Menu

ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್‌: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ

ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು‌ ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು ಭೀಕರವಾಗಿ ಕೊಲೆ ಮಾಡಿ ಸುಟ್ಟಿದ್ದ ಎಂಬುದು ತಿಳಿದು ಬಂದಿದೆ. ಜೂನ್​ 24 ರಂದು ಮಳವಳ್ಳಿಯ ಜವನಹಳ್ಳಿಗುಡ್ಡದ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿತ್ತು. ಮೊದಲಿಗೆ

ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ

ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ.  25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು

ನಿವೃತ್ತ ಅಧಿಕಾರಿಯಿಂದ ಅನ್ಯಾಯವೆಂದು ಆರೋಪಿಸಿ ಮಗು ಜೊತೆ ಮಹಿಳೆ ಆತ್ಮಹತ್ಯೆ ಯತ್ನ

ಬೆಂಗಳೂರಿನ ದೊಡ್ಡಕಮ್ಮನಹಳ್ಳಿಯಲ್ಲಿ ಮಹಿಳೆಯೊಬ್ಬರು ನಾಲ್ಕು ವರ್ಷದ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಬೇಕೆಂದು ಪಟ್ಟು ಹಿಡಿದಿದ್ದ ತಾಯಿ-ಮಗುವನ್ನು ಪೊಲೀಸರು ಮನವೊಲಿಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಿವೃತ್ತ ಐಎಎಸ್‌ ಅಧಿಕಾರಿ, ಸ್ಥಳೀಯ ಯುವಕನಿಂದ ಅನ್ಯಾಯವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಅವರನ್ನು

ಶ್ರೀರಂಗಪಟ್ಟಣದಲ್ಲಿ 200 ಎಕರೆ ಸರ್ಕಾರಿ ಜಮೀನು ಕಬಳಿಕೆ: ಅಧಿಕಾರಿಗಳು ಸೇರಿ 9 ಮಂದಿ ಅರೆಸ್ಟ್‌

ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ವೆ ನಂಬರ್ 411ರಲ್ಲಿರುವ 200 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿರುವ ಪ್ರಕರಣವೊಂದು ಬಯಲಾಗಿದೆ. ತಾಲೂಕಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕ ಮೊಹಮ್ಮದ್ ಹುಸೇನ್ ಈ ಹಗರಣದಲ್ಲಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ

ಸಾಲ ಬಾಧೆ: ಬಾಗಲಕೋಟೆಯಲ್ಲಿ ಚಿನ್ನ ವ್ಯಾಪಾರಿ ಕುಟುಂಬ ಆತ್ಮಹತ್ಯೆ

ಸಾಲ ಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿಗಳಾದ 54 ವರ್ಷದ ಪ್ರಕಾಶ್ ರಾಯ್ಕರ್, ಪತ್ನಿ 46 ವರ್ಷದ ಪ್ರಭಾ ರಾಯ್ಕರ್ ಹಾಗೂ  21 ವರ್ಷದ ಪುತ್ರ ಶಶಾಂಕ್ ರಾಯ್ಕರ್ ಸ್ವಗೃಹದಲ್ಲೇ ಆತ್ಮಹತ್ಯೆ

ಲಕ್ಷ್ಮೀ ದೇವಿಗೆ ಅವಮಾನ: ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ದೂರು

ಲಕ್ಷ್ಮೀ ದೇವಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಜ್ಯೋತಿಷಿ ಆರ್ಯವರ್ಧನ್ ವಿರುದ್ಧ ಮೇಲೆ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರ್ಯವರ್ಧನ್‌ ಕರ್ನಾಟಕ ಗೋವು ರಕ್ಷಕರ ಸೇನೆಯು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಮಹಿಳೆಯರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ

ತಲಘಟ್ಟಪುರದಲ್ಲಿ ಪಾರ್ಟಿ ಎಂದು ಕರೆಸಿ ಯುವತಿಯ ಅತ್ಯಾಚಾರ: ಐವರ ಬಂಧನ

ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಯುವಕರುಯುವತಿಗೆ ಮೊದಲೇ ಪರಿಚಯವಿದ್ದರು ಎನ್ನಲಾಗಿದೆ. ಸೋಮಶೇಖರ್ ಎಂಬಾತ, ಕಲಬುರ್ಗಿಯಿಂದ ನಮ್ಮ ಸ್ನೇಹಿತರು ಬಂದಿದ್ದಾರೆ ಎಂದು ಹೇಳಿ

ಕೃಷ್ಣಾ ನದಿಗೆ ಉರುಳಿದ್ದ ಟಿಪ್ಪರ್‌ ಒಳಗೆ ಚಾಲಕನ ಶವ ಪತ್ತೆ

ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಜ್ಯದ ಅತಿ ಉದ್ದದ ಕೊರ್ತಿ–ಕೋಲ್ಹಾರ ಸೇತುವೆ ಮೇಲೆ ಮೂರು ದಿನಗಳ ಹಿಂದೆ  ಟಿಪ್ಪರ್ ಮತ್ತು ಕಾರು ಡಿಕ್ಕಿಯಾಗಿ  ನಿಯಂತ್ರಣ ತಪ್ಪಿದ ಟಿಪ್ಪರ್  ಕೃಷ್ಣಾ ನದಿಗೆ ಬಿದ್ದಿತ್ತು.  ಆ ಟಿಪ್ಪರ್‌ ಅನ್ನು ಕ್ರೇನ್‌  ಮೂಲಕ ಮೇಲಕ್ಕೆ ಎತ್ತಲಾಗಿದ್ದು, ಒಳಭಾಗದಲ್ಲಿ

ನಟ ದರ್ಶನ್‌ ಜಾಮೀನು ಆದೇಶ ಮರುಪರಿಶೀಲನೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಮೇ 15 ರಂದು ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಸುಪ್ರೀಂ ಕೋರ್ಟ್ ನೀಡಿದ್ದ ಅದೇಶ ಮರು ಪರಿಶೀಲನೆ ಮಾಡುವಂತೆ ಕೋರಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಜೈಲಿನಲ್ಲಿರುವ ದರ್ಶನ್‌ ಇನ್ನೂ

ಅಕ್ರಮ ಆಸ್ತಿ ಕೇಸ್‌ ರದ್ದು ಕೋರಿ ಕೆಎಸ್‌ ಈಶ್ವರಪ್ಪ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾ

ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ