ಅಪರಾಧ
ಜಮೀನು ದಾರಿಗಾಗಿ ಜಗಳದಲ್ಲಿ ಒಬ್ಬನ ಕೊಲೆ: ಪ್ರತೀಕಾರವಾಗಿ ಮನೆಗೆ ಬೆಂಕಿ
ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಎರಡು ಎಕರೆ ಜಮೀನಿಗೆ ದಾರಿಗಾಗಿ ಶುರುವಾದ ಜಗಳ ತೀವ್ರಗೊಂಡು ಒಬ್ಬನ ಕೊಲೆಯಾಗಿದೆ. ಈ ಕೊಲೆಗೆ ಪ್ರತೀಕಾರವಾಗಿ ಕೊಲೆ ಮಾಡಿದವರ ಮನೆಗೆ ಕೊಲೆಯಾದವನ ಸೋದರ ಬೆಂಕಿ ಹಚ್ಚಿ ಜೈಲು ಸೇರಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ ಕುಟುಂಬಗಳ ಮಧ್ಯೆ ನಾಲ್ಕು ವರ್ಷಗಳಿಂದ ಎರಡು ಎಕರೆ ಜಮೀನಿನ ದಾರಿ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹನುಮಂತರಾಯನ ಕುಟುಂಬ ಮತ್ತು ಸಂಬಂಧಿಕರು 27
ಮಗಳ ರೇಪ್: ಆರೋಪಿಯ ಜನನಾಂಗ ಕತ್ತರಿಸಿ ಕೊಲೆಗೈದ ತಾಯಿ ನಿರ್ದೋಷಿ ಎಂದ ಕೋರ್ಟ್
ಬ್ರೆಜಿಲ್ನಲ್ಲಿ ನಡೆದ ಕೊಲೆ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಲಯವು, ಮಗಳ ಮೇಲೆ ಅತ್ಯಾಚಾರಗೈದ ಆರೋಪಿಯನ್ನು ಕೊಂದ ಮಹಿಳೆ ನಿರಪರಾಧಿ ಎಂದು ತೀರ್ಪು ನೀಡಿದೆ. 2025ರ ಮಾರ್ಚ್ನಲ್ಲಿ. ಎರಿಕಾ ಪೆರೇರಾ ಡ ಸಿಲ್ವೇರಾ ವಿಸೆಂಟೆ ಎಂಬ ಮಹಿಳೆಯ 11 ವರ್ಷದ ಮಗಳು ಬೆಲೊ
ನನ್ನ ಮುಟ್ಟಬೇಕಾದರೆ 90 ಲಕ್ಷ ಕೊಡು ಎಂದ ನವವಧು ಚಿನ್ನಾಭರಣ ದೋಚಿ ಪೋಷಕರೊಂದಿಗೆ ಪರಾರಿ
ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ಪುರದಲ್ಲಿ ಮದುವೆಯಾದ ಮೊದಲ ರಾತ್ರಿ ವಧು ತನ್ನನ್ನು ಮುಟ್ಟಬೇಕಾದರೆ ನೀನು 90 ಲಕ್ಷ ರೂಪಾಯಿ ಕೊಡಬೇಕು ಎಂದು ವರನಲ್ಲಿ ಹಠ ಹಿಡಿದಿದ್ದು ಮಾತ್ರವಲ್ಲದೆ, ಮನೆಯಲ್ಲಿದ್ದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ವರನ ಕುಟುಂಬ ಈಗ ನ್ಯಾಯಕ್ಕಾಗಿ ಕೋರ್ಟ್ ಕದ ತಟ್ಟಿದೆ.
ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು
ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಇಲ್ಲದ ಕಾರ್ಪೋರೇಷನ್ಗೆ ಜಮೀನು: ರದ್ದುಗೊಳಿಸಿ ಕೇಸ್ ಸಿಬಿಐಗೆ ವಹಿಸಿದ ಹೈಕೋರ್ಟ್
ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಅಮಾನಿಕೆರೆ ಕಂದಾಯ ಗ್ರಾಮಗಳ ವ್ಯಾಪ್ತಿಯಲ್ಲಿ ಜಮೀನುಗಳನ್ನು ಕೆಐಎಡಿಬಿಯಿಂದ ಸ್ವಾಧೀನಪಡಿಸಿಕೊಂಡು ಅಸ್ತಿತ್ವದಲ್ಲೇ ಇಲ್ಲದ ‘ಲೇಕ್ವ್ಯೂ ಟೂರಿಸಂ ಕಾರ್ಪೊರೇಷನ್’ಗೆ ನೀಡಿರುವುದನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಅಕ್ರಮದ ಸಂಬಂಧ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ
ಗಂಡ, ಮಗು ತೊರೆದು ಕಾರಲ್ಲಿ ಪ್ರಿಯಕರನ ಮದುವೆಯಾದ ಹಾಸನದ ಮಹಿಳೆ
ಹಾಸನ ಜಿಲ್ಲೆಯಲ್ಲಿ ಮಹಿಳೆಯೊಬ್ಬಳು ಪತಿ ಹಾಗೂ ಚಿಕ್ಕ ಮಗನನ್ನು ಬಿಟ್ಟು ಪ್ರಿಯಕರನ ಜೊತೆ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ ಪ್ರಕರಣ ನಡೆದಿದೆ. ಎಂಟು ವರ್ಷಗಳ ದಾಂಪತ್ಯ, ಏಳು ವರ್ಷದ ಮಗನನ್ನು ತೊರೆದು ಹರ್ಷಿತಾ ಎಂಬಾಕೆ ಪ್ರಿಯಕರ ಸಚಿನ್ ಜೊತೆ ಕಾರಿನಲ್ಲೇ ಮದುವೆಯಾಗಿದ್ದಾಳೆ. ಹರ್ಷಿತಾಗೆ
ಪ್ರಿಯಕರನಿಂದ ಖಾಸಗಿ ಪೋಟೊ ವೈರಲ್: ಮದುವೆ ನಿಗದಿಯಾಗಿದ್ದ ಸಿಂದಗಿ ಯುವತಿ ಸುಸೈಡ್
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬಂದಾಳ ಗ್ರಾಮದಲ್ಲಿ ಪ್ರಿಯಕರನೊಬ್ಬ ಯುವತಿಯ ಖಾಸಗಿ ಪೋಟೋಗಳನ್ನು ವರನ ಮನೆಯವರಿಗೆ ಕಳುಹಿಸಿದ್ದರಿಂದ ಯುವತಿಗೆ ನಿಗದಿಯಾಗಿದ್ದ ಮದುವೆ ಮುರಿದು ಬಿದ್ದಿದೆ. ಘಟನೆಯಿಂದ ಮನನೊಂದ ಯುವತಿ ಅವಮಾನವನ್ನು ಸಹಿಸಲಾಗದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಂದಾಳ ಗ್ರಾಮದ ಜಯಶ್ರೀ
42ರ ವಿವಾಹಿತೆಯ ಸಹವಾಸ: ಆತ್ಮಹತ್ಯೆ ಮಾಡಿಕೊಂಡ ನೆಲಮಂಗಲದ ಜಿಮ್ ಟ್ರೈನರ್ ಯುವಕ
ವಿವಾಹಿತೆಯ ಸಹವಾಸ ಮಾಡಿ ಆಕೆಯಿಂದ ಬ್ಲ್ಯಾಕ್ಮೇಲ್, ಕಿರುಕುಳಕ್ಕೆ ಒಳಗಾದ ಯುವಕ 28 ವರ್ಷದ ಜಿಮ್ ಟ್ರೈನರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್
ಸತ್ತವರ ಹೆಸರಲ್ಲಿ ಸರ್ಕಾರದ 4.27 ಕೋಟಿ ರೂಪಾಯಿ ಅಕ್ರಮ: ಮಧುಗಿರಿ ತಾ.ಪಂ ಕ್ಲರ್ಕ್, ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್
ನಿವೃತ್ತರಾಗಿರುವ ಮತ್ತು ಮೃತಪಟ್ಟಿರುವ ಸರ್ಕಾರಿ ನೌಕರರ ಹೆಸರಿನಲ್ಲಿ ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದ್ದಾರೆ. 4.27 ಕೋಟಿ ರೂಪಾಯಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಇದೆ. ಸೌಮ್ಯಾ , ಕಾಂಗ್ರೆಸ್ ಜಿಲ್ಲಾ
ಟ್ರಾಫಿಕ್ ಉಲ್ಲಂಘನೆ: ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸುವ ಶಿಕ್ಷೆ ವಿಧಿಸಿದ ಹೈಕೋರ್ಟ್
ಬೆಂಗಳೂರಿನಲ್ಲಿ ಅತಿವೇಗವಾಗಿ ಲ್ಯಾಂಬೋರ್ಗಿನಿ ಕಾರು ಚಲಾಯಿಸಿ ಸಂಚಾರ ನಿಯಮ ಉಲ್ಲಂಘಿಸಿದ್ದ ವ್ಯಕ್ತಿಗೆ ಹೈಕೋರ್ಟ್ ಲ್ಯಾಂಬೋರ್ಗಿನಿ ಕಾರಿನಲ್ಲಿ ಹೋಗಿ ರಸ್ತೆ ಕಸ ಗುಡಿಸಿ ಅದೇ ಕಾರಲ್ಲಿ ವಾಪಸ್ ಬರುವಂತೆ ಸಮುದಾಯ ಸೇವೆ ಶಿಕ್ಷೆ ವಿಧಿಸಿದೆ. ಮೈಸೂರು ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಕಾರು ಓಡಿಸಿದ ಆರೋಪದಡಿ




