Tuesday, September 01, 2026
Menu

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಎಂಟು ಮಕ್ಕಳು ಸೇರಿ 11 ಜನ ಸಾವು

ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಮತ್ತು ಕೌಶಂಬಿ ಗಡಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ದುರಂತಕ್ಕೆ ಬಲಿಯಾದವರಲ್ಲಿ ಎಂಟು ಮಕ್ಕಳೂ ಸೇರಿದ್ದಾರೆ. ಕಾರ್ಖಾನೆಯ ಸಮೀಪವಿರುವ ಮನೆಗಳಲ್ಲಿ ವಾಸವಿದ್ದ ಮಕ್ಕಳು ಸ್ಫೋಟದಲ್ಲಿ ಅಸು ನೀಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ ನೆಲಸಮಗೊಂಡಿದೆ. 100 ಮೀಟರ್ ವ್ಯಾಪ್ತಿಯೊಳಗಿನ ಎಂಟು ಮನೆಗಳು ಹಾನಿಗೊಂಡಿವೆ. ದುರಂತ ಸ್ಥಳದಿಂದ 500 ಮೀಟರ್ ದೂರದಲ್ಲಿರುವ ಪ್ರಯಾಗ್‌ರಾಜ್-ಕಾನ್ಪುರ್ ರೈಲ್ವೆ ಮಾರ್ಗದ ಓವರ್‌ಹೆಡ್ ಎಲೆಕ್ಟ್ರಿಕ್ ಲೈನ್ ಮಾರ್ಗವು ಅಸ್ತವ್ಯಸ್ತಗೊಂಡಿದೆ.

ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ

ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ

ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು

ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್‌ ಹೋಗಿ ಶಾಲೆಗೆ ತೆರಳಬೇಕೆಂದು ರೈಲು

ಚಿಕನ್‌ ಪೀಸ್‌ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಪಾರ್ಟಿಯಲ್ಲಿ ಚಿಕನ್‌ಪೀಸ್‌ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್‌ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್

ಮೊಬೈಲ್‌ ವಿಚಾರಕ್ಕೆ ಜಗಳ: ಅಣ್ಣನ ಕೊಂದ ತಮ್ಮ

ಮೊಬೈಲ್‌ ವಿಚಾರಕ್ಕೆ ಸೋದರರಿಬ್ಬರು ಜಗಳವಾಡಿ ತಮ್ಮ ಅಣ್ಣನನ್ನು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಬಳಿ ನಡೆದಿದೆ. ನಲ್ವತ್ತು ವರ್ಷದ ಅಡಿವಪ್ಪ ಎಂಬವರನ್ನು ತಮ್ಮ ರಾಜು ಎಂಬಾತ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸೋದರರು ಸೇರಿದಂತೆ ಬೆಳಗಾವಿ ಬೈಲಹೊಂಗಲದ ಕುಟುಂಬ

ಡೇಟಿಂಗ್ ಆ್ಯಪ್‌: ಯುವಕನಿಂದ 3.75 ಲಕ್ಷ ರೂ. ದೋಚಿ ಯುವತಿ ಪರಾರಿ

ಡೇಟಿಂಗ್‌ ಆ್ಯಪ್‌ನಲ್ಲಿ ಪರಿಚಯವಾದ ಯುವಕನನ್ನು ಅಪಹರಿಸಿದ ಯುವತಿ ಆತನಿಂದ 3.75 ಲಕ್ಷ ರೂ. ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪೂನಂ ಎಂಬ ಯುವತಿ ಶೇಬಿನ್ ಬೇಬಿ ಎಂಬ ಯುವಕನನ್ನು ಪಬ್‌ಗೆ ಆಹ್ವಾನಿಸಿ ಅಪಹರಿಸಿದ ಬಳಿಕ ಸಹಚರರೊಂದಿಗೆ ಸೇರಿ ಯುವಕನಿಂದ 3.75

ಕೆಪಿಎಸ್ಸಿ ಪರೀಕ್ಷೆ ಬರೆಯಲು ಭಾಲ್ಕಿಯಿಂದ ಬೆಂಗಳೂರಿಗೆ: ಮಧ್ಯವರ್ತಿಯಾಗಿ ಕೋಟ್ಯಾಧಿಪತಿಯಾದ ಕನ್ನಾಳೆ ಬಂಧನ

ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಅಕ್ರಮ ಪ್ರಕರಣ ಸಂಬಂಧ ಮಧ್ಯವರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಬೀದರ್‌ನ ಭಾಲ್ಕಿಯ ಬಸವರಾಜ ಕನ್ನಾಳೆ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕೆಪಿಎಸ್‌ಸಿ ಪರೀಕ್ಷೆ ಬರೆಯಲು ಭಾಲ್ಕಿಯಿಂದ ಬೆಂಗಳೂರಿಗೆ ಬಂದಿಳಿದಿದ್ದ ಬಸವರಾಜ್ ಕನ್ನಾಳೆ ಪರೀಕ್ಷೆ ಪಾಸಾಗದೆ ಕೋಟ್ಯಾಧಿಪತಿಯಾಗಿರುವುದು ಪತ್ತೆಯಾಗಿದೆ.

ಕೆಪಿಎಸ್ಸಿ ಅಕ್ರಮ: ಐಎಎಸ್‌ ಜ್ಞಾನೇಂದ್ರ ಅರೆಸ್ಟ್‌

ಕೆಪಿಎಸ್ಸಿಯಿಂದ ಪಶು ವೈದ್ಯಾಧಿಕಾರಿಗಳ ನೇಮಕ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹಿರಿಯ ಐಎಎಸ್‌ ಅಧಿಕಾರಿ ಮತ್ತು ಮಾಜಿ ಪರೀಕ್ಷಾ ನಿಯಂತ್ರಕ ಜ್ಞಾನೇಂದ್ರ ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಪರೀಕ್ಷೆಗೂ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಗಂಭೀರ ಆರೋಪವಿದೆ. ಈ ಅಕ್ರಮದಲ್ಲಿ

ಹೊನ್ನಾವರದಲ್ಲಿ ಪತ್ನಿಯ ಕೊಂದು ಹೃದಯಾಘಾತದ ಕಥೆ ಕಟ್ಟಿದ್ದ ವ್ಯಕ್ತಿ ಅರೆಸ್ಟ್‌

ಹೊನ್ನಾವರ ತಾಲೂಕಿನ ಮಂಕಿಯಲ್ಲಿ ಮಲಗಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಂಡು ಹೃದಯಾಘಾತ ಎಂದು ಕಥೆ ಕಟ್ಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ವರ್ಷದ ಮಗು ಅನಾಥವಾಗಿದೆ. ಮಖಿ ಗ್ರಾಮದ ೨೭ ವರ್ಷದ ಮಂಗಳಾ ಕೊಲೆಯಾದ