ಅಪರಾಧ
ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ
ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಿತ್ನೂರು ಗ್ರಾಮದ ಸುಜಾತಾ (34), ನಾಗಪ್ಪ (58), ಕೊಟ್ರೇಶ್ (28) ಹಾಗೂ ತಿಮ್ಮಲಾಪುರದ ದುರ್ಗಪ್ಪ (55) ಮೃತಪಟ್ಟವರು. ಮಗ ಕೊಟ್ರೇಶನಿಗಾಗಿ ಹುಡುಗಿಯನ್ನು ನೋಡಲು ತಂದೆ ನಾಗಪ್ಪ
ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು
ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ
ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು
ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು
ಪ್ರೀತಿ, ಸೆಕ್ಸ್, ಮದುವೆ ಭರವಸೆಯಿತ್ತು ಜಿಎಸ್ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾತ ಅರೆಸ್ಟ್
ಬೆಂಗಳೂರಿನಲ್ಲಿ ಜಿಎಸ್ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್ ಎಂದು ನಂಬಿಸಿ ಬಳಿಕ ಬ್ಲ್ಯಾಕ್ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನದಿಂದ ವಜಾ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತೀರ್ಪು ನೀಡಿದ್ದು, ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ 19ನೇ ಆರೋಪಿ ಚನ್ನಕೇಶವ
ಪೋಕ್ಸೋ ಆರೋಪಿಗೆ ಡಿಫಾಲ್ಟ್ ಜಾಮೀನು ಸಿಗಲ್ಲ: ಕರ್ನಾಟಕ ಹೈಕೋರ್ಟ್
ಪೋಕ್ಸೋ ಕಾಯ್ದೆಯಡಿ ಪ್ರಕರಣದ ತನಿಖೆ ವಿಳಂಬವಾದರೂ ಆರೋಪಿಗಳಿಗೆ ಶಾಸನಬದ್ಧ ಜಾಮೀನು ಲಭಿಸುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಿಎನ್ಎಸ್ಎಸ್ 193(2)ಅಡಿ ಈ ರಕ್ಷಣೆಗೆ ಆರೋಪಿಗಳು ಅರ್ಹರಲ್ಲ. ಅಪೂರ್ಣ ಚಾರ್ಜ್ಶೀಟ್ ಕೂಡ ಜಾಮೀನು ಪಡೆದುಕೊಳ್ಳಲು ಕಾರಣವಾಗುವುದಿಲ್ಲ. ಪೋಕ್ಸೋ ಕಾನೂನು ಸಂತ್ರಸ್ತರ
ವಾಸ್ತು ಹೆಸರಲ್ಲಿ ಲೈಂಗಿಕ ದೌರ್ಜನ್ಯ: ಮಹಿಳೆ ದೂರು, ಗುರೂಜಿ ಪ್ರತಿದೂರು
ಬೆಂಗಳೂರಿನ ವಿಜಯನಗರದ `ಶ್ರೀ ಅನಂತ್ ಮೆಡಿಕಲ್ ಸಲ್ಯೂಷನ್ಸ್’ನಲ್ಲಿ ವಾಸ್ತು ಹೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಗರ್ಭಿಣಿ ದೂರು ನೀಡಿದ್ದು, ಹಣಕ್ಕೆ ಬೇಡಿಕೆಯಿಟ್ಟು ಕೇಸ್ ಹಾಕುವುದಾಗಿ ಆಕೆ ಬೆದರಿಸಿದ್ದಾರೆಂದು ಗುರೂಜಿ ಎನ್ನಲಾದ ವ್ಯಕ್ತಿ ಪ್ರತಿ ದೂರು ದಾಖಲಿಸಿದ್ದಾರೆ. ಏ.4ರಂದು ಶ್ರೀ ಅನಂತ್
ಸುರಪುರದಲ್ಲಿ ಬಸ್ ಕಾರು ಡಿಕ್ಕಿ: ಏಳು ಮಂದಿ ಸಜೀವ ದಹನ
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಂಚರಿಸುತ್ತಿದ್ದ ಕಾರು ನಡುವೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸಜೀವ ದಹನಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ
ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು
ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ
ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ: ಮಹಿಳೆ ಸಾವು ಪ್ರಕರಣದಲ್ಲಿ ವೈದ್ಯರ ವಿರುದ್ಧ ಎಫ್ಐಆರ್
ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆ ಬಳಿಕ 21 ವರ್ಷದ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ನಿರ್ಲಕ್ಷ್ಯತನ ಆರೋಪದಡಿ ಕೇಸ್ ದಾಖಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ಗಂಭೀರ ಸಮಸ್ಯೆಗಳಿಂದಾಗಿ ಮಹಿಳೆ ಮೃತಪಟ್ಟಿದ್ದಾರೆ. ಕಳೆದ ವರ್ಷ ಮಾರ್ಚ್




