ಅಪರಾಧ
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು
ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. ಐದು ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಆದೇಶಿಸಿದೆ. ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾ.ಮೊಹಮ್ಮದ್ ನವಾಜ್, ಜಿ.ಬಸವರಾಜ ಅವರಿದ್ದ ಪೀಠವು ಈ ಆದೇಶ
ಬಳ್ಳಾರಿಯಲ್ಲಿ ಪತ್ನಿ, ಏಳು ತಿಂಗಳ ಮಗು ಕೊಂದು ವ್ಯಕ್ತಿ ಪರಾರಿ
ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ಸುತ್ತಿಗೆಯಿಂದ ಹೊಡೆದು ಪತ್ನಿ ಮತ್ತು ಏಳು ತಿಂಗಳ ಮಗುವನ್ನು ವ್ಯಕ್ತಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೊನ್ನೂರಸ್ವಾಮಿ ಎಂಬಾತ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು
ಬಲೂಚಿಸ್ತಾನದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 32 ಕಾರ್ಮಿಕರು ಬಲಿ
ಪಾಕಿಸ್ತಾನದ ಬಲೂಚಿಸ್ತಾನದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟವುಂಟಾಗಿ 32 ಕಾರ್ಮಿಕರು ಮೃತಪಟ್ಟಿದ್ದಾರೆ. ಹಲವು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾ ಹೊರವಲಯದಲ್ಲಿ ಕಾರ್ಯಾಚರಿಸುತ್ತಿದ್ದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್ ಅನಿಲ ಶೇಖರಣೆಗೊಂಡಿರುವುದರಿಂದ ಸ್ಫೋಟ ದುರಂತ ಸಂಭವಿಸಿದೆ ಎಂದು ತಿಳಿದು
ಭಿವಂಡಿಯಲ್ಲಿ ವಸತಿ ಕಟ್ಟಡ ಕುಸಿದು ಆರು ಜನ ಸಾವು, ಎಂಟು ಮಂದಿ ಅವಶೇಷಗಳಡಿ
ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ ಆರು ಜನ ಪ್ರಾಣ ಕಳೆದುಕೊಂಡಿದ್ದು, ಎಂಟು ಮಂದಿ ಅವಶೇಷಗಳ ಅಡಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಗುರುವಾರ ರಾತ್ರಿ ಕುಸಿದು
ಕುಂದಾಪುರದಲ್ಲಿ ಗುಂಡಿಕ್ಕಿ ವ್ಯಕ್ತಿಯ ಹತ್ಯೆ
ಕುಂದಾಪುರದ ಚರ್ಚ್ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದವರು. ಐವನ್ ರಿಚರ್ಡ್ ಕೆಲವು ವ್ಯವಹಾರ ನಡೆಸುತ್ತಿದ್ದರು. ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ವಾಸಿಸುತ್ತಿದ್ದರು ಎಂದು
BMIC ಅತಿ ದೊಡ್ಡ ಸ್ಕ್ಯಾಮ್, ಯೋಜನೆಯಿಂದ ಸಾರ್ವಜನಿಕರಿಗೆ ಏನೂ ದಕ್ಕಿಲ್ಲ, ಪ್ರವರ್ತಕರಿಗೇ ಲಾಭ: ಹೈಕೋರ್ಟ್ ಚಾಟಿ
ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದೆ. ವಂಚನೆ ಹಾಗೂ ಇತರ ಅಪರಾಧಗಳ ಆರೋಪಗಳ ಕುರಿತು ತಜ್ಞರ ವಿಶೇಷ ತಂಡದಿಂದ ಸ್ವತಂತ್ರ ತನಿಖೆ ಮತ್ತು ಯೋಜನೆಯ ಲೆಕ್ಕಪತ್ರಗಳ ಫೊರೆನ್ಸಿಕ್ ಆಡಿಟ್
ಪತ್ನಿಯ ಕೊಲೆಗೈದು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಪರಾರಿ
ಪತ್ನಿಯ ಕೊಲೆ ಮಾಡಿದ ಬಳಿಕ ಶವವನ್ನು ಬೆಡ್ಶೀಟ್ನಲ್ಲಿ ಸುತ್ತಿಟ್ಟು ಆರೋಪಿಯು ಪರಾರಿಯಾಗಿರುವ ಘಟನೆ ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ನಡೆದಿದೆ. ದುರ್ವಾಸನೆ ಬರುತ್ತಿದ್ದ ಕಾರಣ ಮನೆ ಬಾಗಿಲು ತೆರೆದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ರೀಮಾ ಕುಮಾರಿ (20)
ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್: ಎಫ್ಐಆರ್
ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ
ರಾಹುಲ್ ಗಾಂಧಿ ವಂಶ ಧ್ವಂಸ ಬೆದರಿಕೆ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ಕಾಂಗ್ರೆಸ್ ವಿರುದ್ಧ
ರೇಣುಕಾಸ್ವಾಮಿ ಕೊಲೆ ಕೇಸ್ ಸಾಕ್ಷಿಗಳ ಬೆದರಿಸಿದ್ದವರಿಗೆ ಜಾಮೀನು
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಈ ಮೂವರು ಆರೋಪಿಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ




