Menu

ಬೆಂಗಳೂರಿನಲ್ಲಿ ಸ್ನೇಹಿತನಿಂದ ಕೊಲೆಯಾದ ಆಂಧ್ರದ ಯುವತಿ

ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ಆಂಧ್ರಪ್ರದೇಶದ ಬಿಬಿಎಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸ್ನೇಹಿತನೇ ಕೊಲೆ ಮಾಡಿದ್ದಾನೆ. ದೇವಿಶ್ರೀ(21) ಕೊಲೆಯಾದ ಯುವತಿ ಎಂದು ಗುರುತಿಸಲಾಗಿದೆ. ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ನಿವಾಸಿಯಾಗಿರುವ ದೇವಿಶ್ರೀ ಕಳೆದ ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ದೇವಿಶ್ರೀ ರೆಡ್ಡಪ್ಪ, ಜಗದಂಭ ದಂಪತಿಯ ಕೊನೆಯ ಮಗಳು ಭಾನುವಾರ ಯುವತಿ ತನ್ನ ಸ್ನೇಹಿತನೆಂದು ಹೇಳಲಾದ ಪ್ರೇಮ್ ವರ್ಧನ್ ಎಂಬಾತನ ಜೊತೆ ಇನ್ನೊಬ್ಬಳು ಸ್ನೇಹಿತೆಯ ರೂಮಿಗೆಹೋಗಿದ್ದಳು. ಅಲ್ಲಿ ಆಕೆಯ

ಆನ್ ಲೈನ್ ನಲ್ಲಿ ಅಧಿಕ ಲಾಭದ ಆಮೀಷವೊಡ್ಡಿ ಉದ್ಯಮಿಗೆ 46.50 ಲಕ್ಷ ರೂ. ವಂಚನೆ: ನಾಲ್ವರು ಬ್ಯಾಂಕ್ ಸಿಬ್ಬಂದಿ ಅರೆಸ್ಟ್

ಫಾರೆಕ್ಸ್ ಟ್ರೇಡಿಂಗ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ಉದ್ಯಮಿಗೆ 46.5 ಲಕ್ಷ ರೂ. ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ನಾಲ್ವರನ್ನು ಉತ್ತರ ಕನ್ನಡದ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಹೊನ್ನಾವರದ ಪ್ರಭಾತನಗರದ ನಿವಾಸಿ ಗಿರೀಶ್ (35) ಫೇಸ್‌ಬುಕ್‌ನಲ್ಲಿ ಟ್ರೇಡಿಂಗ್

ಪಾಕ್‌ ಅರಸೇನಾಪಡೆ ಕಚೇರಿ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ: ಆರು ಸಾವು

ಪಾಕಿಸ್ತಾನದ ಪೇಶಾವರದಲ್ಲಿರುವ ಅರೆಸೇನಾ ಪಡೆಯ ಪ್ರಧಾನ ಕಚೇರಿಯ ಮೇಲೆ ಆತ್ಮಾಹುತಿ ಬಾಂಬ್​ ದಾಳಿ ನಡೆದಿದ್ದು, ದಾಳಿ ಹಾಗೂ ನಂತರದ ಕಾರ್ಯಾಚರಣೆಯಲ್ಲಿ ಒಟ್ಟು 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಅಸು ನೀಗಿದವರಲ್ಲಿ ಮೂವರು ಉಗ್ರರು ಹಾಗೂ ಮೂವರು ಭದ್ರತಾ ಸಿಬ್ಬಂದಿ ಸೇರಿದ್ದಾರೆ. ಪ್ಯಾರಾಮಿಲಿಟರಿ

ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಮಧುಗಿರಿ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಮಧು (38) ಎಂಬ ವ್ಯಕ್ತಿ ಬೈಕ್ ಸಮೇತ ಶವವಾಗಿ ಪತ್ತೆಯಾಗಿದ್ದಾರೆ. ಮಧುಗಿರಿಯ ಹೊಸಕೆರೆ-ನೇರಳೆಕೆರೆ ರಸ್ತೆಯಲ್ಲಿರುವ ಲಕ್ಷ್ಮೀದೇವಿಪುರ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದೆ. ಇವರು ಕಾಣೆಯಾಗಿದ್ದ ಬಗ್ಗೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ನ್ಯಾಯಾಂಗ ಬಂಧನ ಮುಗಿದರೂ ಹಾಜರುಪಡಿಸದ ಪೊಲೀಸ್‌: ಆರೋಪಿಗೆ ಜಾಮೀನು ನೀಡಿದ ಹೈಕೋರ್ಟ್‌

ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿ ವಿಸ್ತರಣೆಗೆ ಕೋರದ ಮತ್ತು ಬಂಧಿತನನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಮುಂದೆ ಹಾಜರುಪಡಿಸದ ಕಾರಣ ಪ್ರಕರಣವೊಂದರಲ್ಲಿ ಯುವಕನಿಗೆ ಹೈಕೋರ್ಟ್‌ ಜಾಮೀನು ನೀಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಮಂಡ್ಯ ಹುಬ್ಬನಹಳ್ಳಿ ಗ್ರಾಮದ ಎಚ್‌.ವಿ.ಚರಣ್‌ ಜಾಮೀನು ಕೋರಿ ಸಲ್ಲಿಸಿದ್ದ

ಮಾಲೂರಿನಲ್ಲಿ ಬ್ರಿಡ್ಜ್‌ನಿಂದ ಉರುಳಿದ ಕಾರು: ಸ್ಥಳದಲ್ಲೇ ನಾಲ್ವರು ಯುವಕರ ಸಾವು

ಕೋಲಾರದ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಬ್ರಿಡ್ಜ್ ಬಳಿ ತಡರಾತ್ರಿ ಚೆನ್ನೈ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಬ್ರಿಡ್ಜ್‌ ಮೇಲಿನಿಂದ ಉರುಳಿ ನಾಲ್ವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟ ಯುವಕರು ಚೆನ್ನೈನವರಾಗಿದ್ದು, ಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27),

ಪೊಲೀಸ್‌ ಅಧಿಕಾರಿಗಳು, ಬ್ಯಾಂಕ್‌ ಮ್ಯಾನೇಜರ್‌ಗಳ ಮದುವೆಯಾಗಿ ಕೋಟಿ ಕೋಟಿ ದೋಚುತ್ತಿದ್ದ ಮಹಿಳೆ ಪೊಲೀಸ್‌ ಬಲೆಗೆ

ಪೊಲೀಸರು ಸೇರಿದಂತೆ ಸರ್ಕಾರಿ ಅಧಿಕಾರಿಗಳು, ಬ್ಯಾಂಕ್‌ ಮ್ಯಾನೇಜರ್‌ಗಳನ್ನು ಒಲಿಸಿ ಮದುವೆಯಾಗಿ ನಂಬಿಸುವುದು, ಮತ್ತೆ ಕೆಲವರನ್ನು ಸಂಬಂಧ ಬೆಳೆಸಿ ಬಲೆಗೆ ಬೀಳಿಸುವುದು, ಬಳಿಕ ಅವರಲ್ಲಿದ್ದ ಹಣವನ್ನೆಲ್ಲ ದೋಚುವುದನ್ನೇ ಜೀವನವನ್ನಾಗಿಸಿಕೊಂಡಿದ್ದ ಉತ್ತರ ಪ್ರದೇಶದ ಮಹಿಳೆಯೊಬ್ಬಳು ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಕೆಲವು ಬ್ಯಾಂಕ್​ ಮ್ಯಾನೇಜರ್​ ಮತ್ತು

ಬೆಂಗಳೂರಿನಲ್ಲಿ ರೈಲಿಗೆ ಸಿಲುಕಿ ಕೇರಳದ ವಿದ್ಯಾರ್ಥಿಗಳಿಬ್ಬರ ಸಾವು, ಆತ್ಮಹತ್ಯೆ ಶಂಕೆ

ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್‌ ಹೈಸ್ಪೀಡ್‌ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ, ಇದು ಆತ್ಮಹತ್ಯೆ ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಕೇರಳದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತಪಟ್ಟಿರುವ ವಿದ್ಯಾರ್ಥಿಗಳು.

ಕೋಲಾರದಲ್ಲಿ ಆಗಾಗ ತವರುಮನೆಗೆ ಹೋಗುತ್ತಿದ್ದಳೆಂದು ಪತ್ನಿಯ ಕೊಲೆಗೈದ ಪತಿ

ಕೋಲಾರದ ಜನ್ನಘಟ್ಟ ಗ್ರಾಮದಲ್ಲಿ ಆಗಾಗ ತವರು ಮನೆಗೆ ಹೋಗಿ ಬರುತ್ತಿದ್ದ ಪತ್ನಿಯ ಮೇಲೆ ಅನುಮಾನ ಪಟ್ಟ ಪತಿ ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಹೆಂಡತಿಯನ್ನು ಕುತ್ತಿಗೆ ಹಿಸುಕಿ ಕೊಂದ ಗಂಡ ಸಹಜ ಸಾವೆಂದು ಬಿಂಬಿಸಲು ಹೊರಟಿದ್ದ. ಅನುಮಾನಗೊಂಡ ಮೃತಳ ಪೋಷಕರು

ಗಾಜಾ ಮೇಲೆ ಮತ್ತೆ ಇಸ್ರೇಲ್‌ ದಾಳಿ: 24 ಪ್ಯಾಲೆಸ್ತೀನಿಯರು ಬಲಿ

ಇಸ್ರೇಲ್‌ ಗಾಜಾದ ಮೇಲೆ ಮತ್ತೆ ಡ್ರೋನ್ ಮತ್ತು ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಠ 24 ಪ್ಯಾಲೆಸ್ತೀನಿಯರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಎರಡು ವರ್ಷಗಳ ಯುದ್ಧದ ನಂತರ ಅಕ್ಟೋಬರ್ 10 ರಂದು ಇಸ್ರೇಲ್ ಮತ್ತು ಹಮಾಸ್ ನಡುವೆ ಅಮೆರಿಕ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ