ಅಪರಾಧ
ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್ ದಿಶಾ ಸಾಲ್ಯಾನ್ ಸಾವು: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ
ಬಾಲಿವುಡ್ ನಟ ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲ್ಯಾನ್ ೨೦೨೦ರಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ದಿಶಾ ಅವರದು ಆತ್ಮಹತ್ಯೆಯಲ್ಲ, ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ತಂದೆ ಸತೀಶ್ ಸಾಲ್ಯಾನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಎಫ್ಐಆರ್ ದಾಖಲಿಸಿಕೊಂಡು ಸಿಬಿಐನ ಅನುಭವಿ ಅಧಿಕಾರಿಯಿಂದ ತನಿಖೆ ನಡೆಸುವಂತೆ ಆದೇಶಿಸಿದೆ. ತನಿಖೆ ಮುಗಿಯುವವರೆಗೂ ಯಾರನ್ನೂ ಆರೋಪಿ ಎಂದು ಉಲ್ಲೇಖಿಸದೆ ಘಟನೆಯ
ರೇಣುಕಾಸ್ವಾಮಿ ಕೊಲೆ: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ದಾಖಲು ಮುಂದೂಡಿದ ಕೋರ್ಟ್
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿರುವ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ೫೯ನೇ ಸಿಸಿಹೆಚ್ ಕೋರ್ಟ್ ಮುಂದೂಡಿದೆ. ಪ್ರಕರಣ ಸಂಬಂಧ ಹೈಕೋರ್ಟ್ನಲ್ಲಿ ಇನ್ನೂ ಆದೇಶ ಹೊರ ಬಂದಿಲ್ಲವಾದ್ದರಿಂದ ವಿಚಾರಣೆಗೆ ಹೆಚ್ಚಿನ ಸಮಯ ನೀಡಬೇಕು, ಪ್ರದೋಷ್ ಹೇಳಿಕೆ ದಾಖಲಿಸುವ
40 ವರ್ಷದ ಬಳಿಕ ಐವಿಎಫ್ ಮೂಲಕ ಪಡೆದ ಅವಳಿ ಕಂದಮ್ಮಗಳ ಕೊಂದ ತಾಯಿ
ನಲ್ವತ್ತು ವರ್ಷದ ಬಳಿಕ ಮಹಿಳೆ ಐವಿಎಫ್ ಮೂಲಕ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಅವು ತನ್ನ ಖಾಸಗಿತನಕ್ಕೆ ಅಡ್ಡಿಯಾಗುತ್ತವೆ ಎಂದು ಕತ್ತು ಹಿಚುಕಿ ಸಾಯಿಸಿರುವ ದಾರುಣ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. ಉಮಾದೇವಿ ಪುಟಾಣಿ ಅವಳಿ ಹೆಣ್ಣುಮಕ್ಕಳ ಕೊಲೆಗೈದ ತಾಯಿ.
ಸಾವಿನಲ್ಲಿ ಅಂತ್ಯ ಕಂಡ ಅಮ್ಮ-ಮಗಳ ಜಗಳ
ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿ ಸಮೀಪ ಕೆಂಪರಾಜಮೊಟ್ಟೆ ಕಾಲೊನಿಯಲ್ಲಿ ಅಮ್ಮ ಮತ್ತು ಮಗಳ ಜಗಳವು ಇಬ್ಬರ ಸಾವಿನಲ್ಲಿ ಕೊನೆಯಾಗಿದೆ. ೧೪ ವರ್ಷದ ಪ್ರಿಯಾಂಕ ಮತ್ತು ೪೫ ವರ್ಷದ ತಾಯಿ ಪ್ರೇಮಾ ಮೃತಪಟ್ಟವರು. ಕರಿಕೆಯಲ್ಲಿರುವ ಆಶ್ರಮ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕ ಮನೆಗೆ ತಡವಾಗಿ
ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಗದಗದ ರೋಣ ತಾಲೂಕಿನ ಇಟಗಿ ಕ್ರಾಸ್ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ರೋಣ ತಾಲೂಕಿನ
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಎಂಟು ಮಕ್ಕಳು ಸೇರಿ 11 ಜನ ಸಾವು
ಉತ್ತರಪ್ರದೇಶದ ಪ್ರಯಾಗ್ರಾಜ್ ಮತ್ತು ಕೌಶಂಬಿ ಗಡಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದುರಂತಕ್ಕೆ ಬಲಿಯಾದವರಲ್ಲಿ ಎಂಟು ಮಕ್ಕಳೂ ಸೇರಿದ್ದಾರೆ. ಕಾರ್ಖಾನೆಯ ಸಮೀಪವಿರುವ ಮನೆಗಳಲ್ಲಿ ವಾಸವಿದ್ದ ಮಕ್ಕಳು ಸ್ಫೋಟದಲ್ಲಿ ಅಸು ನೀಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ
ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು
ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ
ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ
ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು
ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್ ಹೋಗಿ ಶಾಲೆಗೆ ತೆರಳಬೇಕೆಂದು ರೈಲು
ಚಿಕನ್ ಪೀಸ್ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಪಾರ್ಟಿಯಲ್ಲಿ ಚಿಕನ್ಪೀಸ್ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್




