ಅಪರಾಧ
ಶಿಕ್ಷಕನಿಂದಲೆ ವಿಧ್ಯಾರ್ಥಿನೀಯ ಮೇಲೆ ಅತ್ಯಾಚಾರ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಶಿಕ್ಷಕ ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಗಾಮನಗಟ್ಟಿಯ ಸರ್ಕಾರಿ ಶಾಲೆಯ ಇಂಗ್ಲಿಷ್ ಶಿಕ್ಷಕ ಮಹೇಶ ಚಂದಾಪುರ ಅತ್ಯಾಚಾರ ನಡೆಸಿದ ಆರೋಪಿ ಎಂದು ತಿಳಿದು ಬಂದಿದೆ ಮನೆಪಾಠಕ್ಕೆಂದು ಮನೆಗೆ ಬರುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆರೋಪಿ ಶಿಕ್ಷಕ, ಮನೆಯೊಳಗೆ ಕರೆದೊಯ್ದು ಅನೇಕ ಬಾರಿ ಅತ್ಯಾಚಾರ ಮಾಡಿದಾನೆ ಎಂದು ಸಂತ್ರಸ್ತೆ ಬಾಲಕಿ ಈ ಘಟನೆ
ಉದಯಗಿರಿಯಲ್ಲಿ ಕಲ್ಲು ತೂರಾಟಕ್ಕೆ ಪ್ರಚೋದನೆ ಆರೋಪಿ ಮೌಲ್ವಿ ಮುಫ್ತಿ ಮುಸ್ತಾಕ್ ಬಂಧನ
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡಡಿಂದ ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ
ಅತ್ತೆಯ ಸಾಯಿಸಲು ವೈದ್ಯರಲ್ಲಿ ಮಾತ್ರೆ ಕೇಳಿದ್ದ ಸೊಸೆ ಪತ್ತೆ
ಬೆಂಗಳೂರಿನ ವೈದ್ಯರಲ್ಲಿ ಅತ್ತೆಯನ್ನು ಸಾಯಿಸಲು ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯ್ ನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಿಳೆ ಮೂಲತ: ಕೊಳ್ಳೇ ಗಾಲದವರು ಎನ್ನಲಾಗಿದ್ದು, ಪತಿಯೊಂದಿಗೆ ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದ್ದು, ಪತಿ ಕ್ಯಾಬ್ ಚಾಲಕ. ವೈದ್ಯರಿಗೆ ಮಾತ್ರೆ
ಚಿಕ್ಕಮಗಳೂರಲ್ಲಿ ಶವವಾಗಿ ಪತ್ತೆಯಾದ ಬೆಂಗಳೂರಿನ ಯುವ ಜೋಡಿ
ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಯುವಕ ಹಾಗೂ ಯುವತಿಯ ಶವಗಳು ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಯುವತಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿದ್ದರೆ ಯುವಕನ ಮೃತದೇಹ ಕಾರು ನಿಂತ ಜಾಗದ ಪಕ್ಕದ ಮರದಲ್ಲಿ ಪತ್ತೆಯಾಗಿದೆ. ಮೃತ ಯುವಜೋಡಿಯ ವಯಸ್ಸು ಅಂದಾಜು 25-30ರ ಒಳಗಿದ್ದು, ಈ
ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಬಂಧನ
ವಿಜಯಪುರದ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ಕಾಶ್ಮೀರದ ಪ್ರಥಮ ವರ್ಷದ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ದೈಹಿಕ ಹಿಂಸೆ ನೀಡಿದ್ದಾರೆಂಬ ಪ್ರಕರಣ ಸಂಬಂಧ ಪೊಲೀಸರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕೈಸರ್ (23),
ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ
ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ
ಬುದ್ದಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ!
ಬುದ್ದಿವಾದ ಹೇಳಿದ ತಂದೆಯನ್ನೇ ಚಾಕುವಿನಿಂದ ಇರಿದು ಪಾಪಿ ಮಗ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಮಾಜಿ ಸೈನಿಕ ಚನ್ನಬಸಪ್ಪ (61) ಅವರನ್ನು ಮಗ ಅಮಿತ್ [21]
ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚಿಸಿದ ಚಿನ್ನ ಬಾಗಲಗುಂಟೆಯಲ್ಲಿ
ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ, ಶ್ವೇತಾಗೌಡ ವಂಚಿಸಿ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣ ಎಲ್ಲಿದೆ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿದೆ. ಮಾಜಿ ಸಚಿವ
ನಾನಾ ಆಮಿಷವೊಡ್ಡಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ಮಾಜಿ ಪಿಡಿಒ ಬೆಂಗಳೂರು ಪೊಲೀಸ್ ಬಲೆಗೆ
ಸರ್ಕಾರಿ ಕೆಲಸ ಕೊಡಿಸುವ ಆಮಿಷ, ಚಿನ್ನದ ಉದ್ಯಮ ಹಾಗೂ ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ ಎರಡು ಪಟ್ಟು ಲಾಭ ಮತ್ತಿತರ ಹೆಸರಿನಲ್ಲಿ ಹಣ ಪಡೆದು ಹಲವರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದ ವಂಚಕನನ್ನು ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹಣ ಕಳವು ಪ್ರಶ್ನಿಸಿದ್ದಕ್ಕೆ ಬೆಂಕಿ ಹಚ್ಚಿ ತಂದೆಯನ್ನು ಜೀವಂತ ಸುಟ್ಟ ಮಗ
ಫರೀದಾಬಾದ್ನ ಅಜಯ್ನಗರದಲ್ಲಿ ಕಳ್ಳತನ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮಗನೊಬ್ಬ ಬೆಂಕಿ ಹಚ್ಚಿ ತಂದೆಯನ್ನೇ ಜೀವಂತ ಸುಟ್ಟು ಹಾಕಿದ್ದಾನೆ. ಮುಹಮ್ಮದ್ ಅಲೀಮ್ ಮಗನಿಂದ ಬೆಂಕಿಗಾಹುತಿಯಾದವರು. ತನ್ನ ಜೇಬಿನಿಂದ ಹಣ ಕದ್ದಿರುವುದಕ್ಕೆ ಗದರಿಸಿದ್ದಕ್ಕಾಗಿ 14 ವರ್ಷದ ಮಗ ತಂದೆಯನ್ನು ಜೀವಂತವಾಗಿ ಸುಟ್ಟು ಹಾಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.