Menu

ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹಲ್ಲೆಗೆ ವಿದ್ಯಾರ್ಥಿ ಬಲಿ: ಪೋಷಕರ ಆರೋಪ

ಬೆಂಗಳೂರು ನಗರ ಹೊರವಲಯದ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ಗುರುಕಿರಣ್ ಮೃತ ವಿದ್ಯಾರ್ಥಿ. ಕಾಡಯರಪ್ಪನಹಳ್ಳಿ ಬಳಿಯ ಸ್ಟರ್ಲಿಂಗ್ ಇಂಗ್ಲಿಷ್ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಜುಲೈ ಎಂಟರಂದು ಬೆಲಗ್ಗೆ ಗುರುಕಿರಣ್‌ಗೆ ಆರೋಗ್ಯ ಸರಿಯಿಲ್ಲ

ಬೆಳ್ತಂಗಡಿಯಲ್ಲಿ ಬಿಎಲ್​ಒಗೆ ಜಾತಿ ನಿಂದನೆ: ಕೇಸ್ ದಾಖಲು

ಎಸ್​​ಐಆರ್​​​ಗೆ ಮತದಾರರ ಮನೆಗೆ ತೆರಳಿದ್ದ ಬಿಎಲ್​​​​ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ. ಬಿಎಲ್​​​​ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಲಾಗಿದ್ದು, ಅಟ್ರಾಸಿಟಿ ಕೇಸ್ ದಾಖಲಾಗಿದೆ. ಎಸ್ಐಆರ್

ಅಕ್ರಮ ಆಸ್ತಿ ಗಳಿಕೆ: ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಕೃಷ್ಣ ಭಾಗ್ಯ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ನಾನಾ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ

ಕೌಟುಂಬಿಕ ಕಲಹ: ರಾಜಿ ಮಾಡಿಸಲು ಬಂದಿದ್ದ ಮಾವ, ಪತ್ನಿಯ ಕೊಲೆ 

ಹೆಂಡತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿತ್ಯ ಜಗಳವಾಡುತ್ತಿದ್ದ ಪತಿಯೊಬ್ಬ, ರಾಜಿ ಪಂಚಾಯಿತಿ ಮಾಡಲು ಬಂದಿದ್ದ ಮಾವನೊಂದಿಗೆ ತನ್ನ ಪತ್ನಿಯನ್ನು ಕೂಡ  ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ನಡೆದಿದೆ. ನಾಗಲಕ್ಷ್ಮೀ (24) ಹಾಗೂ  ತಂದೆ ಶ್ರೀನಿವಾಸ

ಅಕ್ರಮ ಸಂಬಂಧಕ್ಕೆ ಅಡ್ಡಿ: ಟಾಯ್ಲೆಟ್‌ ಕ್ಲೀನರ್‌ ಇಂಜೆಕ್ಟ್‌ ಮಾಡಿ ಗಂಡನ ಕೊಲೆಗೈದ ಪತ್ನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ನರ್ಸ್‌ವೊಬ್ಬಳು ಟಾಯ್ಲೆಟ್‌ ಕ್ಲೀನರ್‌ ಇಂಜೆಕ್ಟ್‌ ಮಾಡಿ ಗಂಡನ ಕೊಲೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದರು. ಪತ್ನಿ ಸಂಧ್ಯಾ ಮತ್ತು

ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ

ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ ಗಂಡು ಮಗುವಿನ ಅಳುವಿನ ಧ್ವನಿ ಕೇಳಿ, ಕುರಿಗಾಹಿಯೊಬ್ಬರು ಸ್ಥಳಕ್ಕೆ ಬಂದು ಮಗುವನ್ನು ರಕ್ಷಿಸಿದ್ದಾರೆ.

ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶವ ಇಂದು ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಗಿದೆ. ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಮೀಪದ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದ ತೇಜು

ಮಳವಳ್ಳಿಯಲ್ಲಿ ಕರಕಲಾದ ಶವ ಪತ್ತೆ ಕೇಸ್‌: ವಿವಾಹಿತೆ ಜೊತೆ ಸ್ನೇಹ, ಕೊಲೆ, ಆತ್ಮಹತ್ಯೆ

ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪದ ಸತ್ತೆಗಾಲ ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರಹಸ್ಯವನ್ನು ಬಯಲಿಗೆಳೆಯುವುದರಲ್ಲಿ ಯಶಸ್ವಿಯಾಗಿದ್ದಾರೆ. ನಳಿನಿ ಸುಟ್ಟು ಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ಪ್ರಿಯಕರ ತಮಿಳುನಾಡು‌ ಉಪ್ಪಾರಹಳ್ಳಿಯ ರಾಜಶೇಖರ್ ಆಕೆಯನ್ನು

ಚಿಂತಾಮಣಿಯಲ್ಲಿ ಪತ್ನಿ, ನಾದಿನಿಯ ಕೊಲೆಗೈದು ವ್ಯಕ್ತಿ ಪರಾರಿ

ಪತ್ನಿ ಮತ್ತು ಆಕೆಯ ತಂಗಿಯನ್ನು ಕೊಲೆ ಮಾಡಿ ವ್ಯಕ್ತಿಯಿ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ನಗರದ ಜೆಜೆ ಕಾಲೊನಿಯಲ್ಲಿ ನಡೆದಿದೆ.  25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು

ನಿವೃತ್ತ ಅಧಿಕಾರಿಯಿಂದ ಅನ್ಯಾಯವೆಂದು ಆರೋಪಿಸಿ ಮಗು ಜೊತೆ ಮಹಿಳೆ ಆತ್ಮಹತ್ಯೆ ಯತ್ನ

ಬೆಂಗಳೂರಿನ ದೊಡ್ಡಕಮ್ಮನಹಳ್ಳಿಯಲ್ಲಿ ಮಹಿಳೆಯೊಬ್ಬರು ನಾಲ್ಕು ವರ್ಷದ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಬೇಕೆಂದು ಪಟ್ಟು ಹಿಡಿದಿದ್ದ ತಾಯಿ-ಮಗುವನ್ನು ಪೊಲೀಸರು ಮನವೊಲಿಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ನಿವೃತ್ತ ಐಎಎಸ್‌ ಅಧಿಕಾರಿ, ಸ್ಥಳೀಯ ಯುವಕನಿಂದ ಅನ್ಯಾಯವಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಅವರನ್ನು