Menu

ಬೇರೆಯವರ ಹೆಸರಲ್ಲಿ ಬುಕ್‌ ಆಗಿದ್ದ ಲಾಡ್ಜ್‌ ರೂಂಗೆ ಬಂದಿದ್ದಾತ ಶವವಾಗಿ ಪತ್ತೆ

ಬೆಂಗಳೂರಿನ ಮಡಿವಾಳದ ಮಾರುತಿ ನಗರದಲ್ಲಿರುವ ಖಾಸಗಿ ಲಾಡ್ಜ್‌ನಲ್ಲಿ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಪುಳಿಯಂಪಟ್ಟಿ ನಿವಾಸಿ ಮುರಳಿ ಅಲಿಯಾಸ್ ಮಧು (38) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಲಾಡ್ಜ್‌ ರೂಂನ ಹಾಸಿಗೆಯ ಮೇಲೆ ಅಸ್ವಸ್ಥ ಸ್ಥಿತಿಯಲ್ಲಿ ಬಿದ್ದುಕೊಂಡು ಮೃತಪಟ್ಟಿದ್ದಾನೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರರಿಗೆ ಕುತೂಹಲಕರ ಮಾಹಿತಿ ಸಿಕ್ಕಿದೆ, ಲಾಡ್ಜ್‌ನಲ್ಲಿ ರೂಂ ಅನ್ನು ಬೇರೆ ವ್ಯಕ್ತಿಯ ಹೆಸರಲ್ಲಿ ಬುಕ್ ಮಾಡಲಾಗಿತ್ತು. ಎಂಟ್ರಿ ದಾಖಲೆ ಇಲ್ಲದೆ ಮುರಳಿ ಅದೇ ರೂಂಗೆ ಬಂದಿದ್ದ

ಪೊದೆಯೊಳಗೆ ನವಜಾತ ಹೆಣ್ಣು ಶಿಶು ಪತ್ತೆ: ಜಿಲ್ಲಾಡಳಿತದಿಂದ ರಕ್ಷಣೆ

ಚಿಕ್ಕಮಗಳೂರು ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಕುಮಾರ ದೇವಸ್ಥಾನದ ಬಳಿ ನವಜಾತ ಹೆಣ್ಣು ಮಗುವನ್ನು ಹೆತ್ತ ತಾಯಿ ರಸ್ತೆ ಬದಿಯ ಮುಳ್ಳಿನ ಪೊದೆಯಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಂದು ದಿನದ ಹಸುಗೂಸನ್ನು ಟವೆಲ್‌ನಲ್ಲಿ

ಲಿಫ್ಟ್‌ ಸ್ಥಗಿತ: ಏಳು ವರ್ಷದ ಬಾಲಕ ಸಾವು

ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್‌ಮೆಂಟ್‌ ಕಟ್ಟಡದಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ ರಾತ್ರಿ 10

ದುಬಾರೆಯಲ್ಲಿ ಮಹಿಳೆ, ಆನೆ ಸಾವು: ವರದಿ ಕಡೆಗಣಿಸಿ ಬೇಜವಾಬ್ದಾರಿ ತೋರಿದ ಅರಣ್ಯ ಇಲಾಖೆ ಕಾರಣ

ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಎರಡು ದಿನಗಳ ಹಿಂದೆ ಆನೆಗಳ ನಡುವಿನ ಕಾದಾಟಕ್ಕೆ ಚೆನ್ನೈನ ಪ್ರವಾಸಿ ಮಹಿಳೆ ತುಳಸಿ (33) ಬಲಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಎಂಬ ಸಾಕಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ದುರಂತಕ್ಕೆ ಅರಣ್ಯ ಇಲಾಖೆಯ

ಆಭರಣ ಖರೀದಿಸುವುದಾಗಿ ಉದ್ಯಮಿಯಿಂದ ಮೂರು ಕೋಟಿ ರೂ. ಮೌಲ್ಯದ ಚಿನ್ನ ದೋಚಿದ ವಂಚಕರು

ಬೆಂಗಳೂರಿನ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ ಮೂರು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಉದ್ಯಮಿಗೆ ವಂಚಿಸಿರುವ ಘಟನೆ ನಡೆದಿದೆ. ವಂಚಕರು ಒಂದು ಕೆಜಿ 850 ಗ್ರಾಂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ. ನಗರ್ತ ಪೇಟೆಯಲ್ಲಿರುವ ‘ಮೆಹ್ತಾ ಜ್ಯುವೆಲ್ಲರಿ’

ಅಮೆರಿಕದಿಂದ ಜೀವಂತ ಗುಂಡುಗಳನ್ನು ತಂದಿದ್ದಾತ ಬೆಂಗಳೂರಿನಲ್ಲಿ ಅರೆಸ್ಟ್‌

ವಿದೇಶದಿಂದ ಅಕ್ರಮವಾಗಿ ರಿವಾಲ್ವಾರ್‌ನ ಏಳು ಜೀವಂತ ಗುಂಡುಗಳನ್ನು ತಂದಿದ್ದ ಆರೋಪದಡಿ ಅನಿವಾಸಿ ಭಾರತೀಯನೊಬ್ಬನನ್ನು ಬೆಂಗಳೂರು ಜೆ.ಸಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್‌.ಟಿ.ನಗರದ ಮುತ್ತಾವರ್ ಅರ್ಮಾನ್ ಬಂಧಿತ. ಆರೋಪಿಯಿಂದ ರೂಗರ್ ಕಂಪನಿಯ ಏಳು ಜೀವಂತ ಗುಂಡುಗಳ ಮ್ಯಾಗ್ಜಿನ್‌ ಜಪ್ತಿ ಮಾಡಲಾಗಿದೆ. ಸ್ನೇಹಿತನ ಜತೆ

ತಾಯಿ ಬೈದರೆಂದು ಪತ್ರ ಬರೆದಿಟ್ಟು ಮನೆ ತೊರೆದ ಮಂಡ್ಯದ ಬಾಲಕಿಯರು

ತಾಯಿ ಬೈದಿದ್ದಕ್ಕೆ ಸಿಟ್ಟಾಗಿ ಸೋದರಿ ಬಾಲಕಿಯರಿಬ್ಬರು ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಎಂಬವರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಸೋದರಿಯರು. ಯಾವುದೋ ವಿಷಯಕ್ಕೆ ತಾಯಿ ಬೈದಿದ್ದಾರೆ. ಇದರಿಂದ ನೊಂದು ಭಾವುಕ

ಕೋಟಿ ರೂ. ವರದಕ್ಷಿಣೆ, ಫಾರ್ಚುನರ್‌ ಕಾರು, ಕೋಟಿ ರೂ. ವೆಚ್ಚದಲ್ಲಿ ಮದುವೆ: 14 ತಿಂಗಳಲ್ಲಿ ಮಗಳು ಸುಸೈಡ್‌

ಒಂದು ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ ಕೋಟಿ ರೂಪಾಯಿ ವೆಚ್ಚದಲ್ಲಿ ಮದುವೆ, 14 ತಿಂಗಳಲ್ಲಿ ಮಗಳ ಆತ್ಮಹತ್ಯೆ ಇದು ಗ್ರೇಟರ್ ನೋಯ್ಡಾದ ಜಲ್ಪುರ ವಲಯದಲ್ಲಿ ನಡೆದ ದುರಂತ ಕಥೆ. ಮದುವೆಯಾದ 14 ತಿಂಗಳಿಗೆ ಬದುಕು ಭಾರವಾಗಿ 24 ವರ್ಷದ

ದಾವಣಗೆರೆಯಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಅತ್ಯಾಚಾರಿ ಅರೆಸ್ಟ್‌

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರಗೈದು ಆಕೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬೋಗಳೆರಹಟ್ಟಿ ಗ್ರಾಮದ ಟ್ರ್ಯಾಕ್ಟರ್ ಚಾಲಕ

ಮನೆ ಲೀಸ್‌ ಆಫರ್‌ ಮುಂದಿಟ್ಟು ಗ್ರಾಹಕರಿಗೆ 200 ಕೋಟಿ ರೂ. ವಂಚನೆ

ಬೆಂಗಳೂರಿನಲ್ಲಿ ಮನೆ ಲೀಸ್​ಗೆ ನೀಡುವುದಾಗಿ ಗ್ರಾಹಕರಿಗೆ ಭರ್ಜರಿ ಆಫರ್‌ಗಳನ್ನು ನೀಡುವ ಮೂಲಕ ಕಂಪೆನಿಯೊಂದು 200 ಕೋಟಿ ರೂ.ಗೂ ಅಧಿಕ ಹಣ ವಂಚಿಸಿರುವ ಪ್ರಕರಣ ಬಹಿರಂಗವಾಗಿದೆ. ಜಾನ್ಸ್ ಅಸೆಟ್ ಹೆಸರಿನ ಮಿಡಿಯೇಟರ್ ಕಂಪನಿಯು 300ಕ್ಕೂ ಹೆಚ್ಚು ಜನರಿಗೆ ವಂಚಿಸಿದ್ದು, ಮಾಲೀಕ ಪರಾರಿಯಾಗಿದ್ದಾನೆ. ಕಂಪನಿ