Menu

ಪತ್ನಿಯೊಂದಿಗೆ ಜಗಳ: ಮಕ್ಕಳ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ವ್ಯಕ್ತಿಯೊಬ್ಬ ಪತ್ನಿಯೊಂದಿಗೆ ಜಗಳವಾಡಿ ಸಿಟ್ಟಿನ ಭರದಲ್ಲಿ ಮಕ್ಕಳನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಕ್ಕಳಿಗೆ ವಿಷಕೊಟ್ಟು ಬಳಿಕ ಆತ ವಿಷ ಸೇವಿಸಿದ್ದಾನೆ. ಮೃತ ಬಾಬುರಾಮ್ ಕುಟುಂಬ ಕೆಲವು ಸಮಯದಿಂದ ವೈವಾಹಿಕ ಬಿಕ್ಕಟ್ಟಿನಲ್ಲಿದೆ. ಪತ್ನಿ ಹೆತ್ತವರ ಮನೆಯಲ್ಲಿ ವಾಸವಾಗಿದ್ದರು. ಸಹೋದರನ ವಿವಾಹ ಸಮಾರಂಭದಲ್ಲಿ ಭಾಗವಹಿಸಿ ಗಂಡನ ಗ್ರಾಮಕ್ಕೆ ಮರಳಿದ್ದರು. ಬಳಿಕ ದಂಪತಿ ನಡುವೆ ಜಗಳ ನಡೆದಿತ್ತು ಎಂದು ಹೇಳಲಾಗಿದೆ. ಬಾಬುರಾಮ್ ಮಕ್ಕಳನ್ನು ಕ್ಷೌರ ಮಾಡಲು ಕರೆದುಕೊಂಡು

ತವರು ಮನೆಗೆ ಹೋಗಿರುವ ಪತ್ನಿಯ ಕರೆತನ್ನಿ ಎಂದ ಮಗನ ಕೊಲೆಗೈದ ಪೋಷಕರು

ಮನೆಯಲ್ಲಿ ಕೆಲವೊಂದು ಭಿನ್ನಾಭಿಪ್ರಾಯಗಳಿಂದ ಮುನಿಸಿಕೊಂಡು ತವರಿಗೆ ಹೋಗಿದ್ದ ಪತ್ನಿಯನ್ನು ಕರೆ ತರುವಂತೆ ಹೇಳಿದ ಮಗನನ್ನು ಪೋಷಕರೇ ಹತ್ಯೆಗೈದ ಘಟನೆ ಪಂಜಾಬ್​ನ ಅಮೃತಸರದಲ್ಲಿ ನಡೆದಿದೆ. ಸಿಮ್ರಂಜಂಗ್ ಸಿಂಗ್ ಎಂವರ ಪತ್ನಿ ನವಪ್ರೀತ್ ಕೌರ್ ತವರು ಮನೆಗೆ ಹೋಗಿದ್ದರು. ಕೋಪ, ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಆಕೆಯನ್ನು

ನಟ ದರ್ಶನ್‌ಗೆ ಬೆನ್ನು ನೋವು ಇಲ್ಲ, ಫಿಸಿಯೋಥೆರಪಿ ಅಗತ್ಯವಿಲ್ಲ: ವೈದ್ಯರ ವರದಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತಗೊಳಿಸಲಾಗಿದೆ. ಬೆನ್ನು ನೋವಿಗೆ ಸಂಬಂಧಿಸಿದಂತೆ ಸಿ.ವಿ.ರಾಮನ್ ಆಸ್ಪತ್ರೆ ವೈದ್ಯರ ತಂಡ ಜೈಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದು, ದರ್ಶನ್‌ಗೆ ಫಿಸಿಯೋಥೆರಪಿಯ ಅವಶ್ಯಕತೆ ಇಲ್ಲ ಎಂದು ಹೇಳಿದೆ. ನ್ಯಾಯಾಲಯದ

ಕಡೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ: ಮತ್ತೊಬ್ಬ ಅರೆಸ್ಟ್‌

ಕಡೂರು ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್​ ಕೊಲೆ ಪ್ರಕರಣದಲ್ಲಿ ಬಜರಂಗ ದಳ ಕಾರ್ಯಕರ್ತರು ಭಾಗಿಯಾಗಿದ್ದು, ಮತ್ತೊಬ್ಬ ಆರೋಪಿ  ಮಿಥುನ್​​ ಎಂಬಾತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕೊಲೆಯಲ್ಲಿ ಮಿಥುನ್ ಪಾತ್ರ ದೃಢಪಟ್ಟಿದ್ದು, ಚಿಕ್ಕಮಗಳೂರು ನಗರದ ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಲಾಗಿದೆ. ಆರೋಪಿಯನ್ನು

ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ಕಿರುಕುಳ ದೂರು ನೀಡಿದಾಕೆ ವಿರುದ್ಧ ಎಫ್‌ಐಆರ್‌: ಆನೇಕಲ್‌ ಪೊಲೀಸ್‌ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಡಿಯೋಲಾಜಿಸ್ಟ್‌ನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪ್ರಕರಣ ದಾಖಲಿಸಿದರೆ ಆನೇಕಲ್ ಪೊಲೀಸರು ಆಕೆಯ ವಿರುದ್ಧವೇ ಎಫ್‌ಐಆರ್‌ ದಾಖಲಿಸಿದ್ದು, ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣದಾಸೆಗೆ ಪೊಲೀಸರು ಆರೋಪಿ ಪರವಾಗಿ ಸಂತ್ರಸ್ತೆಯ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ. ನ್ಯಾಯ ದೊರಕಿಸಿ ಕೊಡಿ

ಗೋವಾ ನೈಟ್​​ ಕ್ಲಬ್‌ನಲ್ಲಿ ಅಗ್ನಿ ದುರಂತ: ಅಡುಗೆ ಸಿಬ್ಬಂದಿ, ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ

ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್​​ಕ್ಲಬ್​​ನಲ್ಲಿ ಬೆಂಕಿ ಹೊತ್ತಿಕೊಂಡು 25 ಜನ ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ 50 ಜನರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯರಾತ್ರಿ 12 ಗಂಟೆಗೆ ನೈಟ್​​ ಕ್ಲಬ್​ನಲ್ಲಿ ಅಗ್ನಿ ದುರಂತ ಸಂಭವಿಸಿದೆ, ಕ್ಲಬ್​​ನ ಅಡುಗೆ ಮನೆಯಲ್ಲಿ ಗ್ಯಾಸ್​ ಸಿಲಿಂಡರ್

ಕಾರವಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಜೈಲರ್, ಪೊಲೀಸರ ಮೇಲೆ ಹಲ್ಲೆ!

ತಂಬಾಕು, ಸಿಗರೇಟು ಮುಂತಾದ ಮಾದಕ ವಸ್ತುಗಳಿಗಾಗಿ ಇಬ್ಬರು ಕೈದಿಗಳು ಜೈಲರ್ ಸೇರಿದ ಮೂವರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಜಿಲ್ಲಾಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಿಬ್ಬರು ಶನಿವಾರ ಕಾರಾಗೃಹ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ

ತಾಯಿ ಆತ್ಮಹತ್ಯೆ ವಿಷಯ ತಿಳಿದು 6 ತಿಂಗಳ ಹಿಂದೆ 2ನೇ ಮದುವೆ ಆಗಿದ್ದ ಮಗ ಆತ್ಮಹತ್ಯೆ!

ಶಿವಮೊಗ್ಗ: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯಲ್ಲಿ ತಾಯಿ-ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ಜಯಶ್ರೀ (57) ಹಾಗೂ ಪುತ್ರ ಆಕಾಶ್ (32)

ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಮಾಟ ಮಂತ್ರದ ಬೆದರಿಕೆ, ಕಿರುಕುಳ: ವ್ಯಕ್ತಿ ವಿರುದ್ಧ ಡಿಜಿಪಿಗೆ ದೂರು

ಬಿಟಿಎಂ ಲೇಔಟ್ ಫಸ್ಟ್ ಸ್ಟೇಜ್‌ನಲ್ಲಿರುವ ರಾಯಲ್ ಮೆನರ್ ಅಪಾರ್ಟ್‌ಮೆಂಟ್‌ನಲ್ಲಿರುವ ೧೫ ಮನೆಗಳವರಿಗೆ ಅದೇ ಅಪಾರ್ಟ್‌ಮೆಂಟ್‌ ನಿವಾಸಿಯಾಗಿರುವ ವ್ಯಕ್ತಿಯೊಬ್ಬ ಮಾಟ-ಮಂತ್ರದ ಭೀತಿ ಹುಟ್ಟಿಸಿದ್ದು, ದೈಹಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ದೂರು ಸಲ್ಲಿಕೆಯಾಗಿದೆ. ಆರೋಪಿಯ ರೌಡಿಸಂಗೆ ಹೆದರಿ 16 ಫ್ಲ್ಯಾಟ್‌ಗಳ

ಲಿವ್‌ ಇನ್‌ ರಿಲೇಷನ್‌ಶಿಪ್‌: ಮತಾಂತರಗೊಳ್ಳದಿದ್ದರೆ ಕೊಲೆಗೈಯುವುದಾಗಿ ಯುವತಿಗೆ ಬೆದರಿಕೆ

ಬೆಂಗಳೂರಿನಲ್ಲಿ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಲಿವಿಂಗ್‌ ಟುಗೆದರ್‌ ಸಂಗಾತಿಗಳಾಗಿದ್ದು, ಯುವತಿಯನ್ನು ಮದುವೆಯಾಗಲು ನಿರಾಕರಿಸಿದ ಯುವಕ ಮತಾಂತರಕ್ಕೆ ಒತ್ತಾಯಿಸಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಮತಾಂತರಕ್ಕೆ ಒಪ್ಪದಿದ್ದರೆ ದೆಹಲಿ ಪ್ರಕರಣದಂತೆ ಕೊಲೆಗೈದು ಪೀಸ್ ಪೀಸ್ ಮಾಡಿ ಎಸೆಯುವುದಾಗಿ ಬೆದರಿಸಿ, ಲಕ್ಷಾಂತರ ರೂ. ವಂಚಿಸಿದ್ದಾನೆಂದು