Menu

ಹುಡುಗರಂತೆ ಡ್ರೆಸ್‌ ಮಾಡಿ ಮನೆ ಕಳವು ಮಾಡುತ್ತಿದ್ದ ಯುವತಿಯರಿಬ್ಬರು ಅರೆಸ್ಟ್‌

ಹುಡುಗರ ಸ್ಟೈಲ್‌ನಲ್ಲೇ ಶರ್ಟ್​, ಪ್ಯಾಂಟ್ ಧರಿಸಿ ಹಗಲು ವೇಳೆಯೇ ಮನೆಗಳಿಗೆ ನುಗ್ಗಿ ಕಳವು ಮಾಡುತ್ತಿದ್ದ ಯುವತಿಯರಿಬ್ಬರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಅವರನ್ನು ಬಂಧಿಸಿದ ಬಳಿಕವೇ ಅವರು ಹುಡುಗರಲ್ಲ ಹುಡುಗಿಯರು ಎಂಬುದು ಪೊಲೀಸರಿಗೆ ಗೊತ್ತಾಗಿದೆ. ಈ ಯುವತಿಯರು ವೇಷ ಬದಲಿಸಿಕೊಂಡು ಬೆಂಗಳೂರು ಹೊರವಲಯದ ಸಂಪಿಗೆಹಳ್ಳಿಯಲ್ಲಿ ಕಳ್ಳತನ ಮಾಡುತ್ತಿದ್ದರು. ಟ್ಯಾನರಿ ರಸ್ತೆಯ ನಿವಾಸಿಗಳಾದ ಶಾಲು–ನೀಲು ಎಂಬ ಯುವತಿಯರು ಹುಡುಗರ ವೇಷದಲ್ಲಿ ಬೈಕ್‌ನಲ್ಲಿ ಓಡಾಡಿಕೊಂಡು ಮನೆ ಮಾಲೀಕರು ಹೊರಗೆ ಹೋದ ಸಮಯ ನೋಡಿ ಕಳ್ಳತನ

ರಾಸಾಯನಿಕ ಬೆರಸಿ ನಕಲಿ ಹಾಲು ತಯಾರಿ: ಐವರ ಬಂಧನ

ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್‌ ಕೆಜಿಎಫ್ ತಾಲೂಕಿನ

ಅನ್ಯ ಧರ್ಮದ ಯುವಕನ ಸಂಬಂಧ: ಹೊಸಪೇಟೆಯಲ್ಲಿ ಕೊಲೆಯಾದ ಮೂರು ಮಕ್ಕಳ ತಾಯಿ

ಎಂಟು ವರ್ಷಗಳಿಂದ ಗಂಡನಿಂದ ದೂರವಾಗಿ ಮೂರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಮಹಿಳೆ ಅನ್ಯ ಧರ್ಮದ ಯುವಕನೊಂದಿಗೆ ಸಂಬಂಧ ಬೆಳೆಸಿ, ಆತನಿಂದಲೇ ಕೊಲೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಚಾಪಲಗಡ್ಡದಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಉಮಾ (32) ಎಂಬಾಕೆ ರೈಲ್ವೆ ಸ್ಟೇಷನ್​​ನಲ್ಲಿ

ರಬಕವಿಬನಹಟ್ಟಿಯಲ್ಲಿ ಆಸ್ತಿಗಾಗಿ ಅಣ್ಣನ ಮಕ್ಕಳಿಂದ ದಾನಕ್ಕೆ ಹೆಸರಾದ ದಾನಜ್ಜಿಯ ಕೊಲೆ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ (ಚಂದ್ರವ್ವ ನೀಲಗಿ) ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾನಜ್ಜಿ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಬಾಗಿಲು ದಾನ ಮಾಡಿದ್ದರು. ಇವರ ಕೊಲೆಗೆ ಸ್ಥಳೀಯರು

ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ

ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್‌ ದೂರು

ಕನ್ನಡದ ನಟಿ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ

ಪ್ರೀತಿ ಹೆಸರಲ್ಲಿ ಸೆಕ್ಸ್‌, ಮದುವೆ ನಿರಾಕರಣೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಸುಸೈಡ್‌ ಯತ್ನ

ಯುವಕನೊಬ್ಬ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ವಿವಾಹವಾಗಲು ನಿರಾಕರಿಸಿದ್ದರಿಂದ ನೊಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ಘಟನೆ ನಡೆದ ಕಾರಣ ಸಮಯಕ್ಕೆ

ನೂರಾರು ಜನರಿಗೆ ವಂಚಿಸುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ಬೆಂಗಳೂರು ಪೊಲೀಸರು: 240 ಕೋಟಿ ಫ್ರೀಜ್

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ​​​ ಜಾಲವನ್ನು ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು ಹತ್ತಿದ ನಗರದ ಹುಳಿಮಾವು ಠಾಣೆ ಪೊಲೀಸರು

ಬೆಂಗಳೂರಲ್ಲಿ ಮೊಮ್ಮಗನ ಎದುರೇ ಅಜ್ಜಿಯ ಕೊಲೆಗೈದಿದ್ದಾತ ಆತ್ಮಹತ್ಯೆ

ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ಮೊಮ್ಮಗನ ಎದುರೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾತ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಕ್ಷಾಯಿಣಮ್ಮ(55) ಎಂಬವರನ್ನು ಶನಿವಾರ ಮಧ್ಯಾಹ್ನ ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ