Menu

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿಗೆ ದಾಳಿ: ಭಾರತೀಯ ಪ್ರಜೆ ಸಾವು

ಕಪ್ಪು ಸಮುದ್ರದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ನಡೆದ ದಾಳಿಯಲ್ಲಿ ಭಾರತೀಯ ಪ್ರಜೆ ಮೃತಪಟ್ಟಿದ್ದಾರೆ. ಜುಲೈ 18 ರಂದು ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಚಲಿಸುತ್ತಿದ್ದ ಎಂವಿ ಒಮೊರ್ಫಿ ಎಂಬ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಈ ದಾಳಿ ನಡೆದಿದೆ. ಹಡಗಿನಲ್ಲಿ ಒಟ್ಟು ಹತ್ತು ಸಿಬ್ಬಂದಿ ಇದ್ದರು. ಅವರಲ್ಲಿ ಮೂವರು ಭಾರತೀಯರು. ಒಬ್ಬ ಭಾರತೀಯ ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಸುರಕ್ಷಿತವಾಗಿದ್ದಾರೆ. ಈ ದಾಳಿಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಗಂಡನ ಕಿರುಕುಳ, ಅನುಮಾನ ಆರೋಪ: ಯುವತಿ ಆತ್ಮಹತ್ಯೆ

ಬೆಂಗಳೂರಿನ ಇಂದಿರಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ವಿವಾಹಿತ ಯುವತಿ 21 ವರ್ಷದ ಪ್ರೇರಣಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕಿರುಕುಳ ಹಾಗೂ ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇತ್ತೀಚೆಗಷ್ಟೇ ಬಿಎಸ್ಸಿ ಮುಗಿಸಿದ್ದ ಪ್ರೇರಣಾ

ದೇಗುಲಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಕೋಲಾರದಲ್ಲಿ ಅಪಘಾತಕ್ಕೆ ಬಲಿ

ಕೋಲಾರದ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗೇಟ್‌ ಬಳಿ ಕ್ಯಾಂಟರ್ ವಾಹನ ಹಾಗೂ ಬೈಕ್‌ ಡಿಕ್ಕಿಯಾಗಿ ದೇವಾಲಯಕ್ಕೆ ತೆರಳುತ್ತಿದ್ದ ಸ್ನೇಹಿತರಿಬ್ಬರು ಸ್ಥಳದಲ್ಲೇ ಅಸು ನೀಗಿದ್ದಾರೆ. ಚಿಂತಾಮಣಿ ತಿಮ್ಮಸಂದ್ರದ ಶಶಿ (25), ಬೆಂಗಳೂರು ನೆಲಮಂಗಲದ ತನುಷ್ (25) ಮೃತಪಟ್ಟವರು. ಕಾಣಿಪಾಕಂ ದೇವಾಲಯಕ್ಕೆ ತೆರಳುತ್ತಿದ್ದಾಗ ಈ

ಆ್ಯಪ್ ಮಹಿಳೆ ಹೇಳಿದ್ದಕ್ಕೆ ಬಟ್ಟೆಬಿಚ್ಚಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ

ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಮಹಿಳೆ ವೀಡಿಯೊ ಕಾಲ್ ಮಾಡಿ ಯುವ ಕ್ರಿಕೆಟಿಗನನ್ನು ಬಟ್ಟೆ ಬಿಚ್ಚುವಂತೆ ಪ್ರಚೋದಿಸಿ ಅದನ್ನು ರೆಕಾರ್ಡ್‌ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್‌ ಮೇಲ್‌ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸೌಜನ್ಯ ಕೇಸ್‌ ತನಿಖೆಯಲ್ಲಿ ಏನು ಮಾಡಿದ್ದೀರಿ: ಸಿಬಿಐಗೆ ಸುಪ್ರೀಂ ತರಾಟೆ

ಸೌಜನ್ಯ ಕೇಸ್‌ಗೆ ಸಂಬಂಧಿಸಿದಂತೆ ಸಿಐಡಿ ವರದಿ ಟ್ರಾನ್ಸ್‌ಲೇಟ್‌ ಬಿಟ್ಟು ಮತ್ತೇನು ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್‌ ಸಿಬಿಐಯನ್ನು ತರಾಟೆಗೆ ತೆಗೆದುಕೊಂಡಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶ

ಅನಾರೋಗ್ಯದಿಂದ ಬೇಸತ್ತ ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರಿನ ಬಸವೇಶ್ವರ ನಗರದಲ್ಲಿ  ಅನಾರೋಗ್ಯದಿಂದ ಬೇಸತ್ತು ವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಈಶ್ವರ್ ಆಚಾರ್ಯ ಹಾಗೂ ಗೌರಿ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಶುಗರ್ ಹಾಗೂ ಬಿಪಿಯಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಇದರಿಂದ ಬೇಸತ್ತು ಜ್ಯೂಸ್‌ಗೆ

ಬೊಮ್ಮಸಂದ್ರ ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ: ಹತ್ತು ಕಾರ್ಮಿಕರಿಗೆ ಗಂಭೀರ ಗಾಯ

ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿರುವ ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಈ ದುರಂತ ನಡೆದಿದ್ದು, ನಾಗರಾಜ್ ರೆಡ್ಡಿ ಅವರು ಬೇರೆಯವರಿಗೆ ಪಿಜಿ ನಡೆಸಲು ಕಟ್ಟಡವನ್ನು ಲೀಸ್‌ಗೆ ನೀಡಿದ್ದರು ಎನ್ನಲಾಗಿದೆ.

ಅಮೆರಿಕದಲ್ಲಿ ರಸ್ತೆ ಅಪಘಾತ: ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಬಲಿ

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೈದರಾಬಾದ್‌ನ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನ ಸೈದಾಬಾದ್ ನಿವಾಸಿಶೇಖ್ ನವೀದ್ ಪತ್ನಿ ಮತ್ತು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುದ್ದಾಗ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ

ಬುಡುಬುಡುಕೆಯವನೆಂದು ನಂಬಿಸಿ ಸಾವಿನ ಕಂಟಕ ಪರಿಹರಿಸುವುದಾಗಿ ಹೇಳಿ ಚಿನ್ನ ದೋಚಿ ಪರಾರಿ

ಬೆಂಗಳೂರಿನಲ್ಲಿ ಬುಡುಬುಡುಕೆಯವನೆಂದು ಹೇಳಿಕೊಂಡು ನಂಬಿಸಿದ ವ್ಯಕ್ತಿ, ಗರ್ಭಿಣಿಗೆ ‘ನಿಮ್ಮ ಮನೆಯಲ್ಲಿ ದೋಷವಿದೆ, ಸಾವಿನ ಕಂಟಕ ಇದೆ’ ಎಂದು ಹೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ಬೆಂಗಳೂರು ಉತ್ತರ ತಾಲೂಕಿನ ಹೆಗ್ಗಡದೇವನಪುರದಲ್ಲಿ ಮೋಹನ್ ಎಂಬವರ ಮನೆಗೆ ಬುಡುಬುಡುಕೆಯವನ ವೇಷದಲ್ಲಿ ಬಂದ

ರಾಮೋಹಳ್ಳಿ ಕೆರೆಯಲ್ಲಿ ಶವ ಪತ್ತೆ: ಕೊಲೆ ಮಾಡಿ ಎಸೆದಿರುವ ಶಂಕೆ

ಬೆಂಗಳೂರಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ರಾಮೋಹಳ್ಳಿಯಲ್ಲಿ ಕೆರೆಯಲ್ಲಿ ಅನುಮಾನಾಸ್ಪದ ರೀತಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸೂಟ್​ಕೇಸ್​ನಲ್ಲಿ ಮಹಿಳೆಯ ಶವ ತುಂಬಿ ಕೆಎಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ರಾಮೋಹಳ್ಳಿಯಲ್ಲಿ ಮಹಿಳೆಯನ್ನು ಕೊಂದು ಎರಡ್ಮೂರು ದಿನಗಳ ಹಿಂದೆ ಸೂಟ್​ಕೇಸ್​ನಲ್ಲಿ ಶವ ತುಂಬಿ ಕೆರೆಗೆ