ಅಪರಾಧ
ಗೌರಿಬಿದನೂರಿನಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಕೊಲೆಗೈದ ಪತಿ
ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಪಾವನಿ(30) ಕೊಲೆಯಾದ ಮಹಿಳೆ. ಕೊಲೆ ಆರೋಪಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ ಹಿಂದೆ ಪಾವನಿ ಹಾಗೂ ರಾಘವೇಂದ್ರ ಮದುವೆಯಾಗಿದ್ದರು. ಇತ್ತೀಚೆಗೆ ರಾಘವೇಂದ್ರ ಊರಿಗೆ ಬಂದಿದ್ದರೂ ಮನೆಗೆ ಬರದಿರುವುದಕ್ಕೆ ಪ್ರಶ್ನಿಸಿದ ಪಾವನಿ, ಕುಡ್ಕೊಂಡು ಎಲ್ಲೋ ಬಿದ್ದಿರ್ತಿಯಾ ಮನೆಗೆ ಬರಲು ಆಗಲ್ವಾ ಎಂದಿದ್ದಾಳೆ. ರಾಘವೇಂದ್ರ ಪತ್ನಿ ಜೊತೆ ಗಲಾಟೆ ಶುರುಮಾಡಿ ವಿಕೋಪಕ್ಕೆ ಹೋಗಿದ್ದು,
ಕೋಲಾರದಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರ ಬಂಧನ
ಕೋಲಾರ ಗಲ್ ಪೇಟೆ ಪೋಲೀಸರ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಸರಣಿ ಕಳ್ಳರನ್ನು ಬಂಧಿಸಲಾಗಿದೆ. ಜುನೈದ್ ಪಾಷಾ(25), ಬಾಬಾ ಜಾನ್ (2 ) ಬಂಧಿತ ಆರೋಪಿಗಳು. ಬೇತಮಂಗಲ ಜಿಗ್ ಜಾಗ್ ಬಳಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಳ್ಳರು ಪೊಲೀಸರನ್ನು ಕಂಡು
ನಮ್ಮ ಮೆಟ್ರೋಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಸಿ ಇಮೇಲ್ ಬಂದಿದ್ದು, ಬಿಎಂಆರ್ಸಿಎಲ್ ಆತಂಕ ಎದುರಿಸುವಂತಾಗಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್ಸಿಎಲ್ (BMRCL) ಅಧಿಕೃತ ಇಮೇಲ್ಗೆ ಅಪರಿಚಿತ ವ್ಯಕ್ತಿ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿಯು ಕಳಿಸಿದ ಇ-ಮೇಲ್ನಲ್ಲಿ ತನ್ನ ವಿಚ್ಛೇದಿತ
ಕಾಂಗೋದಲ್ಲಿ ಗಣಿ ಸೇತುವೆ ಕುಸಿದು 32 ಮಂದಿ ಸಾವು
ಕಾಂಗೋ ಗಣರಾಜ್ಯದ ಲುವಾಲಾಬಾ ಪ್ರಾಂತ್ಯದ ತಾಮ್ರ ಮತ್ತು ಕೋಬಾಲ್ಟ್ ಗಣಿ ಸೇತುವೆ ಕುಸಿದು ಕನಿಷ್ಠ 32 ಮಂದಿ ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಬಿರುಸಾಗಿ ಮುಂದುವರಿದಿದೆ. ಈ ದುರಂತದ ಭೀಕರ ದೃಶ್ಯಗಳ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿವಮೊಗ್ಗದಲ್ಲಿ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ಹಲ್ಲೆ
ಶಿವಮೊಗ್ಗದ ಮಾರ್ನಮಿ ಬೈಲ್ನಲ್ಲಿ ಸ್ಥಳೀಯ ನಿವಾಸಿ ಹರೀಶ್ ಎಂಬವರ ಮೇಲೆ ನೀ ಹಿಂದೂನಾ, ಮುಸ್ಲಿಮನಾ ಎಂದು ಪ್ರಶ್ನಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ರಾತ್ರಿ ಮನೆ ಪಕ್ಕದಲ್ಲೇ ವಾಕ್ ಮಾಡುತ್ತಿದ್ದಾಗ ಬಂದ ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಿಂದೂ
ಜೂಜಿನಲ್ಲಿ ಪತ್ನಿಯ ಪಣಕ್ಕಿಟ್ಟು ಸೋಲು: ಗಂಡನ ತಂದೆ, ಸೋದರ ಸೇರಿ ಎಂಟು ಮಂದಿಯಿಂದ ಅತ್ಯಾಚಾರ
ಗಂಡನೊಬ್ಬ ಹೆಂಡತಿಯ ಪಣವಾಗಿಟ್ಟು ಜೂಜಿನಲ್ಲಿ ಸೋತ ಬಳಿಕ ಆಕೆಯ ಮೇಲೆ ಮಾವ, ಮೈದುನ ಸೇರಿ ಎಂಟು ಮಂದಿ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ ಮಹಿಳೆ ಮೀರತ್ನ ಖಿವಾಯ್ ಗ್ರಾಮದ ಡ್ಯಾನಿಶ್ ಎಂಬಾತನನ್ನು ಮದುವೆಯಾಗಿದ್ದಳು.
ತಮಿಳುನಾಡು ಸಿಎಂ ಸ್ಟಾಲಿನ್ ಸೇರಿ ನಾಲ್ವರ ನಿವಾಸಕ್ಕೆ ಬಾಂಬ್ ಬೆದರಿಕೆ ಸಂದೇಶ
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ನಟ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸಗಳನ್ನು ಗುರಿಯನ್ನಾಗಿಸಿಕೊಂಡು ಅಪರಿಚಿತ ಮೂಲಗಳಿಂದ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಡಿಜಿಪಿ ಕಚೇರಿಗೆ ಬಂದಿರುವ ಮೇಲ್ ಹಿನ್ನೆಲೆಯಲ್ಲಿ ಪೊಲೀಸರು ನಾಲ್ಕು ಸ್ಥಳಗಳಲ್ಲೂ ಶೋಧ
ಯಲಬುರ್ಗಾದಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್
ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರ ಸಮೀಪ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಆರೋಪಿಗಳು ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಸಂತ್ರಸ್ತೆ ನಾಲ್ವರ ವಿರುದ್ಧ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಹಣವಿದ್ದ ಬ್ಯಾಗ್ ಮರಳಿಸಿದ ಬೆಂಗಳೂರಿನ ಆಟೊ ಚಾಲಕ
ಬೆಂಗಳೂರಿನ ಆಟೋದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ಹಣವಿದ್ದ ಬ್ಯಾಗ್ ಅನ್ನು ಚಾಲಕ ಅವರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕಲಬುರಗಿ ಮೂಲದ ಆಟೋ ಚಾಲಕ ರಾಜು ಎಂಬವರು ತಮ್ಮ ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಹಣದ ಬ್ಯಾಗ್ ಮರಳಿಸಿದ್ದಾರೆ. ಇದೇ ಶನಿವಾರ
ಮೆಕ್ಕಾದಲ್ಲಿ ಟ್ಯಾಂಕರ್ ಡಿಕ್ಕಿಯಾಗಿ ಬಸ್ಸಿನಲ್ಲಿದ್ದ 42 ಭಾರತೀಯ ಯಾತ್ರಿಗಳು ಸಜೀವ ದಹನ
ಸೌದಿ ಅರೇಬಿಯಾದಲ್ಲಿ ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದು ಕನಿಷ್ಠ 42 ಭಾರತೀಯ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್ನಲ್ಲಿ ಈ ದುರಂತ ಸಂಬವಿಸಿದ್ದು, ಮೃತಪಟ್ಟವರಲ್ಲಿ ಮಹಿಳೆಯರು, ಮಕ್ಕಳು ಕೂಡ ಸೇರಿದ್ದಾರೆ. ಮೃತರು




