Tuesday, February 24, 2026
Menu

ಮಗಳ ಲವ್‌ ಮ್ಯಾರೇಜ್‌ಗೆ ಸಹಕರಿಸಿದ ಯುವಕರ ಮೇಲೆ ತಂದೆಯಿಂದ ಮಾರಣಾಂತಿಕ ಹಲ್ಲೆ

ಮಂಡ್ಯದ ಕೆಆರ್‌ ಪೇಟೆ ತಾಲೂಕಿನ ಬೊಮ್ಮಾಲಪುರ ಗ್ರಾಮದಲ್ಲಿ ಮಗಳ ಲವ್ ಮ್ಯಾರೇಜ್‌ಗೆ ಸಹಾಯ ಮಾಡಿದ್ದಕ್ಕೆ ಯುವಕರ ಮೇಲೆ ತಂದೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಸೈಜ್​ ಕಲ್ಲಿನಿಂದ ಕಾಲು ಜಜ್ಜಿ, ವಿವಸ್ತ್ರಗೊಳಿಸಿ ಗುಂಪು ಹಲ್ಲೆ ನಡೆಸಿ ವೀಡಿಯೊ ಮಾಡಿಕೊಂಡ ಘಟನೆ ನಡೆದಿದೆ. ಈಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಬೊಮ್ಮಾಲಪುರ ಗ್ರಾಮದ ನಿಂಗಣ್ಣ ಅವರ ಮಗಳು ಪ್ರೀತಿಸಿ ಮದುವೆಯಾಗಿದ್ದಳು. ಇದಕ್ಕೆ ಸಹಾಯ ಮಾಡಿದ್ದ ಯುವಕ

ಮಾಜಿ ಐಪಿಎಸ್‌ ಭಾಸ್ಕರ್‌ ರಾವ್‌ ಸೋದರಳಿಯ ನಾಪತ್ತೆ

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಸೋದರ ಅಳಿಯ ಅನಿರುದ್ಧ್ ರಮೇಶ್ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಾಮಾಜಿಕ ಜಾಲತಾಣಗಳ ಬಳಕೆದಾರರಿಂದ ಸಹಾಯ ಕೋರಿದ್ದಾರೆ. ಭಾಸ್ಕರ್ ರಾವ್ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಅನಿರುದ್ಧ್ ದಕ್ಷಿಣ ಬೆಂಗಳೂರಿನ ಪ್ರತಿಷ್ಠಿತ

ಅನ್ಯ ಕೋಮಿನ ಬಾಲಕರಿಂದ ವಿದ್ಯಾರ್ಥಿಯ ಕೊಲೆ: ಶಿವಮೊಗ್ಗದಲ್ಲಿ ಹೈ ಅಲರ್ಟ್‌

ಶಿವಮೊಗ್ಗ ತಾಲೂಕಿನ ಊರಗಡೂರಿನಲ್ಲಿ ಸೂಳೆಬೈಲು ಸರಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ (15) ಎಂಬಾತನನ್ನು ಅನ್ಯಕೋಮಿನವರು ಹತ್ಯೆ ಮಾಡಿರುವ ಪ್ರಕರಣ ಜಿಲ್ಲೆಯನ್ನು ಉದ್ವಿಗ್ನಗೊಳಿಸಿದ್ದು, ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಹಲ್ಲೆಗೈದ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ

ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ದಕ್ಷಿಣ ಕನ್ನಡದ ವಿಟ್ಲ ಠಾಣೆ ವ್ಯಾಪ್ತಿಯ ಕೊಡಂಗಾಯಿ ಕೆರೆಯಲ್ಲಿ ಮೂರುಕಜೆ ಎಂಬಲ್ಲಿನ ಮೈತ್ರೆಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಬೆಂಗಳೂರಿನ ವೈಗ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡವರು. ಆಕೆ ಫೆ. 22ರಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಲಾಗಿತ್ತು. ಕೆರೆಯಲ್ಲಿ ಮೃತದೇಹ

ಮೆಡಿಕಲ್‌ ಓದಲು ಒತ್ತಾಯಿಸಿದ ತಂದೆಯನ್ನು ಗುಂಡಿಕ್ಕಿ ಕೊಂದ ಮಗ

ಉತ್ತರಪ್ರದೇಶದ ಮೀರತ್‌ನಲ್ಲಿ ಯುವಕನೊಬ್ಬ ತಂದೆಯನ್ನು ಗುಂಡಿಕ್ಕಿ ಕೊಂದು ತುಂಡು ಮಾಡಿ ದೇಹದ ಭಾಗಗಳನ್ನು ವಿಲೇವಾರಿ ಮಾಡಿರು ಪ್ರಕರಣವೊಂದು ಬಯಲಾಗಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆ ಎಂದು ದೂರು ದಾಖಲಾಗಿತ್ತು. ಅವರ ಮನೆಗೆ

ವೃದ್ಧೆಯ ಕೊಲೆಗೈದು ಚಿನ್ನ ದೋಚಿದ್ದ ಆನ್‌ಲೈನ್‌ ಗೇಮ್‌ ವ್ಯಸನಿ ಅರೆಸ್ಟ್‌

ದಾವಣಗೆರೆಯ ನ್ಯಾಮತಿ ತಾಲೂಕಿನ ಆರುಂಡಿ ಗ್ರಾಮದಲ್ಲಿ ಸಾಲ ತೀರಿಸಲು ವೃದ್ಧೆಯೊಬ್ಬರನ್ನು ಹತ್ಯೆ ಮಾಡಿ ಚಿನ್ನ ದೋಚಿದ್ದ ಪ್ರಕರಣದಲ್ಲಿ ಆನ್‌ಲೈನ್‌ ಗೇಮ್‌ ವ್ಯಸನಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ (23) ಬಂಧಿತ. ಆರೋಪಿಯನ್ನು ಬಂಧಿಸಿರುವ ಪೊಲೀಸರು

ಹೆಲ್ಮೆಟ್‌ ಧರಿಸದೆ ಗೆಳತಿಯರ ಬುಲೆಟ್‌ ಜಾಲಿ ರೈಡ್‌: ಹಂಪ್ಸ್‌ನಲ್ಲಿ ಬಿದ್ದು ಒಬ್ಬಾಕೆ ಸಾವು

ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಯುವತಿಯರಿಬ್ಬರು ಹೆಲ್ಮೆಟ್‌ ಧರಿಸದೆ ಬುಲೆಟ್‌ ಬೈಕ್‌ನಲ್ಲಿ ಜಾಲಿ ರೈಡ್‌ ಮಾಡುತ್ತಿದ್ದಾಗ ಹಂಪ್ಸ್‌ನಲ್ಲಿ ಹಾರಿ ಬಿದ್ದು ಒಬ್ಬಾಕೆ ಮೃತಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೆ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದಾರೆ. ಸತ್ಯಮಂಗಲ

ವಿದ್ಯಾರ್ಥಿಯ ಬ್ಯಾಂಕ್‌ ಡಿಟೇಲ್ಸ್‌ ಪಡೆದು ಸ್ನೇಹಿತ ವಂಚಿಸಿದ್ದು ಏಳು ಕೋಟಿ ರೂ.

ಸ್ನೇಹಿತನನ್ನು ನಂಬಿದ್ದ ವಿದ್ಯಾರ್ಥಿಯೊಬ್ಬ ಸೈಬರ್ ವಂಚನೆಯ ಸುಳಿಗೆ ಸಿಲುಕಿ ಏಳು ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಂದು ವರ್ಷದ ಗೆಳೆತನದಲ್ಲಿದ್ದ ವಿದ್ಯಾರ್ಥಿ ತನ್ನ ಬ್ಯಾಂಕ್ ಖಾತೆಯ ವಿವರವನ್ನು ಸ್ನೇಹಿತನೊಂದಿಗೆ ಹಂಚಿಕೊಂಡಿದ್ದರಿಂದ ಇಂಥದ್ದೊಂದು ಸಂಕಷ್ಟಕ್ಕೆ ಸಿಲುಕಿದ್ದಾನೆ. ಒಂದು ವರ್ಷದ ಹಿಂದೆ

ಸಿಎಸ್‌ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ

ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ

ಬಿಕ್ಲು ಶಿವ ಕೊಲೆ: ಬೈರತಿ ಬಸವರಾಜ್‌ಗೆ ಫೆ.26ರವರೆಗೆ ಜ್ಯುಡಿಷಿಯಲ್‌ ಕಸ್ಟಡಿ

ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರನ್ನು ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ. ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿತ್ತು. ವೈದ್ಯಕೀಯ