Menu

ಸರ್ಕಾರಿ ನಿಧಿ ದುರುಪಯೋಗ: ಶ್ರೀಲಂಕಾ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅರೆಸ್ಟ್‌

ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸರ್ಕಾರಿ ನಿಧಿ ದುರುಪಯೋಗ ಆರೋಪದಡಿ ಅಪರಾಧ ತನಿಖಾ ಇಲಾಖೆ ಬಂಧಿಸಿದೆ. 2023 ರ ಸೆಪ್ಟೆಂಬರ್‌ನಲ್ಲಿ ಬ್ರಿಟಿಷ್ ವಿಶ್ವವಿದ್ಯಾಲಯವೊಂದರಲ್ಲಿ ನಡೆದ ತಮ್ಮ ಪತ್ನಿ ಪ್ರೊಫೆಸರ್ ಮೈತ್ರೀ ವಿಕ್ರಮಸಿಂಘೆ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು, ಇಂಗ್ಲೆಂಡ್‌ಗೆ ಪ್ರಯಾಣಿಸಲು ಸಾರ್ವಜನಿಕ ಹಣವನ್ನು ಬಳಸಿದ್ದಾರೆ ಎಂದು ವಿಕ್ರಮಸಿಂಘೆ ವಿರುದ್ಧ ಆರೋಪ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಕ್ರಮಸಿಂಘೆ ಅವರನ್ನು ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುತ್ತಿದ್ದೇವೆ ಎಂದು

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ: ವೀರೇಂದ್ರ ಪಪ್ಪಿ ಇಡಿ ವಶಕ್ಕೆ

ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪದಡಿ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಿಕ್ಕಿಂನಲ್ಲಿ ಶಾಸಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.

ಗಿರೀಶ್ ಮಟ್ಟಣ್ಣನವರ್‌ ಸೇರಿದಂತೆ ಹಲವರ ವಿರುದ್ಧ ಎಫ್ಐಅರ್

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಗಿರೀಶ್ ಮಟ್ಟಣ್ಣನವರ್‌ ಸೇರಿದಂತೆ ಹಲವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಬ್ರಹ್ಮಾವರ ಪೊಲೀಸರು ಬಂದಿದ್ದಾಗ ಗಿರೀಶ್ ಮಟ್ಟಣ್ಣನವರ್‌, ಜಯಂತ್‌ ಮತ್ತು ಇತರರು ಪೊಲೀಸರಿಗೆ ಅಡ್ಡಿಪಡಿಸಿದ್ದರು ಎಂಬ ಆರೋಪದಡಿ

ಪೊಲೀಸರ ಸಮ್ಮುಖದಲ್ಲೇ ಮುಸ್ಲಿಮರ ವಿರುದ್ಧ ಮರುಳಾರಾಧ್ಯ ಸ್ವಾಮೀಜಿ ಅವಾಚ್ಯ ನಿಂದನೆ?

ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಯಾಗಿರುವ ಮರುಳಾರಾಧ್ಯ ಸ್ವಾಮೀಜಿಯದ್ದು ಎನ್ನಲಾದ ಆಡಿಯೋ ವೈರಲ್ ಆಗಿ ಸದ್ದು ಮಾಡುತ್ತಿದೆ. ಮಾಂಸದ ವ್ಯಾಪಾರಿ ಜೊತೆ ಸ್ವಾಮೀಜಿ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಮುಸ್ಲಿಂ ಸಮುದಾಯ ವಿರುದ್ಧ

ಮಂಡ್ಯದಲ್ಲಿ ಚಿನ್ನ ಕಳ್ಳತನ ನೋಡಿದ್ದ ವ್ಯಕ್ತಿಯ ಹತ್ಯೆ: ಪ್ರಮುಖ ಆರೋಪಿಗೆ ಪೊಲೀಸ್‌ ಫೈರಿಂಗ್‌

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಮಹಾಲಕ್ಷ್ಮಿ ಜ್ಯುವೆಲ್ಲರಿಯಲ್ಲಿ ಕಳ್ಳತನ‌ ಮಾಡುವಾಗ ನೋಡಿದ್ದ ಪಕ್ಕದ ಹೋಟೆಲ್ ಮಾಲೀಕ ಮಾದಪ್ಪ ಎಂಬವರನ್ನು ಉಸಿರುಗಟ್ಟಿಸಿ ಕೊಲೆಗೈದು ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್‌ ,ಆನಂದ್ , ಶರತ್, ಶ್ರೀನಿವಾಸ್ ,ಕೃಷ್ಣಾಚಾರಿ ಇತರ ಬಂಧಿತ ಆರೋಪಿಗಳು, ಇವರು

ಧರ್ಮಸ್ಥಳ: ಯೂಟ್ಯೂಬರ್‌ ಸಮೀರ್‌ ಬಂಧನ ಸಾಧ್ಯತೆ

ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸಿರುವ ಆರೋಪದಡಿ ಧರ್ಮಸ್ಥಳ ಪೊಲೀಸರು ಯೂಟ್ಯೂಬರ್‌ ಸಮೀರ್‌ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬನ್ನೇರುಘಟ್ಟದಲ್ಲಿರುವ ಸಮೀರ್ ಬಾಡಿಗೆ ಮನೆಯನ್ನು ಪೊಲೀಸರು ಸುತ್ತುವರಿದಿದ್ದು, ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಧರ್ಮಸ್ಥಳ ಕ್ಷೇತ್ರದ ಕುರಿತು ಅಪಪ್ರಚಾರ ನಡೆಸಿರುವುದಾಗಿ

ಹಾಸನದ ಯುವಕನ ಬಲಿ ಪಡೆದ ರೀಲ್ಸ್‌ ಹುಚ್ಚು

ಹಾಸನದ ಅರಕಲಗೂಡು ತಾಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ರೀಲ್ಸ್ ಹುಚ್ಚಿಗೆ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ರೀಲ್ಸ್‌ಗಾಗಿ ಟ್ರ್ಯಾಕ್ಟರ್ ಅನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದಾಗ ಅದು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಯುವಕ ಸ್ಥಳದಲ್ಲೇ ಅಸು ನೀಗಿದ್ದಾನೆ. ಮೃತನನ್ನು ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಎಂದು

ಹೈದರಾಬಾದ್‌ನಲ್ಲಿ ಕಲಬುರಗಿ ಕುಟುಂಬದ ಐವರ ಶಂಕಾಸ್ಪದ ಸಾವು

ಹೈದರಾಬಾದ್‌ನ ಮಿಯಾಪುರ ಮಕ್ತಾ ಮಹಬೂಬ್‌ಪೇಟೆಯಲ್ಲಿ ಕಲಬುರಗಿಯ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ನರಸಿಂಹ (60), ವೆಂಕಟಮ್ಮ (55), ಅನಿಲ್ (32), ಕವಿತಾ (24), ಮತ್ತು

ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಫೇಸ್‌ಬುಕ್‌ನಲ್ಲಿ ವೀಡಿಯೊ ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು

ಹಿಂದೂ ಯುವಕರು ಮುಸ್ಲಿಂ ಯುವತಿಯರ ಮದುವೆಯಾದರೆ 5 ಲಕ್ಷ: ಶಾಸಕ ಯತ್ನಾಳ್‌ ವಿರುದ್ಧ ಮತ್ತೊಂದು ದೂರು

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ಜಾರಿಗೊಳಿಸುವುದಾಗಿ ಹೇಳಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಹಿಂದೂ-ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ