Menu

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 13.14 ಕೋಟಿ ರೂ. ಮೌಲ್ಯದ ಗಾಂಜಾ ವಶ

ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ನಡೆಸುವಾಗ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಆರು ಪ್ರಯಾಣಿಕರನ್ನು ಬಂಧಿಸಲಾಗಿದೆ.  ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನೀಡಿದ ಅಧಿಕೃತ ಮಾಹಿತಿ ಪ್ರಕಾರ, ಜೂನ್ 11ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಐವರನ್ನು ತಪಾಸಣೆ

ಅಯೋಧ್ಯೆ ಮಂದಿರ ದೇಣಿಗೆಯಲ್ಲಿ ಅಕ್ರಮ: ಸುಪ್ರೀಂಗೆ ಅರ್ಜಿ ಸಲ್ಲಿಕೆ

ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿರುವ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್‌ಗೆ ತಲುಪಿದೆ. ದೇವಸ್ಥಾನದ ವಿಚಾರದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಿದೆ.

ವಿಮಾನ ಪತನಗೊಂಡು 11 ಸ್ಕೈಡೈವರ್‌ಗಳು, ಪೈಲಟ್ ಸಾವು

ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸ್ಕೈಡೈವಿಂಗ್ ಕಂಪೆನಿ ಗುತ್ತಿಗೆ ಪಡೆದುಕೊಂಡಿದ್ದ ವಿಮಾನ ಅಪಘಾತಗೊಂಡಿದ್ದು, ಹನ್ನೊಂದು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಸ್ಕೈಡೈವಿಂಗ್ ಕಂಪನಿ ಗುತ್ತಿಗೆ ಪಡೆದಿದ್ದ ವಿಮಾನವು ಹಾರಾಟ ವಿಫಲವಾಗಿ ಎಡ ತಿರುವು ಪಡೆದು ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದಿಂದ 200

ದೇಗುಲದಿಂದ ವಾಪಸಾಗುತ್ತಿದ್ದಾಗ ವಾಹನ ತೆರೆದ ಬಾವಿಗೆ ಉರುಳಿ ಎಂಟು ಮಂದಿ ಸಾವು

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.  ಘಟನೆಯಲ್ಲಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಢರಪುರ ಮೂಲದ

ಪತಿ ಮಗುವನ್ನು ಅಪಹರಿಸಿರುವುದಾಗಿ ಪತ್ನಿ ದೂರು

ನನ್ನ ಪತಿಯೇ ಐದು ವರ್ಷದ ಮಗನನ್ನು ಕಿಡ್ನಾಪ್ ಮಾಡಿದ್ದಾನೆ, ದಯವಿಟ್ಟು ನನ್ನ ಮಗನನ್ನು ಹುಡುಕಿಕೊಡಿ ಎಂದು ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಪ್ರಕರಣ ಮಡಿಕೇರಿ ತಾಲೂಕಿನ ಕಾಂತೂರು ಮೂರ್ನಾಡುವಿನಲ್ಲಿ ನಡೆದಿದೆ. ಮೂರ್ನಾಡು ಗ್ರಾಮದ ನಿವಾಸಿ ಭವ್ಯ ಮಹಿಳೆ ಆರು ತಿಂಗಳ

ಶಿವಮೊಗ್ಗದಲ್ಲಿ ರೌಡಿಶೀಟರ್‌ ಮುಖ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದ ಐವರ ಬಂಧನ

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ಕ್ರಾಸ್‌ನ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ನರಸಿಂಹ (39) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಅಂಬು ಅನಿಲ್, ಮಧು, ರವಿ, ಹಾಗೂ ಕತ್ತೆ ಕಾರ್ತಿಕ್​,

ಬಾಲಕಿಯ ಅತ್ಯಾಚಾರವೆಸಗಿ ವೀಡಿಯೊ ಮಾಡಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಫುಟ್ಬಾಲ್‌ ಕೋಚ್‌

ಫುಟ್ಬಾಲ್‌ ಪಟುವಾಗಿರುವ ಬಾಲಕಿಯ ಮೇಲೆ ತರಬೇತುದಾರ ಮೂರು ವರ್ಷ ಅತ್ಯಾಚಾರ ಎಸಗಿದ್ದಲ್ಲದೆ, ವೀಡಿಯೊ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡಿರುವ ಪ್ರಕರಣವೊಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಯಾಗಿರುವ ಖಾಸಗಿ ಫುಟ್‌ಬಾಲ್ ತರಬೇತುದಾರ 36 ವರ್ಷದ ಅಭಿಜಿತ್ ಮೆಂಡಲ್ ಎಂಬಾತನನ್ನು ಪೊಲೀಸರು

ಕಾಲೇಜು ಫೀಸ್‌ ಹಣವನ್ನು ಸಾಲ ನೀಡಿದ ವಿದ್ಯಾರ್ಥಿನಿ ವಾಪಸ್‌ ಸಿಗದೆ ಆತ್ಮಹತ್ಯೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ ಹಣವನ್ನು ಪರಿಚಯಸ್ಥನಿಗೆ ಸಾಲವಾಗಿ ನೀಡಿದ್ದ ವಿದ್ಯಾರ್ಥಿನಿ, ಆ ಹಣ ಮರಳಿ ಸಿಗದ ಕಾರಣ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ

ಮನೆಯೊಳಗೆ ನುಗ್ಗಿ ಯೂಟ್ಯೂಬರ್‌ನ ಹತ್ಯೆ

ಯೂಟ್ಯೂಬರ್ ಒಬ್ಬರನ್ನು ಮನೆಯೊಳಗೆ ಕೊಲೆ ಮಾಡಿರುವ ಘಟನೆ ಹೈದರಾಬಾದ್‌ನ ಗೋಲ್ಕೊಂಡ ಪ್ರದೇಶದಲ್ಲಿ ನಡೆದಿದೆ.  ಶೈಕ್ ಮಹಬೂಬ್ ಅಲಿಯಾಸ್ ಚಾಂಡಿ ಮಸೂದ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಗೋಲ್ಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯ ಕುಮಾರ್‌ವಾಡಿಯಲ್ಲಿ ಕೃತ್ಯ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಸೂದ್ ಮಸೀದಿಯಿಂದ

ಬೆಂಗಳೂರಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು: ನಾಲ್ವರ ಸಾವು

ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗುತ್ತಿದ್ದ ಬೈಕ್ ಮಳೆ ನೀರಲ್ಲಿ ಸ್ಕಿಡ್‌ ಆಗಿ ರಸ್ತೆಗೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದು ತೀವ್ರ ಗಾಯಗೊಂಡಿದ್ದ ತಾಯಿ ಕಾಂತಮ್ಮ ಮೃತಪಟ್ಟಿದ್ದಾರೆ. ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ