Menu

ಮಗನಿಗೆ ಅಪಘಾತ: ಪರಸ್ಪರ ದೂಷಿಸಿಕೊಂಡು ಕಾರವಾರದಲ್ಲಿ ದಂಪತಿ ಆತ್ಮಹತ್ಯೆ

ರಸ್ತೆ ಅಪಘಾತದಿಂದ ಮಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಈ ವಿಚಾರದಲ್ಲಿ ಪರಸ್ಪರ ದೂಷಿಸಿಕೊಂಡ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರವಾರ ಹೊರವಲಯದ ಶಿರವಾಡದಲ್ಲಿ ನಡೆದಿದೆ. ವಿಜಯ ವಡ್ಡರ್ (36) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿ ವೆಂಕಟೇಶ್ ವಡ್ಡರ್ (38) ಆಳೇವಾಡ–ಕೋಡಿಬಾಗ್ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ನೇಹಿತನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಮಗನಿಗೆ ಅಪಘಾತವಾಗಿ ತಲೆಗೆ ಗಾಯವಾಗಿತ್ತು. ಕೂಡಲೇ ಆತನನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಾಖಲಿಸಲಾಗಿತ್ತು. ವೈದ್ಯರು ಶಸ್ತ್ರಚಿಕಿತ್ಸೆ

ಪಾಕ್ ಜೊತೆ ನಿರಂತರ ಸಂಪರ್ಕ: ಕಲ್ಬುರ್ಗಿಯಲ್ಲಿ ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

ಪಾಕಿಸ್ತಾನದ ಜೊತೆ ನಿರಂತರ ಸಂಪರ್ಕ ಹೊಂದಿರುವುದಾಗಿ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ  ಆಧರಿಸಿ   ಭಯೋತ್ಪಾದನಾ ನಿಗ್ರಹ  ಪಡೆ  ಇಬ್ಬರನ್ನು ಕಲ್ಬುರ್ಗಿಯಲ್ಲಿ  ವಶಕ್ಕೆ ಪಡೆದುಕೊಂಡಿದೆ.  ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಕಲಬುರಗಿಯ ಅಜ್ಞಾತ ಸ್ಥಳದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಮೀರ್ ,

ಜಾಮರ್‌ ಇದ್ರೂ ಜೈಲಿನಲ್ಲಿ ಆಂಧ್ರದ ಸಿಮ್‌ ಸಕ್ರಿಯ: ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರ ವೀಕ್ಷಣೆಯಲ್ಲಿ ಪ್ರಜ್ವಲ್‌

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸಿಕೊಂಡು ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರಗಳ ವೀಕ್ಷಿಸುತ್ತಾ ಆರಾಮವಾಗಿ ಕಾಲ ಕಳೆಯುತ್ತಿರುವ ವೀಡಿಯೊ ವೈರಲ್‌ ಆಗಿದೆ. ಜೈಲಿನಲ್ಲಿ ಜಾಮರ್‌ ಅಳವಡಿಸಲಾಗಿದ್ದರೂ ಆಂಧ್ರದಲ್ಲಿ ಖರೀದಿಯಾಗಿರುವ ಏರ್‌ಟೆಲ್‌ ಸಿಮ್‌ ಪ್ರಜ್ವಲ್‌ ಬಳಸುವ ಮೊಬೈಲ್‌ನಲ್ಲಿ

ಡೇಟಿಂಗ್‌ ಆ್ಯಪ್‌: ಪುರುಷರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಯುವತಿ ವಂಚಿಸಿದ್ದು ಏಳು ಕೋಟಿ ರೂ.

ಯುವತಿ ಡೇಟಿಂಗ್‌ ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿ ಅವರೊಂದಿಗೆ ಆತ್ಮೀಯವಾಗಿರುವ ಪೋಟೊಗಳು ಹಾಗೂ ವೀಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಆರು ಕೋಟಿ ರೂ. ವಂಚಿಸಿರುವ ಪ್ರಕರಣ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಡೇಟಿಂಗ್‌

ಆನ್‌ಲೈನ್ ಗೇಮಿಂಗ್ ಚಟ: ಸಾಲ ತೀರಿಸಲಾಗದೆ ಬೆಂಗಳೂರಿನಲ್ಲಿ ಮಹಿಳೆ ಸುಸೈಡ್‌

ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೈ ತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ರಂಜಿತಾ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಲ್ಬರ್ಗದವರಾದ ರಂಜಿತಾ 10

ಹೆಬ್ಬಗೋಡಿಯಲ್ಲಿ ರಸ್ತೆ ಗುಂಡಿಗೆ ಯುವತಿ ಬಲಿ

ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಬೈಕ್‌ನಿಂದ ಯುವತಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಮೇಧಾ (32) ಮೃತಪಟ್ಟವರು. ಆಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಅಜಯ್ ಗುರು

ಜೈಲು ಸೆಲ್‌ನಲ್ಲಿ ಮೊಬೈಲ್‌, ಪೆನ್‌ಡ್ರೈವ್‌ ಪತ್ತೆ: ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್‌ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಸಿಸಬಿ ದಾಳಿ ವೇಳೆ ಮೊಬೈಲ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾಗಿದ್ದು, ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿಯೂ ಮೊಬೈಲ್ ಫೋನ್‌

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ವಂಚನೆ ಮೊತ್ತ 2,110 ಕೋಟಿ ರೂ.: ಇಡಿ

ಸಾರ್ವಜನಿಕರಿಗೆ ವಂಚನೆ ಪ್ರಕರಣದಲ್ಲಿ ಸದ್ದು ಮಾಡುತ್ತಿರುವ ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ 2,110 ಕೋಟಿ ರೂಪಾಯಿ ವಂಚಿಸಿರುವುದಾಗಿ ಇಡಿ ಪ್ರಕಟಿಸಿದೆ. ತನಿಖೆ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಶಿವಾನಂದ ನೀಲಣ್ಣವರ್ ಒಡೆತನದ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು

ಆಸ್ತಿ ಜಗಳ: ಕೋಲಾರದಲ್ಲಿ ಪತಿಯ ಕೊಲೆಗೈದ ಪತ್ನಿ

ಕೋಲಾರದ ಚೆನ್ನಸಂದ್ರ ಗ್ರಾಮದಲ್ಲಿ ಪತ್ನಿಯು ಪತಿಗೆ ನಿದ್ರೆ ಮಾತ್ರೆ ತಿನ್ನಿಸಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವ ಘಟನೆ ನಡೆದಿದೆ. ನಾರಾಯಣಸ್ವಾಮಿ (68) ಕೊಲೆಯಾದ ವ್ಯಕ್ತಿ, ಪತ್ನಿ ಜಗದಾಂಭ (58) ಕೊಲೆ ಮಾಡಿದಾಕೆ. ಇವರಿಬ್ಬರು ಪ್ರತ್ಯೇಕವಾಗಿಯೇ ವಾಸಿಸುತ್ತಿದ್ದರು. ಹೇಗೋ ಪುಸಲಾಯಿಸಿ

ಪ್ರಜ್ವಲ್‌ ರೇವಣ್ಣ ಸೆಲ್‌ನಲ್ಲಿ ಮೊಬೈಲ್‌ ಪತ್ತೆ, ಜೈಲು ಅಧಿಕಾರಿ ಸಸ್ಪೆಂಡ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿ ಬೆಂಗಳೂರಿನ ಕೇಂದ್ರ ಕಾರಾಗೃಹವಾಸಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಮೊಬೈಲ್‌ ಪತ್ತೆಯಾಗಿದ್ದು, ಈ ಹಿನ್ನೆಲೆ ಜೈಲು ಅಧಿಕಾರಿಯನ್ನು ಸಸ್ಪೆಂಡ್‌ ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಡೆಂಟ್