ಅಪರಾಧ
ಅಪ್ರಾಪ್ತ ವಯಸ್ಕ ಸೋದರಿಯರ ಮೇಲೆ ಅತ್ಯಾಚಾರ: ಆರೋಪಿಯ ಬಂಧನ
ಸಿಂಧನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಸೋದರಿಯರಿಬ್ಬರ ಮೇಲೆ ಬಾಬು ಎಂಬಾತ ಅತ್ಯಾಚಾರ ನಡೆಸಿದ್ದು, ಆತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಗರದ ವಾರ್ಡ್ ನಂ.30 ಬಳಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹತ್ತಿರ ಗೀತಾ ಐಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಬಾಬು ಎಂಬಾತ ಅತ್ಯಾಚಾರ ಆರೋಪಿ. ಬಾಲಕಿಯರು ಶಾಲೆ ಮುಗಿಸಿಕೊಂಡು ಬಂದವರು ಸಂಜೆ ಮನೆಯ ಹತ್ತಿರ ಆಟ ಆಡುತ್ತಿರುವಾಗ ಆರೋಪಿ ಅವರನ್ನು ಅವರ ಮನೆಯ ಒಳಗಡೆ
ಆನ್ಲೈನ್ ಬೆಟ್ಟಿಂಗ್ ಚಟ: ಪತ್ನಿಯ ಇರಿದು ಕೊಂದು ಪತಿ ಆತ್ಮಹತ್ಯೆಗೆ ಯತ್ನ
ಬೆಂಗಳೂರಿನ ಮಹದೇವಪುರ ಪ್ರದೇಶದಲ್ಲಿ ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದ 32 ವರ್ಷದ ಮಹಿಳೆಯನ್ನು ಆನ್ಲೈನ್ ಬೆಟ್ಟಿಂಗ್ ಚಟಕ್ಕೆ ದಾಸನಾಗಿದ್ದ ಪತಿಯೇ ಚಾಕುವಿನಿಂದ ಇರಿದು ಕೊಂದಿದ್ದಾನೆ. ಮಂಜುಳಾ ಕೊಲೆಯಾದ ಮಹಿಳೆ, ಆಕೆ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾದ್ದರು. ಮಂಜುಳಾ ಮತ್ತು
ಹಣಕ್ಕಾಗಿ ಪೋಷಕರಲ್ಲಿ ಜಗಳವಾಡಿ ಮನೆ ಬಿಟ್ಟು ಹೋಗಿದ್ದ ಯುವಕ ಶವವಾಗಿ ಪತ್ತೆ
ಹಣಕ್ಕಾಗಿ ಪೋಷಕರೊಂದಿಗೆ ಜಗಳವಾಡಿದ ಯುವಕ ಬಳಿಕ ಮನೆ ಬಿಟ್ಟು ಹೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 27 ವರ್ಷದ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡವ. ಕೆಲವು ದಿನಗಳಿಂದ ಪ್ರದೀಪ್
ಮೈಸೂರು ಪಬ್ನಲ್ಲಿ ಬೆಂಕಿ ಅವಘಡ: ಇಬ್ಬರು ಸಜೀವ ದಹನ
ಮೈಸೂರಿನ ದಟ್ಟಗಳ್ಳಿಯಲ್ಲಿರುವ ಫಾಕ್ಸ್ ಡೆನ್ ರೆಸ್ಟೋ ಬಾರ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಹಿಲ್, ಪ್ರಕಾಶ್ ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್’ ಪಬ್
ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿಗಳಿಗೆ ಲೋಕಾಯುಕ್ತ ದಾಳಿ
ರಾಜ್ಯದ ಕಲಬುರಗಿ, ಚಿಕ್ಕಮಗಳೂರು, ಬೀದರ್ ಮತ್ತು ದಾವಣಗೆರೆ ಸೇರಿದಂತೆ ಹಲವೆಡೆ ಭ್ರಷ್ಟಾಚಾರ ಆರೋಪ ಹೊಂದಿರುವ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಲಬುರಗಿಯಲ್ಲಿ ಪಂಚಾಯತ್ರಾಜ್ ನಿವೃತ್ತ ಸೂಪರಿಡೆಂಟ್ ಎಂಜಿನಿಯರ್ ಎಸ್.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ದಾಳಿಯಾಗಿದೆ, ಗೋದುತಾಯಿ
ಪೂಜೆ ಮಾಡಿಸದಿದ್ದರೆ ಹತ್ತು ದಿನದಲ್ಲಿ ಸೋದರನ ಸಾವು: ಹೆದರಿಸಿ ಟೆಕ್ಕಿಗೆ ವಂಚನೆ
ಸಹೋದರನಿಗೆ ಗಂಡಾಂತರವಿದೆ, ಪೂಜೆ ಮಾಡಿಸದಿದ್ದರೆ 10 ದಿನದಲ್ಲಿ ಸಾಯುತ್ತಾನೆ ಎಂದು ಹೆದರಿಸಿ ವೈಟ್ಪೀಲ್ಡ್ನ ಟೆಕ್ಕಿಯೊಬ್ಬರಿಂದ ವಂಚಕರು ಏಳು ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ನವೀದಾ ಸುಲ್ತಾನ ಮತ್ತು ಪರ್ವೇಜ್ ಎಂಬವರನ್ನು ಪೊಲೀಸರು ಬಂಧಿಸಿ
ಬ್ಯಾಂಕಾಕ್ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 13.14 ಕೋಟಿ ರೂ. ಮೌಲ್ಯದ ಗಾಂಜಾ ವಶ
ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ನಡೆಸುವಾಗ ಲಗೇಜ್ ಬ್ಯಾಗ್ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾ
ಅಯೋಧ್ಯೆ ಮಂದಿರ ದೇಣಿಗೆಯಲ್ಲಿ ಅಕ್ರಮ: ಸುಪ್ರೀಂಗೆ ಅರ್ಜಿ ಸಲ್ಲಿಕೆ
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿರುವ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್ಗೆ ತಲುಪಿದೆ. ದೇವಸ್ಥಾನದ ವಿಚಾರದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಿದೆ.
ವಿಮಾನ ಪತನಗೊಂಡು 11 ಸ್ಕೈಡೈವರ್ಗಳು, ಪೈಲಟ್ ಸಾವು
ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸ್ಕೈಡೈವಿಂಗ್ ಕಂಪೆನಿ ಗುತ್ತಿಗೆ ಪಡೆದುಕೊಂಡಿದ್ದ ವಿಮಾನ ಅಪಘಾತಗೊಂಡಿದ್ದು, ಹನ್ನೊಂದು ಸ್ಕೈಡೈವರ್ಗಳು ಮತ್ತು ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಸ್ಕೈಡೈವಿಂಗ್ ಕಂಪನಿ ಗುತ್ತಿಗೆ ಪಡೆದಿದ್ದ ವಿಮಾನವು ಹಾರಾಟ ವಿಫಲವಾಗಿ ಎಡ ತಿರುವು ಪಡೆದು ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದಿಂದ 200
ದೇಗುಲದಿಂದ ವಾಪಸಾಗುತ್ತಿದ್ದಾಗ ವಾಹನ ತೆರೆದ ಬಾವಿಗೆ ಉರುಳಿ ಎಂಟು ಮಂದಿ ಸಾವು
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್ನಲ್ಲಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಢರಪುರ ಮೂಲದ




