Menu

ಬಾಲಕ ಕಳವು ಮಾಡಿದ್ದ 4.20 ಲಕ್ಷ ರೂ. ಮೌಲ್ಯದ ವಸ್ತು ಜಪ್ತಿ

ಮೊಬೈಲ್ ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಬಾಲಕನನ್ನು ಹೆಣ್ಣೂರು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು 4.20 ಲಕ್ಷ ರೂ. ಮೌಲ್ಯದ ಮಾಲುಗಳನ್ನು ಜಪ್ತಿ ಮಾಡಿದ್ದಾರೆ.  4 ದ್ವಿಚಕ್ರ ವಾಹನಗಳು, 7 ಮೊಬೈಲ್ ,9 ಗ್ರಾಂ ಚಿನ್ನಾಭರಣ ಸೇರಿ 4.20 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಣ್ಣೂರಿನ ಹೆಚ್‌ ಬಿಆರ್ ಲೇಔಟ್‌ನ ಪಿಜಿಯೊಂದರಲ್ಲಿ ವಾಸವಾಗಿದ್ದ ವ್ಯಕ್ತಿಯೊಬ್ಬರು ‌ ಕಳೆದ ಮೇ.19 ರಂದು ಸಂಜೆ ಹೆಚ್ ಬಿಆರ್ ಲೇಔಟ್‌ನ 18ನೇ ಕ್ರಾಸ್ ರಸ್ತೆಯಲ್ಲಿ

ಆನ್‌ಲೈನ್‌ ಹೂಡಿಕೆಯಿಂದ ಹೆಚ್ಚಿನ ಲಾಭ: ಮಹಿಳೆ ಮಾತಿಗೆ ಮರುಳಾದ ವ್ಯಕ್ತಿಗೆ 5.95 ಕೋಟಿ ರೂ. ನಾಮ

ಆನ್‌ಲೈನ್ ಹೂಡಿಕೆ ಮೂಲಕ ಸುಲಭವಾಗಿ ಹಣ ಗಳಿಸಬಹುದು ಎಂಬ ಮಹಿಳೆಯ ಮಾತಿಗೆ ಮರುಳಾಗಿ ಬೆಂಗಳೂರಿನ ೫೦ ವರ್ಷದ ವ್ಯಕ್ತಿಯೊಬ್ಬರು 5.95 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ.  ಹೂಡಿಕೆ ಮಾರ್ಗದರ್ಶನ ನೀಡುವ ನೆಪದಲ್ಲಿ ಪರಿಚಯವಾದ ಮಹಿಳೆಯೊಬ್ಬರ ಮಾತು ನಂಬಿದ ವ್ಯಕ್ತಿ ನಕಲಿ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ

ಸಕಲೇಶ​​ಪುರದ ಯುವಕ ಶಿವಮೊಗ್ಗದಲ್ಲಿ ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಸಕಲೇಶ​​ಪುರದ ಯುವಕನೊಬ್ಬ ಶಿವಮೊಗ್ಗ ನಗರದ ಹೊರವಲಯದ ಪುರಲೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸಂಕೇತ್​​ (19) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಕೇತ್  ಐಟಿಐ ವ್ಯಾಸಂಗವನ್ನು ಮುಗಿಸಿ ಯಾವುದೇ ಕೆಲಸಕ್ಕೆ ಸೇರದೆ ಮನೆಯಲ್ಲೇ ಇದ್ದ.  ತಂದೆ ಕೆಲಸಕ್ಕೆ

ಮದುವೆ ಮಂಟಪದಿಂದ ಹನಿಮೂನ್‌ಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್‌ ಪತನ: ವರ, ಪೈಲಟ್‌ ಸಾವು

ಮದುವೆ ಸಂಭ್ರಮದಿಂದ ಹನಿಮೂನ್‌ಗೆ ತೆರಳುತ್ತಿದ್ದ ಜೋಡಿಯಿದ್ದ ಹೆಲಿಕಾಪ್ಟರ್‌ ಅಮೆರಿಕದ ಜಾರ್ಜಿಯಾದಲ್ಲಿ ಪತನಗೊಂಡಿದ್ದು, ಕೇರಳದ ವರ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ವಧು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ವರ ಕೇರಳದ 26 ವರ್ಷದ ಡೇವ್ ಫಿಜಿ, ವೃತ್ತಿಯಲ್ಲಿ ಪೈಲಟ್‌ ಆಗಿದ್ದವರು, ಮದುವೆ ಸಮಾರಂಭದ ಬಳಿಕ

ಕಡಿಮೆ ದರದಲ್ಲಿ ಹೊಸ ಆಭರಣ ಆಮಿಷ: ಮಹಿಳೆಯರಿಂದ ಎಂಟು ಕೋಟಿ ರೂ.ಗಳ ಚಿನ್ನ ಪಡೆದು ಪರಾರಿ

ಕಡಿಮೆ ದರದಲ್ಲಿ ಮತ್ತು ಕಡಿಮೆ ತೂಕದಲ್ಲಿ ಹೊಸ ಆಭರಣ ಮಾಡಿಕೊಡುವುದಾಗಿ ನಂಬಿಸಿ ರಾಮದೇವ್ ಜ್ಯುವೆಲರ್ಸ್ ಮಾಲೀಕ ಬುಂಡಾರಾಮ್ ನೂರಾರು ಮಹಿಳೆಯರಿಂದ ಎಂಟು ಕೋಟಿ ರೂ. ಮೌಲ್ಯದ ಚಿನ್ನಾಭರಣ ಪಡೆದುಕೊಂಡು ವಂಚಿಸಿ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಟ್ಟಣದ

ವೈದ್ಯ ದಂಪತಿ ಮನೆಯಲ್ಲಿ ಚಿನ್ನ, ಹಣ ಕಳವು: ಕೇರ್‌ಟೇಕರ್‌ ಸೇರಿ ಇಬ್ಬರ ಬಂಧನ

ಬೆಳಗಾವಿ ನಗರದ ವೈದ್ಯ ದಂಪತಿಯ ಮನೆಯಿಂದ 1.2 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರ್‌ ಟೇಕರ್‌ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ರಾಹುಲ್ ಸತೀಶ್ ಕಾಂಬ್ಳೆ ಮತ್ತು ಬಾಬಾಸಾಬ್ ಈರಪ್ಪ ಕಟಗೇರಿ ಬಂಧಿತ ಆರೋಪಿಗಳು. ಪೊಲೀಸರು

ಚಡಚಣದಲ್ಲಿ ಗುಂಡಿಕ್ಕಿ ಆರು ಮಂದಿಯ ಹತ್ಯೆ ಪ್ರಕರಣದ 11 ಆರೋಪಿಗಳು ಸೆರೆ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದ ಪುರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿ ಶುಕ್ರವಾರ ಸಂಜೆ ನಡೆದ ಆರು ಮಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹನ್ನೊಂದು ಆರೋಪಿಗಳನ್ನು ಬಂಧಿಸಿದ್ದಾರೆ. ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ಉತ್ತರ ವಲಯದ ಐಜಿಪಿ ಸಂದೀಪ್‌ಪಾಟಿಲ್ ಈ ವಿಷಯ

ದೇಶದ ಹಲವೆಡೆ ದಾಳಿ ಸಂಚು: ಒಂಬತ್ತು ಉಗ್ರರ ಬಂಧನ

ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸ್ ವಿಶೇಷ ಘಟಕ ಒಂಬತ್ತು ಶಂಕಿತ ಉಗ್ರರನ್ನು ಬಂಧಿಸಿದೆ. ಈ ಉಗ್ರರು ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ

ಪ್ರಿಯತಮೆಯ ಪತಿ ಬಂದಾಗ 30 ಅಂತಸ್ತಿನ ಕಟ್ಟಡದಿಂದ ಜಿಗಿದು ಮೃತಪಟ್ಟ ಜಿಮ್‌ ಟ್ರೈನರ್

ಪ್ರಿಯತಮೆಯ ಮನೆಯಲ್ಲಿ ಜೊತೆಯಲ್ಲಿದ್ದಾಗ ಆಕೆಯ ಪತಿ ಮನೆಗೆ ಬಂದಾಗ ತಪ್ಪಿಸಿಕೊಳ್ಳಲು ಯತ್ನಿಸಿ 30 ಅಂತಸ್ತಿನ ಕಟ್ಟಡದಿಂದ ಕೆಳಗೆ ಬಿದ್ದು ಫಿಟ್‌ನೆಸ್ ಟ್ರೈನರ್ ಮೃತಪಟ್ಟಿದ್ದಾನೆ. ಸಿಂಗಾಪುರದ ವಸತಿ ಸಮುಚ್ಚಯದಲ್ಲಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ 30 ವರ್ಷದ ಫಿಟ್‌ನೆಸ್ ಟ್ರೈನರ್ ಆಗಿದ್ದು,

ಬ್ರಿಮ್ಸ್‌ನಲ್ಲಿ ಮಹಿಳಾ ಶವಗಳ ಬೆತ್ತಲೆ ಪೋಟೊ ಕ್ಲಿಕ್ಕಿಸುತ್ತಿದ್ದ ಅಟೆಂಡರ್‌ ಅರೆಸ್ಟ್‌

ಬೀದರ್‌ನ ಬ್ರಿಮ್ಸ್‌ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಪೋಸ್ಟ್‌ಮಾರ್ಟ್‌ಮ್‌ ವೇಳೆ ಮಹಿಳಾ ಮೃತದೇಹಗಳ ಬೆತ್ತಲೆ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿದ್ದ ಆರೋಪದ ಮೇಲೆ ಅಟೆಂಡರ್‌ ಒಬ್ಬನನ್ನು ಬಂಧಿಸಲಾಗಿದೆ. ಆರೋಪಿ ಮುನೀರ್‌ ಅಹ್ಮದ್‌ ಬಂಧಿತ, ಹಲವು ವರ್ಷಗಳಿಂದ ಆಸ್ಪತ್ರೆಯ ಶವಾಗಾರ ವಿಭಾಗದಲ್ಲಿ ಅಟೆಂಡರ್‌ ಆಗಿ ಕೆಲಸ