ಅಪರಾಧ
ಮದುವೆ ಭರವಸೆಯಿತ್ತು ಸೆಕ್ಸ್ ಕೇಸ್: ಬಂಧನ ಕಡ್ಡಾಯವಲ್ಲ ಎಂದ ಹೈಕೋರ್ಟ್
ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಮಾಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ, ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಏಕೆಂದು ಹೈಕೋರ್ಟ್ ಪ್ರಶ್ನಿಸಿದೆ. ಇಂಥ ಬೆಳವಣಿಗೆ ತಡೆಯುವಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ. ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮದುವೆಯಾಗದೆ ವಂಚಿಸಿದ ಆರೋಪ ಸಂಬಂಧ ಅತ್ಯಾಚಾರ ಮತ್ತು ಎಸ್ಸಿಎಸ್ಟಿ ಕಾಯ್ದೆಯಡಿ ಮೂಡಿಗೆರೆ ತಾಲೂಕಿನ ಬಣಕಲ್ ಠಾಣಾ ಪೊಲೀಸರು
ಅಬಕಾರಿ ನೀತಿ ಹಗರಣ ಕೇಸ್: ಕೇಜ್ರಿವಾಲ್ ಸೇರಿ 23 ಆರೋಪಿಗಳ ಖುಲಾಸೆ, ಸಿಬಿಐಗೆ ಕೋರ್ಟ್ ತರಾಟೆ
ಅಬಕಾರಿ ನೀತಿ ಹಗರಣ ಸಂಬಂಧ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಹಾಗೂ ತೆಲಂಗಾಣದ ಎಂಎಲ್ಸಿ ಕೆ. ಕವಿತಾ ಸೇರಿದಂತೆ 23 ಆರೋಪಿ ಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಯಾವುದೇ ಸಾಕ್ಷ್ಯಗಳಿಲ್ಲದಿದ್ದರೂ ಈ ನಾಯಕರ ವಿರುದ್ಧ ದೋಷಾರೋಪ ಹೊರಿಸಿದ್ದಕ್ಕಾಗಿ
ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು
ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ
ವಾಟ್ಸಾಪ್ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ತುರುವೇಕೆರೆಯಲ್ಲಿ ವಿದ್ಯಾರ್ಥಿ ಸುಸೈಡ್
ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದ ಎನ್ನಲಾದ ಡಿಪ್ಲೊಮಾ ವಿದ್ಯಾರ್ಥಿ ಧನುಷ್ (19) ಸಾವು ಆತ್ಮಹತ್ಯೆ ಎಂಬುದು ಗೊತ್ತಾಗಿದೆ. ಗೋಪ್ಪೆನಹಳ್ಳಿ ನಿವಾಸಿಯಾದ ಧನುಷ್ ವಾಟ್ಸಾಪ್ ಮತ್ತು ಫೇಸ್ಬುಕ್ನಲ್ಲಿ ಭಾವನಾತ್ಮಕ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಟ್ಟಣದ ಸರ್ಕಾರಿ
ನಿರ್ದೇಶಕ ಅನೀಶ್ ಅಪಹರಣ, ದರೋಡೆ: ನಟಿ ಸೇರಿ 11ಆರೋಪಿಗಳ ಬಂಧನ
ನಿರ್ದೇಶಕ ಅನೀಶ್ ಅವರನ್ನು ಅಪಹರಿಸಿ ಚಿನ್ನಾಭರಣ ದೋಚಿದ್ದ ಗ್ಯಾಂಗ್ ಪೊಲೀಸ್ ಬೆಲೆಗೆ ಬಿದ್ದಿದೆ. ಭೀಮಾ ಸಿನಿಮಾ ನಟಿ ಸೇರಿ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನಿಖೆ ಮುಂದುವರಿದಿದೆ. ನಿರ್ದೇಶಕ ಅನೀಶ್ ಇತ್ತೀಚೆಗೆ
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ
ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ
ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ ನಿವಾಸಿ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ ಹೋಗುತ್ತಿದ್ದಾಗ ಜಂಪೇನಹಳ್ಳಿ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು
ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ
ಜಿಎಸ್ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ
ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ
ತಾಯಿ ಕಣ್ಣೆದುರೇ ರೌಡಿಶೀಟರ್ನ ಕೊಚ್ಚಿ ಕೊಲೆ
ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್ನಲ್ಲಿ ರೌಡಿಶೀಟರ್ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಪವನ್ ಕುಮಾರ್ (25) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.




