆಯಲ್ಲಿ ನಷ್ಟ: ದಾವಣಗೆರೆ ಕುಟುಂಬದ ನಾಲ್ವರು ನಾಪತ್ತೆ

ದಾವಣಗೆರೆಯಿಂದ ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದು, ಮೊಬೈಲ್‌ಗಳು ಸ್ವಿಚ್ಡ್‌ ಆಫ್‌ ಆಗಿವೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯ ನಿವಾಸಿ ರಮೇಶ್ ಕುಮಾರ್ (38), ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ