ಅಪರಾಧ
ಹೆಚ್ಎಎಲ್ ವಸತಿಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಅವಿವಾಹಿತರಾಗಿದ್ದು, ಗುತ್ತಿಗೆ ಆಧಾರದ ಹೆಚ್ಎಎಲ್ನಲ್ಲಿ ಮೇಲೆ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ ಎಫ್ಎ 244 ಕ್ವಾರ್ಟರ್ಸ್ನಲ್ಲಿ ಾತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ನೋಟ್ ಬರೆದಿಟ್ಟಿರುವ ಅವರು, ಕುಟುಂಬ ಸದಸ್ಯರಲ್ಲಿ ಕ್ಷಮೆ ಯಾಚಿಸಿದ್ದಾರೆ. ಸಾವಿನ ಹಿಂದಿನ ನಿಖರವಾದ
ರಸಗೊಬ್ಬರಕ್ಕಾಗಿ ಎರಡು ದಿನ ರಾತ್ರಿ ಹಗಲು ಸರತಿಯಲ್ಲಿದ್ದ ಮಹಿಳೆ ಸಾವು
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ರಸಗೊಬ್ಬರ ಪಡೆಯಲು ವಿತರಣಾ ಕೇಂದ್ರದ ಎದುರು ಸತತ ಎರಡು ದಿನ ಸರತಿ ಸಾಲಿನಲ್ಲಿ ನಿಂತಿದ್ದ ರೈತ ಮಹಿಳೆ ಮೃತಪಟ್ಟಿದ್ದಾರೆ. ಭ್ರೂಯಾ ಬಾಯಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಮಂಗಳವಾರದಿಂದ ಅವರು ಬಿಸಿಲು-ಗಾಳಿಯಲ್ಲಿ ರಸಗೊಬ್ಬರಕ್ಕಾಗಿ ಕಾಯುತ್ತಿದ್ದರು. ಇದು ದೇಶದಲ್ಲಿನ
ಹಿರಿಯೂರಿನಲ್ಲಿ ರಸ್ತೆ ಅಪಘಾತ: ಇಬ್ಬರ ಸಾವು
ಚಿತ್ರದುರ್ಗದ ಹಿರಿಯೂರು ತಾಲೂಕಿನ ಇಂಡಸ್ ಕಟ್ಟೆಯಲ್ಲಿ ಕಬ್ಬಿಣ ತುಂಬಿದ ಲಾರಿಗೆ ಹಿಂಬದಿಯಿಂದ ಕೋಳಿ ತುಂಬಿದ ಬುಲೆರೊ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತುಮಕೂರಿನ ತಿಪಟೂರು ನಿವಾಸಿಗಳಾದ ಚಂದನ್ ಗೌಡ( 22), ಕುಮಾರ್ (17) ಮೃತಪಟ್ಟವರು. ಬುಲೆರೊ ಚಾಲಕನ ಅತಿ ವೇಗ
ಬೆಂಗಳೂರಿನಲ್ಲಿ ಲಾಕಪ್ ಡೆತ್: ಹೊಡೆದು ಮದ್ಯ ರಿಹ್ಯಾಬ್ ಸೆಂಟರ್ಗೆ ಸೇರಿಸಿದ್ದರಾ ಪೊಲೀಸರು?
ಬೆಂಗಳೂರಿನ ವಿವೇಕ ನಗರ ಪೊಲೀಸ್ ಕಸ್ಟಡಿಯಲ್ಲಿ ಪೊಲೀಸರಿಂದ ತೀವ್ರ ಹಲ್ಲೆಗೆ ಒಳಗಾಗಿದ್ದ ವ್ಯಕ್ತಿ ಮದ್ಯ ರಿಹ್ಯಾಬ್ ಸೆಂಟರ್ನಲ್ಲಿ ಮೃತಪಟ್ಟಿದ್ದಾರೆ. ಸಿಂಗಮಲೆ ಮೃತಪಟ್ಟವರು. ಕಸ್ಟಡಿಯಲ್ಲಿರುವಾಗ ಪೊಲೀಸರು ಸಂಗಮಲೆಗೆ ಹೊಡೆದಿದ್ದು, ಬಳಿಕ ಮಾದಕನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಯ ರಿಹ್ಯಾಬ್ ಸೆಂಟರ್ಗೆ ದಾಖಲಿಸಿದ್ದರು. ಅಲ್ಲಿಗೆ
ಕೋಲಾರದಲ್ಲಿ ಶಿಕ್ಷಕಿಗೆ ಆನ್ಲೈನ್ನಲ್ಲಿ 20 ಲಕ್ಷ ರೂ. ವಂಚಿಸಿದ ದಂಪತಿ ಆರೆಸ್ಟ್
ಕೋಲಾರದ ಮಾಲೂರಿನ ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ ಆನ್ಲೈನ್ನಲ್ಲಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ವಂಚಕ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ ಸೈಬರ್ ಕ್ರೈಮ್ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚಕ ದಂಪತಿಯನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ರಾಧ/ಪಾವನ ಹಾಗೂ ಸತೀಶ್
ಕಗ್ಗಲಿಪುರದಲ್ಲಿ ಬಾಲಕಿಯ ಕೊಲೆ
ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ 15 ವರ್ಷದ ಬಾಲಕಿಯನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ ಕವನಳನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದು ಪತ್ತೆಯಾಗಿದೆ. ಕವನ ಸಂಜೆಯಾದರೂ ಮನೆಗೆ ವಾಪಸ್
ತಂಗಿಯ ಆರತಕ್ಷತೆ ಸಂಭ್ರಮದಲ್ಲಿದ್ದ ಯುವಕರಿಬ್ಬರು ಬೇಲೂರಿನಲ್ಲಿ ಅಪಘಾತಕ್ಕೆ ಬಲಿ
ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬೇಲೂರು ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25), ಚಿಕ್ಕಮಗಳೂರು ಮೇನಹಳ್ಳಿ ಗ್ರಾಮದ ಕಿರಣ್ (32) ಮೃತಪಟ್ಟ ಯುವಕರು. ಗುರುವಾರ (ಇಂದು) ಲೋಕೇಶ್ ತಂಗಿ
ಸೂಟ್ಕೇಸ್ನಲ್ಲಿ ಥಾಣೆಯ ಯುವತಿ ಶವ: ಲಿವ್ಇನ್ ಪಾರ್ಟ್ನರ್ ಅರೆಸ್ಟ್
ಥಾಣೆಯ ದೇಸಾಯಿ ಗ್ರಾಮದಲ್ಲಿ ತೊರೆಯೊಂದರ ಸಮೀಪ ಸೂಟ್ಕೇಸ್ನಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದಡಿ ಲಿವ್-ಇನ್ ಪಾರ್ಟನರ್ನನ್ನು ಪೊಲೀಸರು ಬಂಧಿಸಿದ್ದಾರೆ. ವಾರದ ಹಿಂದೆ ಇಬ್ಬರ ನಡುವೆ ಜಗಳ ನಡೆದಿದ್ದು, ಅದಾದ ಮರುದಿನ ಆರೋಪಿಯು ಯುವತಿಯನ್ನು ಕೊಂದು ಶವವನ್ನು ಸೂಟ್ಕೇಸ್ನಲ್ಲಿ
ವೈಟ್ಹೌಸ್ ಬಳಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
ಅಮೆರಿಕದ ಶ್ವೇತಭವನ ಸಮೀಪ ನಡೆದ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯ ಬಳಿಕ ವಾಷಿಂಗ್ಟನ್ನಲ್ಲಿ ಬಿಗಿ ಭದ್ರತೆ ಕೈಗೊಂಡು 500 ಹೆಚ್ಚುವರಿ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿ ನಿಯೋಜಿಸುವಂತೆ ಟ್ರಂಪ್ ಸೂಚಿಸಿದ್ದಾರೆ.
ಮಾನ್ಯತಾ ಟೆಕ್ ಪಾರ್ಕ್ ಸಮೀಪ ಆ್ಯಂಬುಲೆನ್ಸ್ ಸಂಚಾರಕ್ಕೆ ದುಸ್ತರವಾದ ರಸ್ತೆ: ಗಾಯಾಳು ಸಾವು
ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದು, ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸಂಚರಿಸಲಾಗದ ಕಾರಣ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ವರ್ತೂರಿನ 35 ವರ್ಷದ ಆನಂದ್ ಮೃತಪಟ್ಟ ಗಾಯಾಳು.




