ಅಪರಾಧ
ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ
ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್ಗೆ ನೀಡಿದ್ದರು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಪಿಜಿಯಲ್ಲಿದ್ದ ಕಾರ್ಮಿಕರು ಎದ್ದು ಲೈಟ್ ಆನ್ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಈ ಪಿಜಿಯಲ್ಲಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿದ್ದ 10ಕ್ಕೂ ಹೆಚ್ಚು
ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್ನ ಒಂದೇ ಕುಟುಂಬದ ಮೂವರು ಬಲಿ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೈದರಾಬಾದ್ನ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್ನ ಸೈದಾಬಾದ್ ನಿವಾಸಿಶೇಖ್ ನವೀದ್ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ
ಬುಡುಬುಡುಕೆಯವನೆಂದು ನಂಬಿಸಿ ಸಾವಿನ ಕಂಟಕ ಪರಿಹರಿಸುವುದಾಗಿ ಹೇಳಿ ಚಿನ್ನ ದೋಚಿ ಪರಾರಿ
ಬೆಂಗಳೂರಿನಲ್ಲಿ ಬುಡುಬುಡುಕೆಯವನೆಂದು ಹೇಳಿಕೊಂಡು ನಂಬಿಸಿದ ವ್ಯಕ್ತಿ, ಗರ್ಭಿಣಿಗೆ ‘ನಿಮ್ಮ ಮನೆಯಲ್ಲಿ ದೋಷವಿದೆ, ಸಾವಿನ ಕಂಟಕ ಇದೆ’ ಎಂದು ಹೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಮೋಹನ್ ಎಂಬವರ ಮನೆಗೆ ಬುಡುಬುಡುಕೆಯವನ ವೇಷದಲ್ಲಿ ಬಂದ
ರಾಮೋಹಳ್ಳಿ ಕೆರೆಯಲ್ಲಿ ಶವ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ
ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ಕೆರೆಯಲ್ಲಿ ಅನುಮಾನಾಸ್ಪದ ರೀತಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೂಟ್ಕೇಸ್ನಲ್ಲಿ ಮಹಿಳೆಯ ಶವ ತುಂಬಿ ಕೆಎಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ರಾಮೋಹಳ್ಳಿಯಲ್ಲಿ ಮಹಿಳೆಯನ್ನು ಕೊಂದು ಎರಡ್ಮೂರು ದಿನಗಳ ಹಿಂದೆ ಸೂಟ್ಕೇಸ್ನಲ್ಲಿ ಶವ ತುಂಬಿ ಕೆರೆಗೆ
ಹುಣಸೂರಿನಲ್ಲಿ ಪತ್ನಿ, ಮಕ್ಕಳ ಕೊಂದು ವ್ಯಕ್ತಿ ಆತ್ಮಹತ್ಯೆ
ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಹರೀಶ್(42) ಎಂಬ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ
ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ: ನಿಡಗುಂದಿಯಲ್ಲಿ ತಂದೆ, ಮಗಳು ಸ್ಥಳದಲ್ಲೇ ಸಾವು
ವಿಜಯಪುರ ನಿಡಗುಂದಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಮುದ್ದೇಬಿಹಾಳ ಕ್ರಾಸ್ ಬಳಿ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರಿಗೆ ಸನ್ಣಪುಟ್ಟ ಗಾಯಗಳಾಗಿವೆ. ಕಾರ್ಮಿಕರು ಕಬ್ಬು ಕಟಾವು ಮಾಡಲು ಟ್ರ್ಯಾಕ್ಟರ್ನಲ್ಲಿ ಇಂಡಿಯಿಂದ ಮಂಡ್ಯಕ್ಕೆ ತೆರಳುತ್ತಿದ್ದರು. ಸ್ಪೀಡ್ ಬ್ರೇಕರ್
ಐಸಿಸ್ಗೆ ಹಣಕಾಸು ನೆರವು, ಯುವಕರ ಪೂರೈಕೆ: ಬೆಂಗಳೂರಿನ ಎಂಟು ಕಡೆ ಇಡಿ ದಾಳಿ
ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಹಣಕಾಸು ನೆರವು ಹಾಗೂ ಯುವಕರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸಿರುವ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರಿನ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಯುವಕರನ್ನು ಉಗ್ರವಾದಕ್ಕೆ ಒಳಪಡಿಸುವ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ
ಅಕ್ರಮ ಮರಳು ಗಣಿಗಾರಿಕೆ: ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು
ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ತನಿಖೆ ನಡೆಸಿ ರಾಜ್ಯ ಲೋಕಾಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಬಾಗಲಕೋಟೆ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ
ಹೆಸರಿಗೆ ಕೋಳಿ ಫಾರಂ, ಒಳಗೆ ನಡೆಯೋದು ಮಾದಕ ದ್ರವ್ಯ ದಂಧೆ
ತೆಲಂಗಾಣದ ಅಣ್ಣಾಸಾಗರ ಗ್ರಾಮದ ಹೊರವಲಯದಲ್ಲಿ ಹೆಸರಿಗೆ ಮಾತ್ರ ಕೋಳಿ ಫಾರಂ, ಆದರೆ ಒಳಗೆ ನಡೆಯುತ್ತಿದ್ದುದು ಅಪಾಯಕಾರಿ ಮಾದಕ ದ್ರವ್ಯಗಳ ತಯಾರಿಕೆ. ಇಂಥದ್ದೊಂದು ಅಕ್ರಮ ಜಾಲವನ್ನು ಬಯಲಿಗೆಳೆಯುವಲ್ಲಿ ಆ ರಾಜ್ಯದ ವಿಶೇಷ ಮಾದಕ ದ್ರವ್ಯ ನಿಗ್ರಹ ದಳ ಯಶಸ್ವಿಯಾಗಿದೆ. ಅಣ್ಣಾಸಾಗರ ಗ್ರಾಮದ ಹೊರವಲಯದಲ್ಲಿರುವ ಲಕ್ಷ್ಮೀ
ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ
ಯಾದಗಿರಿಯ ವಿದ್ಯಾರ್ಥಿ ಧಾರವಾಡದ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು




