Friday, September 11, 2026
Menu

ಜೈಲಿನಲ್ಲಿ ಪ್ರಜ್ವಲ್‌ಗೆ ಮೊಬೈಲ್‌: ಏಳು ಮಂದಿ ವಿರುದ್ಧ ಪ್ರಕರಣ

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ಬೆಂಗಳೂರು ಕೇಂದ್ರ ಕಾರಾಗೃಹ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸುವುದಕ್ಕೆ ಎಲ್ಲ ರೀತಿಯ ನೆರವು ನೀಡಿದ್ದ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದ ಮೊಬೈಲ್‌ ಮತ್ತು ಸಿಮ್‌ ಕಾರ್ಡ್‌ ಪರಿಶೀಲನೆ ತೀವ್ರಗೊಳಿಸಿದ್ದು, ಡಿಜೆ ಹಳ್ಳಿಯೊಂದಿಗೆ ಸಂಪರ್ಕ ಇರುವುದು ಪತ್ತೆಯಾಗಿದೆ. ಈ ಸಂಬಂಧ ಪ್ರತಾಪ್ ರಾವ್, ತೌಸಿಪ್, ಸಿದ್ದಿಕ್, ಪ್ರಕಾಶ್, ಮಂಜುನಾಥ್ ಸೇರಿ

ನ್ಯಾಯಾಲಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಸಲ್ಲಿಸಿದ್ದ ಯುವಕರಿಬ್ಬರ ಬಂಧನ

ಪ್ರಕರಣವೊಂದರ ಆರೋಪಿಗೆ ಜಾಮೀನು ಪಡೆದುಕೊಳ್ಳಲು ನ್ಯಾಯಾಲಯಕ್ಕೆ ನಕಲಿ ಆಧಾರ್‌ ಕಾರ್ಡ್‌ ಸಲ್ಲಿಸಿರುವ ಆರೋಪದಡಿ ಉಡುಪಿ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಬಂಟ್ವಾಳದ ಉಮರ್ ಫಾರೂಕ್ (32) ಹಾಗೂ ಮಂಗಳೂರಿನ ನಿಶಾಂತ್ ಕುಮಾರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಡುಪಿ

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತಕ್ಕೆ ಎಂಟು ಮಂದಿ ಬಲಿ

ಮಹಾರಾಷ್ಟ್ರದ ಭಂಡಾರ ಜಿಲ್ಲೆಯ ನಾಗಪುರ- ರಾಯ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ ಮತ್ತು ಪಿಕಪ್‌ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಪಿಂಪಲ್‌ಗಾಂವ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ

ಗಣೇಶ ಮೂರ್ತಿ ಒಯ್ಯುವಾಗ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

ರಾಯಚೂರಿನ ಸಿರವಾರ ತಾಲೂಕಿನಲ್ಲಿರುವ ಅತ್ತನೂರು ಗ್ರಾಮದಲ್ಲಿ ವಿದ್ಯುತ್‌ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಯುವಕ ಮೃತಪಟ್ಟಿದ್ದಾನೆ. ೨೭ ವರ್ಷದ ಪ್ರೇಮ್‌ ಕುಮಾರ್‌ ಮೃತಪಟ್ಟ ಯುವಕ. ಪ್ರತಿಷ್ಠಪನೆಗಾಗಿ ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದಾಗ ವಿದ್ಯುತ್ ತಂತಿ ತಾಗಿ ಮೂರ್ತಿ

ತಿರುಪತಿ ದೇಗುಲದಿಂದ ವಾಪಸಾಗುತ್ತಿದ್ದ ನಾಲ್ವರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರ ತಾಲೂಕಿನ ದೊಡ್ಡಕಾರಿ ಬಳಿ ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಾರಿಡಾರ್‌ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ಶಾರದಮ್ಮ(70), ದೀಕ್ಷಿತಾ (25), ದೇವೇಂದ್ರ ಕುಮಾರ್ (41), ಜಿಷ್ಣು (13) ಮೃತಪಟ್ಟವರು. ಚಾಲಕ ವಿಕಾಸ್, ನೀತು,

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ

ರಾಜ್ಯದಲ್ಲಿ 582ಕ್ಕೂ ಹೆಚ್ಚು ನಕಲಿ ವೈದ್ಯರನ್ನು ಪತ್ತೆ ಹಚ್ಚಿ ಆರೋಗ್ಯ ಇಲಾಖೆಯು ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಹೈಕೋರ್ಟ್ ಆದೇಶದ ಬಳಿಕ 2025 ರಲ್ಲಿ ನಕಲಿ ವೈದ್ಯರ ಪತ್ತೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ನಕಲಿ ಔಷಧ ಜಾಲ ಹಾಗೂ ನಕಲಿ ವೈದ್ಯರ

ದೆಹಲಿಯಲ್ಲಿ ಪಿಜಿ ಕುಸಿದು ಆರು ವಿದ್ಯಾರ್ಥಿಗಳ ಸಾವು

ದೆಹಲಿಯ ಸತ್ಯನಿಕೇತನ್‌ ಪ್ರದೇಶದಲ್ಲಿ ಭಾನುವಾರ ಯುವಕರ ಪಿಜಿ ಕಟ್ಟವೊಂದು ಕುಸಿದು ಆರು ಮಂದಿ ಮೃತಪಟ್ಟಿದ್ದಾರೆ. ಹನ್ನೊಂದು ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ. ದೆಹಲಿ ವಿಶ್ವವಿದ್ಯಾಲಯದ ಸೌತ್ ಕ್ಯಾಂಪಸ್ ಸಮೀಪ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಬಾಲಕರ ಪಿಜಿ ವಸತಿ ಕಟ್ಟಡ ಕುಸಿದು ಈ ದುರಂತ

ಗದಗ ಮೀಟರ್‌ ಬಡ್ಡಿ ದಂಧೆ: 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ, ಕುಟುಂಬ ಬೀದಿಗೆ

ಗದಗ ಜಿಲ್ಲೆಯಲ್ಲಿ ಮೀಟರ್‌ ಬಡ್ಡಿ ದಂಧೆ ಮಿತಿ ಮೀರಿದ್ದು, ಸಾಲ ಪಡೆದವರ ಕೋಟ್ಯಾಂತರ ರೂ. ಮೌಲ್ಯದ ಆಸ್ತಿಗಳನ್ನು ಸಾಲ ನೀಡಿದವರು ದರೋಡೆ ಮಾಡುತ್ತಿದ್ದಾರೆ. ಬಡ್ಡಿ ರಾಕ್ಷಸರು 12 ಲಕ್ಷ ರೂ. ಸಾಲಕ್ಕೆ 1.5 ಕೋಟಿಯ ಆಸ್ತಿ ಜಪ್ತಿ ಮಾಡಿದ್ದು, ಕಟುಂಬ ಮನೆ

ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: 8 ವಿದ್ಯಾರ್ಥಿಗಳ ಸಾವು

ತಿರುವನಂತಪುರದಲ್ಲಿ ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ತಮಿಳುನಾಡಿನ ಸೇಲಂನ ವಿಶ್ವ (20), ದಿಂಡಿಗಲ್‌ನ ಸೂರ್ಯ (20), ಯುವಸಂಜಿತ್ (20) ಹಾಗೂ ಮಧುರೈನ ಸಂತೋಷ್ (20) ಮತ್ತು ಪ್ರಸನ್ನ ಮೃತಪಟ್ಟವರು

ಬೇಲೂರಿನಲ್ಲಿ ದೂರು ನೀಡಲು ಹೋದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ

ಹಣಕಾಸಿಗೆ ಸಂಬಂಧಿಸಿದಂತೆ ಗಲಾಟೆ ನಡೆದ ಬಗ್ಗೆ ದೂರು ನೀಡಲೆಂದು ಬೇಲೂರು ಪೊಲೀಸ್‌ ಠಾಣೆಗೆ ಹೋಗಿದ್ದ ವ್ಯಕ್ತಿ ಮೇಲೆ ಮಹಿಳಾ ಪೇದೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೇಲೂರು ಕಬ್ಬಿನಮನೆ ಗ್ರಾಮದ ಪ್ರಕಾಶ್‌ ಎಂಬವರ ಮೇಲೆ ಮಹಿಳಾ ಕಾನ್ಸ್‌ಟೇಬಲ್ ಲಾವಣ್ಯ ಲಾಠಿಯಿಂದ ಹಲ್ಲೆ