Menu

ಕಾಲೇಜು ಫೀಸ್‌ ಹಣವನ್ನು ಸಾಲ ನೀಡಿದ ವಿದ್ಯಾರ್ಥಿನಿ ವಾಪಸ್‌ ಸಿಗದೆ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು. ಊರಿನ ಪರಿಚಯಸ್ಥ ಸಂತೋಷ

ಮನೆಯೊಳಗೆ ನುಗ್ಗಿ ಯೂಟ್ಯೂಬರ್‌ನ ಹತ್ಯೆ

ಯೂಟ್ಯೂಬರ್ ಒಬ್ಬರನ್ನು ಮನೆಯೊಳಗೆ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನ ಗೋಲ್ಕೊಂಡ ಪ್ರದೇಶದಲ್ಲಿ ನಡೆದಿದೆ.  ಶೈಕ್ ಮಹಬೂಬ್ ಅಲಿಯಾಸ್ ಚಾಂಡಿ ಮಸೂದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರ್‌ವಾಡಿಯಲ್ಲಿ ಕೃತ್ಯ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಸೂದ್ ಮಸೀದಿಯಿಂದ

ಬೆಂಗಳೂರಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು: ನಾಲ್ವರ ಸಾವು

ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗುತ್ತಿದ್ದ ಬೈಕ್ ಮಳೆ ನೀರಲ್ಲಿ ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದು ತೀವ್ರ ಗಾಯಗೊಂಡಿದ್ದ ತಾಯಿ ಕಾಂತಮ್ಮ ಮೃತಪಟ್ಟಿದ್ದಾರೆ. ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ

ಎರಡು ಕೋಟಿ ವಿಮೆ ಹಣಕ್ಕಾಗಿ ಪ್ರಿಯಕರನ ಜೊತೆ ಸೇರಿ ಗಂಡನಿಗೆ ವಿಷವಿಕ್ಕಿ ಕೊಲೆ

ಎರಡು ಕೋಟಿ ರೂ. ವಿಮೆ ಹಣ ಪಡೆಯುವುದಕ್ಕಾಗಿ ಚಿಕ್ಕೋಡಿಯಲ್ಲಿ ಮಾಜಿ ಸೈನಿಕನನ್ನು ಪತ್ನಿಯೇ ಕೊಂದಿರುವ ಘಟನೆಯೊಂದು ಬಹಿರಂಗಗೊಂಡಿದೆ. ಗಂಡನಿಗೆ ವಿಷದ ಇಂಜೆಕ್ಷನ್‌ ಚುಚ್ಚಿ ಕೊಲೆ ಮಾಡಿರುವ ಆರೋಪ ಗಂಡ ಇದ್ದಾಗಲೂ ಕೊಲೆಗಡುಕಿ ಪತ್ನಿ ಪ್ರಿಯಕರನ ಜೊತೆ ಓಡಾಡಿಕೊಂಡಿದ್ದಳು, ಪ್ರಿಯಕರನ ಜೊತೆ ಸೇರಿ

ಬೈಕ್‌ಗೆ ಲಾರಿ ಡಿಕ್ಕಿ: ಇಬ್ಬರ ಸಾವು

ಬೆಂಗಳೂರಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನಕ್ಕೆ ಗ್ಯಾಸ್‌ ಸಿಲಿಂಡರ್‌ ತುಂಬಿದ್ದ ಗೂಡ್ಸ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಮಹಿಳೆ, ಪುರುಷ ಮೃತಪಟ್ಟಿದ್ದು, ಸ್ಥಳಕ್ಕೆ ಯಶವಂತಪುರ ಸಂಚಾರ

ಮಾವನೊಂದಿಗೆ ಜೇನು ತೆಗೆಯಲು ಹೋದ ಮಗು ಶವವಾಗಿ ಪತ್ತೆ

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಮಾವನ ಜೊತೆ ಜೇನು ತೆಗೆಯಲು ಹೋಗಿದ್ದ ಏಳು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಗ್ರಾಮದ ಶಶಿನಾಯ್ಕ್ ಎಂಬವರ ಪುತ್ರ ಆದಿತ್ಯ (7) ಅನುಮಾನಸ್ಪದವಾಗಿ ಮೃತಪಟ್ಟ ಬಾಲಕ. ಬುಧವಾರ ಬೆಳಗ್ಗೆ ಮಾವ ತಾವರೆನಾಯ್ಕ್ ಜೊತೆ

ನಕಲಿ ಪದವಿ ಅಂಕಪಟ್ಟಿ ಮಾರಾಟ ದಂಧೆ ಆರೋಪಿ ಅರೆಸ್ಟ್‌

ನಕಲಿ ಪದವಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಮಾರುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಂಧೆಯ ಪ್ರಮುಖ ಸೂತ್ರಧಾರಿಗಳಾದ ಕಾರ್ತಿಕ್ ಹಾಗೂ ಆರ್ಯನ್

ಸ್ವ ಉದ್ಯೋಗದ ಆಮಿಷ: ಮಹಿಳೆಯರಿಂದ 10 ಕೋಟಿ ರೂಪಾಯಿ ಪಡೆದು ಪರಾರಿ

ಮನೆಯಲ್ಲೇ ಕುಳಿತು  ಸ್ವ ಉದ್ಯೋಗದ  ಮೂಲಕ ಕೈತುಂಬಾ ಸಂಪಾದಿಸಿ ಎಂಬ ಜಾಹೀರಾತು ಇದ್ದ ಬದ್ದ ಸ್ವಲ್ಪ ಹಣವನ್ನು ಹೂಡಿಕೆ ಮಾಡಿದ್ದ ನೂರಾರು ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಭಾರಿ ವಂಚನೆಯಾಗಿರುವ ಘಟನೆ ಹಾವೇರಿಯಲ್ಲಿ ಬೆಳಕಿಗೆ ಬಂದಿದೆ. ಹಾವೇರಿಯ ಅಶ್ವಿನಿ ನಗರದಲ್ಲಿ

ಶಾಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಶಿಕ್ಷಕರ ಕಿರುಕುಳವೆಂದು ಆರೋಪ

ಬೀದರ್‌ನ ಪ್ರತಾಪ್ ನಗರದ ಬಳಿಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲೆಯ 4ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಾಂತಿನಗರದ ನಿವಾಸಿ ಸಮೀರ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪ ಕೇಳಿ

ಕೆಲಸಕ್ಕಿದ್ದ ಮನೆಯಿಂದ 25 ಲಕ್ಷ ರೂ.ಕಳವುಗೈದು ಪರಾರಿಯಾಗುತ್ತಿದ್ದ ದಂಪತಿ ಅರೆಸ್ಟ್‌

ಬೆಂಗಳೂರಿನ ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿದ್ದ ನೇಪಾಳಿ ದಂಪತಿ, 25 ಲಕ್ಷ ರೂಪಾಯಿ ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಅಮೃತಹಳ್ಳಿ ಪೊಲೀಸರು ದಾಳಿ ನಡೆಸಿ ಬಂಧಿಸಿ ಹಣ ವಶಕ್ಕೆ ಪಡೆದುಕೊಂಡಿದ್ದಾರೆ. ನೇಪಾಳದ ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಬಂಧಿತರು. ದಂಪತಿ