Menu

ಗೋಣಿಕೊಪ್ಪದಲ್ಲಿ ಕಾಡಾನೆ ದಾಳಿಗೆ ಪ್ರವಾಸಿ ಬಲಿ

ಕಾಡನೆ ದಾಳಿಗೆ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ತೆರಲು  ಗ್ರಾಮದಲ್ಲಿ ನಡೆದಿದೆ.  ಬೆಂಗಳೂರು ಆರ್ ಆರ್ ನಗರದ ಮುರಳಿಕೃಷ್ಣ (40) ಎಂದು ಆನೆ ದಾಳಿಗೆ ಬಲಿಯಾದವರು ಗುರುತಿಸಲಾಗಿದೆ. ಅವರು ಸ್ಥಳೀಯ ಹೋಂಸ್ಟೇಯೊಂದರಲ್ಲಿ ತಂಗಿದ್ದು, ವಿಹಾರಕ್ಕಾಗಿ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ನಾಯಿಯೊಂದನ್ನು ಅಟ್ಟಿಸಿಕೊಂಡು ಬಂದ ಕಾಡಾನೆ,  ಮುರಳಿಕೃಷ್ಣ ಅವರ ಮೇಲೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿದೆ.  ತಕ್ಷಣ ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದರಾದರೂ,

200 ರೂ.ಗಾಗಿ ಮಂಗಳಮುಖಿಯ ಕೊಲೆಗೈದು ಪರಾರಿಯಾಗಿದ್ದವ ಅರೆಸ್ಟ್‌

ಬೆಂಗಳೂರಿನ ಮೆಜೆಸ್ಟಿಕ್‌ ಬಿಎಂಟಿಸಿ ಬಸ್‌ನಿಲ್ದಾಣದಲ್ಲಿ ತಡರಾತ್ರಿ ಮಂಗಳಮುಖಿಯೊಬ್ಬರನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.  ರಾಮಮೂರ್ತಿ ನಗರದ ಗೌತಮ್ (29) ಮಂಗಳಮುಖಿಯನ್ನು ೨೦೦ ರೂಪಾಯಿಗಾಗಿ ಕೊಲೆ ಮಾಡಿದ ಕಿರಾತಕ ಎಂದು ಗುರುತಿಸಲಾಗಿದೆ. ರಾತ್ರಿ ದರೋಡೆ ಮಾಡುವುದನ್ನೇ ಆತ ಉದ್ಯೋಗವನ್ನಾಗಿಸಿಕೊಂಡ

ಮಡಿಕೇರಿಯಲ್ಲಿ ಲಾರಿ ಡಿಕ್ಕಿ ಹೊಡೆದು ಟ್ಯಾಕ್ಸಿ ಚಾಲಕ ಸಾವು

ಮಡಿಕೇರಿ ನಗರದ ತಿಮ್ಮಯ್ಯ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಟ್ಯಾಕ್ಸಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ  ನಡೆದಿದೆ. ಮೃತರನ್ನು ಗಣಪತಿ ಬೀದಿ ನಿವಾಸಿ ಸಾಹಿಲ್ (24) ಎಂದು ಗುರುತಿಸಲಾಗಿದೆ. ಮಂಗಳೂರು ರಸ್ತೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ತಿಮ್ಮಯ್ಯ

ಔಷಧ ಘಟಕ ಸ್ಫೋಟಕ್ಕೆ ಇಬ್ಬರು ಬಲಿ, ಉಕ್ಕು ಕಾರ್ಖಾನೆ ಸ್ಫೋಟದಲ್ಲಿ ಮೂವರ ಸಾವು

ತೆಲಂಗಾಣದ ಯಾದಾದ್ರಿ ಭುವನಗಿರಿ ಜಿಲ್ಲೆಯ ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿರುವ ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಮೂವರು ಇಂಜಿನಿಯರ್‌ಗಳು ಅಸು ನೀಗಿದ್ದಾರೆ. ಔಷಧ ತಯಾರಿಕಾ ಘಟಕದಲ್ಲಿ ಸ್ಫೋಟಕ್ಕೆ ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ,

ಹೊಸ ಮೊಬೈಲ್‌ಗಾಗಿ ಜಗಳ: ಪ್ರಪಾತಕ್ಕೆ ಜಿಗಿದ ಮಗನ ರಕ್ಷಿಸಲು ಹೋದ ತಂದೆಯೂ ಸಾವು, ಪ್ರತ್ಯಕ್ಷದರ್ಶಿ ತಾಯಿ ಆತ್ಮಹತ್ಯೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ  ಮಾಥೇರಾನ್‌ ಬೆಟ್ಟದಿಂದ ಯುವಕನೊಬ್ಬ ಪ್ರಪಾತಕ್ಕೆ ಹಾರಿದ್ದು, ರಕ್ಷಿಸಲು ಹೋದ ತಂದೆಯೂ ಬಿದ್ದು ಮೃತಪಟ್ಟರೆ, ಇದನ್ನು ಕಣ್ಣಾರೆ ಕಂಡ ತಾಯಿ ಕೂಡ ಅದೇ ಪ್ರಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ೧೯ ವರ್ಷದ ಯುವಕ ಕುನಾಲ್‌ ಎಂಬಾತ ಹೊಸ ಮೊಬೈಲ್‌

ಪಾಕ್‌ ಜೊತೆ ಸಂಪರ್ಕ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯ ಬಂಧನ

ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರದ ವ್ಯಕ್ತಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ ( 28 ) ಬಂಧಿತ ಆರೋಪಿ. ಕೌಂಟರ್ ಇಂಟಲಿಜೆನ್ಸ್ ಸೆಲ್ ಮತ್ತು ಸೆಂಟ್ರಲ್ ಐಬಿ ಅಧಿಕಾರಿಗಳ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ

ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್‌ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಗುರುವಾರ ಬೆಳಗ್ಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದ ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಅವರ ನಾಪತ್ತೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜ್ಞಾನೇಂದ್ರ ಕುಮಾರ್‌ ದೆಹಲಿಗೆ ಹೋಗಲೆಂದು ವಿಮಾನ

ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ಹಂಪಿಯಲ್ಲಿ ನದಿಪಾಲು

ವಿಜಯನಗರದ ಹೊಸಕೋಟೆ ತಾಲೂಕಿನಲ್ಲಿರುವ ಹಂಪಿ ಪ್ರವಾಸಕ್ಕೆ ಬಂದಿದ್ದ ತಾಯಿ ಮತ್ತು ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಆಂಧ್ರ ಪ್ರದ್ರೇಶದ ಕರ್ನೂಲು ಜಿಲ್ಲೆಯ ಸೂಳೆಕೆರೆ ಗ್ರಾಮದಿಂದ ಸಂಬಂಧಿಕರೊಂದಿಗೆ ಬಂದಿದ್ದ ಯಾಸ್ಮೀನ್(13) ಹಾಗೂ ತಾಯಿ ಶಾಹೀನ್(38) ಹಂಪಿ ಬಳಿಯ ತುಂಗಭದ್ರಾ ನದಿಯಲ್ಲಿ ನಾಪತ್ತೆಯಾದವರು. ಅಡುಗೆ

ಸತ್ತಿದ್ದ ಚಿರತೆಯನ್ನು ಸುಟ್ಟ ವೀಡಿಯೊ ವೈರಲ್‌: ಮೂವರ ಬಂಧನ

ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್‌ ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿದ್ದ ಚಿರತೆಯನ್ನು ಗ್ರಾಮಸ್ಥರು ಸುಟ್ಟು ಹಾಕಿರುವ ಪ್ರಕರಣ ಸಂಬಂಧ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚಿರತೆಯನ್ನು ಸುಟ್ಟ ವೀಡಿಯೊ ವೈರಲ್‌ ಆದ ಬಳಿಕ ಅರಣ್ಯಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಚಿರತೆ ಸತ್ತಿರುವುದನ್ನು ಅರಣ್ಯ

ಪ್ರಜ್ವಲ್‌ ರೇವಣ್ಣ ವಿರುದ್ಧ ಸಾಕ್ಷಿಗೆ ಬೆದರಿಕೆ ಆರೋಪ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕೈದಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ದಾಖಲಿಸಿದ ಬಳಿಕ ಬೆದರಿಕೆ ಕರೆಗಳು ಬಂದಿರುವುದಾಗಿ ಪ್ರಮುಖ ಸಾಕ್ಷಿಯೊಬ್ಬರು ವಿಚಾರಣೆ ವೇಳೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ತನ್ನ ಮತ್ತು ತನ್ನ ಮಗನ ಸುರಕ್ಷತೆ