Menu

ಕೆಪಿಎಸ್ಸಿ ಅಕ್ರಮ: ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ

ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಕಚೇರಿ ಮೇಲೆ ಸಿಐಡಿ ಪೊಲೀಸರು ಮತ್ತೊಮ್ಮೆ ಮಂಗಳವಾರ ದಾಳಿ ನಡೆಸಿದ್ದಾರೆ. ಎಸ್ಪಿ ರಾಘವೇಂದ್ರ ಹೆಗ್ಡೆ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ಕೆಪಿಎಸ್ಸಿ ಕಚೇರಿಗೆ ತೆರಳಿ ಹಲವು ದಾಖಲೆಗಳ ಪರಿಶೀಲನೆ ಮುಂದುವರಿಸಿದೆ. ಪರೀಕ್ಷೆ ಬರೆದಿದ್ದ 329 ಅಭ್ಯರ್ಥಿಗಳಿಗೂ ಸಿಐಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ ಒಎಂಆರ್ ಕಾರ್ಬನ್ ಶೀಟ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ

ಅತ್ಯಾಚಾರ ಪ್ರಕರಣ: ತೆಹಲ್ಕಾ ಮಾಜಿ ಸಂಪಾದಕ ತೇಜ್‌ಪಾಲ್‌ 2 ವಾರದಲ್ಲಿ ಶರಣಾಗಲಿ ಎಂದ ಸುಪ್ರೀಂ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ತೆಹಲ್ಕಾ ನಿಯತಕಾಲಿಕೆಯ ಮಾಜಿ ಸಂಪಾದಕ ತರುಣ್‌ ತೇಜ್‌ಪಾಲ್‌ ಎರಡು ವಾರಗಳೊಳಗೆ ಶರಣಾಗಬೇಕು ಎಂದು ಸುಪ್ರೀಂಕೋರ್ಟ್‌ ಖಡಕ್‌ ಸೂಚನೆ ನೀಡಿದೆ. ಸಹೋದ್ಯೋಗಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶರಣಾಗತಿಯಿಂದ ವಿನಾಯಿತಿ ನೀಡುವಂತೆ ತೇಜ್‌ಪಾಲ್‌ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್‌ ತಿರಸ್ಕರಿಸಿದೆ.

ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಮಹಿಳೆ: ಹೆಣ್ಣು ಮಕ್ಕಳಿಬ್ಬರು ನಾಪತ್ತೆ

ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹಕ್ಕೆ ನೊಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ್ದು, ಮಹಿಳೆ ಮತ್ತು ಮಗನನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ, ಆದರೆ ಇಬ್ಬರು ಹೆಣ್ಣು ಮಕ್ಕಳು ನಾಪತ್ತೆಯಾಗಿದ್ದಾರೆ. ಚಿತ್ರದುರ್ಗದ ಮಹಿಳೆ ನದಿಗೆ ಹಾರಿದ್ದು, ಮಹಿಳೆ ಹಾಗೂ ಆಕೆಯ 11 ತಿಂಗಳ

ಅಣ್ಣನ ಮನೆಯಿಂದ ಚಿನ್ನಾಭರಣ ಕಳವುಗೈದಾತ ಅರೆಸ್ಟ್‌

ಹೊಸದಾಗಿ ಏನಾದರೂ ಬ್ಯುಸಿನೆಸ್‌ ಮಾಡಬೇಕೆಂದು ಯೋಚಿಸಿ ಅದಕ್ಕೆ ಹಣ ಹೊಂದಿಸಲು ಅಣ್ನನ ಮನೆಯಲ್ಲೇ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ಬೇಗೂರಿನಲ್ಲಿ ನಡೆದಿದೆ. ವಿನಯ್ ಕುಮಾರ್ ಬಂಧಿತ ಆರೋಪಿ. ಸಂಬಂಧದಲ್ಲಿ ತಮ್ಮನಾಗಿರುವ ವಿನಯ್ ಹೋಟೆಲ್ ಮ್ಯಾನೇಜ್ಮೆಂಟ್ ಓದಿಕೊಂಡಿದ್ದ,

ಸಿಗ್ನಲ್‌ನಲ್ಲಿ ನಿಂತಿದ್ದ ವಾಹನಗಳಿಗೆ ಕಾರು ಡಿಕ್ಕಿ: ಬೈಕ್‌ ಸವಾರ ಸಾವು

ಬೆಂಗಳೂರಿನ ಕಗ್ಗದಾಸನಪುರ ಮುಖ್ಯ ರಸ್ತೆಯ ವಿಜ್ಞಾನ ನಗರದಲ್ಲಿ ವೇಗವಾಗಿ ಬಂದ ಕಾರೊಂದು ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಕಾರು ಹಾಗೂ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ೩೩ ವರ್ಷದ ನವೀನ್‌ ಮೃತಪಟ್ಟವರು. ಅವರು ವಿಜ್ಞಾನನಗರ ಸಿಗ್ನಲ್‌ನಲ್ಲಿ

ಸೈಬರ್‌ ವಂಚನೆ ಜಾಲ: ಇಬ್ಬರನ್ನು ಬಂಧಿಸಿದ ಇಡಿ

ದೇಶದಲ್ಲಿ ವ್ಯಾಪಿಸಿರುವ ಸೈಬರ್‌ ವಂಚನೆ ಜಾಲದ ವಿರುದ್ಧ ಜಾರಿ ನಿರ್ದೇಶನಾಲಯವು ತನಿಖೆ ತೀವ್ರಗೊಳಿಸಿದ್ದು, ಇಬ್ಬರನ್ನು ಬಂಧಿಸಿದೆ. ಜಾಲದಲ್ಲಿ 30,000 ಕೋಟಿ ರೂ. ಬ್ಯಾಂಕ್ ಮತ್ತು ನಗದು ವಹಿವಾಟು ನಡೆದಿರುವ ಶಂಕೆ ವ್ಯಕ್ತವಾಗಿದೆ. ಫಹೀಮ್ ಮೊಯಿನ್ ಹುಸೇನ್ ಸಯ್ಯದ್ ಮತ್ತು ನಯೀಮ್ ಮುಯೀನ್

ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ

ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು,

ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ ವೆಂಟಿಲೇಟರ್‌ ಸ್ಫೋಟ: ಬೆಂಕಿಗೆ ಮೂರು ಶಿಶುಗಳು ಬಲಿ

ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾ ರಬೆಳಗಿನ ಜಾವ ವೆಂಟಿಲೇಟರ್‌ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮೂರು ನವಜಾತ ಶಿಶುಗಳು ಮೃತಪಟ್ಟಿವೆ.  ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಸ್ಥಳಾಂತರಿಸಲಾಗಿದೆ. ಬೆಳಗಿನ ಜಾವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. 39

ಕೋಳಿ ಫಾರ್ಮ್‌ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ: ಏಳು ಆರೋಪಿಗಳು ಅರೆಸ್ಟ್‌

ಕೊಲ್ಲಾಪುರದ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್‌ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ನಡೆಸುತ್ತಿದ್ದ ಜಾಲವನ್ನು ಬಯಲಿಗೆಳೆದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇಪ್ಪತ್ತು ಕಿ.ಮೀ ದೂರದ ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರಂ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ನಡೆಸುತ್ತಿದ್ದರು.

ಹಣಿಗೇರಿ ವನ್ಯಜೀವಿ ವಲಯದಲ್ಲಿ ಬೇಟೆಗಾರರ ಬಂಧನ

ಶಿವಮೊಗ್ಗ ತಾಲೂಕಿನ ಹಣಿಗೇರಿ ವನ್ಯಜೀವಿ ವಲಯದ ಸಿರಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಸಂಚು ರೂಪಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ​ಚೋರಡಿ ವಡೆಯರಕೊಪ್ಪ ಗ್ರಾಮದ ಲೋಕೇಶ್ ಎಸ್‌ಡಿ, ಸಚಿನ್ ಎಂ, ಅರುಣ್ ಕುಮಾರ್ ಹಾಗೂ ಸುಬ್ಬರಾಯ ಬಂಧಿತ ಆರೋಪಿಗಳು.