Menu

ಕೊಲೆ ಆರೋಪಿ ಕಮಲಾಕರ್‌ ಭಟ್‌ಗೆ ಪೋಕ್ಸೊ ಸಂಕಷ್ಟ

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ  ವ್ಯಕ್ತಿಯ  ಕೊಲೆ ಪ್ರಕರಣದ ಆರೋಪಿಯಾಗಿರುವ  ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಮಲಾಕರ್‌ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಕಮಲಾಕರ್‌ ಭಟ್‌ನನ್ನು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್‌ಗೆ ಹಾಜರುಪಡಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ

ಅನೈತಿಕ ಸಂಬಂಧ: ಪ್ರೇಯಸಿಯ ಗಂಡನಿಗೆ ಮದ್ಯ ಕುಡಿಸಿ ಕೊಲೆ

ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಿದೆ ಎಂದು ಪ್ರೇಯಸಿಯ ಪತಿಯನ್ನು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸುನೀಲ್ ನಾಯಕ್ ಕೊಲೆಯಾದ ವ್ಯಕ್ತಿ.  ಸುನೀಲ್‌ ನಾಯಕನ ಪತ್ನಿಯ ಪ್ರಿಯಕರ ಬಸುದೇವ್ ಮಲ್ಲಿಕ್ ಕೊಲೆ ಮಾಡಿದಾತ. ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ

ಗಾಜನೂರು ರೆಸಾರ್ಟ್‌ನಲ್ಲಿ ವಿದ್ಯುತ್‌ ಸ್ಪರ್ಶಕ್ಕೆ ಮಹಿಳೆ ಬಲಿ

ಶಿವಮೊಗ್ಗದ ಗಾಜನೂರು ಬಳಿಯ ತುಂತುರು ರೆಸಾರ್ಟ್‌ನಲ್ಲಿ ವಿದ್ಯುತ್ ಶಾಕ್‌ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಬ್ಬಲಗೆರೆ ಗ್ರಾಮದ ನಿವಾಸಿ ನಾಗಮ್ಮ (45) ಮೃತಪಟ್ಟವರು. ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ನಿಶ್ಚಿತಾರ್ಥ ಕಾರ್ಯಕ್ರಮದ ಕ್ಯಾಟರಿಂಗ್ ಕೆಲಸಕ್ಕೆ ನಾಗಮ್ಮ ತೆರಳಿದ್ದರು. ರೆಸಾರ್ಟ್ ಅಲಂಕಾರಕ್ಕಾಗಿ ಅಳವಡಿಸಲಾಗಿದ್ದ ಲೈಟಿಂಗ್‌ನಿಂದಾಗಿ ಬೇಲಿಗೆ ವಿದ್ಯುತ್ ಪ್ರವಹಿಸಿತ್ತು, 

ಲವ್‌, ಸೆಕ್ಸ್‌ ಬಳಿಕ ಮದುವೆಗೆ ಮೂರು ಕೋಟಿ ಬೇಡಿಕೆಯಿಟ್ಟ ಯುವಕನ ಬಂಧನ

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಬ್ಬ ಬೆಳಗಾವಿಯ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆಯಾಗಲು ಮೂರು ಕೋಟಿ ರೂಪಾಯಿ ಬೇಡಿಕೆಯಿಟ್ಟು ವಂಚಿಸಿದ್ದಾನೆ.  ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಶಹಾಪುರ ಪೊಲೀಸರು ಆರೋಪಿ ಈಶ್ವರಸಿಂಗ್ ಬಡಗೂಜರ್‌ನನ್ನು ಬಂಧಿಸಿದ್ದಾರೆ. ಆರೋಪಿಇನ್‌ಸ್ಟಾಗ್ರಾಂ ಮೂಲಕ ಸಂತ್ರಸ್ತ ಯುವತಿಯ

ಮಹಿಳೆ ಆತ್ಮಹತ್ಯೆ: ವಿಷಯ ತಿಳಿದು ಆಸ್ಪತ್ರೆಗೆ ಬರುತ್ತಿದ್ದ ಪತಿ ಅಪಘಾತದಲ್ಲಿ ಸಾವು

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ತಿಳಿದು ಆಸ್ಪತ್ರೆಗೆ ಆಗಮಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ. ಮಧುರಾ ಕರೆಪ್ಪ ಮಾದರ (30), ಕರೆಪ್ಪ ಗಂಗಪ್ಪ ಮಾದರ (36) ಮೃತ ದಂಪತಿ.‌ ಮಧುರಾ ಹೊಟ್ಟೆನೋವಿನಿಂದ

ಸ್ನೇಹಿತನ ಮದುವೆಗೆಂದು ಬೆಂಗಳೂರಿನಿಂದ ಹೋಗಿದ್ದ ಟೆಕ್ಕಿ ಭದ್ರಾ ನದಿ ಪಾಲು

ಚಿಕ್ಕಮಗಳೂರು ನರಸಿಂಹರಾಜಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ವ್ಯಕ್ತಿ ಅಭಿಷೇಕ್ (27)ಗದಗದವರಾಗಿದ್ದು, ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಭಿಷೇಕ್ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಇತರ

ಹಾವೇರಿಯಲ್ಲಿ ಟ್ರ್ಯಾಕ್ಟರ್‌ ಹರಿದು ಮನೆ ಮುಂದೆ ನಿಂತಿದ್ದ ಮಗು ಸಾವು

ಹಾವೇರಿಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಎರಡು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದಿದ್ದು, ಮಗು ಸ್ಥಳದಲ್ಲಿಯೇ ಅಸು ನೀಗಿದೆ. ರಬೀಯಾ ದೊಡ್ಡಮನಿ ಮೃತಪಟ್ಟ ಮಗು. ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಬಾಲಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಒಂಬತ್ತು ವರ್ಷದ ಬಾಲಕಿ ಸ್ಥಳದಲ್ಲೇ ಅಸು ನೀಗಿರುವ ಘಟನೆ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ

ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು

ಬೆಂಗಳೂರು ನಗರದ ನಾನಾ ಕಡೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದ್ದು, 272 ಅಕ್ರಮ ಬಾಂಗ್ಲಾ ವಲಸಿಗರನ್ನು  ಗಡಿಪಾರು ಮಾಡಲಾಗಿದೆ. ಗಹಡಿಪಾರುಗೊಂಡವರಲ್ಲಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಸಿಸಿಬಿ ಪೊಲೀಸರು