Menu

ಮನೆಯಲ್ಲಿ ಸಂಗ್ರಹಿಸಿದ್ದ ಸ್ಫೋಟಕ ಸಿಡಿದು ನಾಲ್ವರ ಸಾವು

ಬಾಡಿಗೆ ಮನೆಯಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸಿಡಿದು ನಾಲ್ವರು ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ದಾರುಣ ಘಟನೆಯೊಂದು ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯ ಕದಿರಿ ಮಂಡಲದ ಕುಮ್ಮರವಂದ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟಕಗಳನ್ನು ಇರಿಸಲಾಗಿತ್ತು ಎನ್ನಲಾದ ಬಾಡಿಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಪಾಯದ ಅರಿವಿಲ್ಲದ ಗ್ರಾಮಸ್ಥರು ಬೆಂಕಿಯನ್ನು ನಂದಿಸಲು ಸಹಾಯ ಮಾಡಲೆಂದು ಘಟನಾ ಸ್ಥಳಕ್ಕೆ ಬಂದಾಗ ಸ್ಫೋಟಕ್ಕೆ ಬಲಿಯಾಗಿದ್ದಾರೆ. ಸ್ಫೋಟಕಗಳ ಅಸುರಕ್ಷಿತ ಮತ್ತು ಅಕ್ರಮ ಸಂಗ್ರಹಣೆಯ ಬಗ್ಗೆ

ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ: ಮಹಿಳೆ ಸಾವು ಪ್ರಕರಣದಲ್ಲಿ ವೈದ್ಯರ ವಿರುದ್ಧ ಎಫ್‌ಐಆರ್‌

ಲ್ಯಾಪ್ರೊಸ್ಕೋಪಿಕ್ ಟ್ಯೂಬೆಕ್ಟಮಿ ಶಸ್ತ್ರಚಿಕಿತ್ಸೆ ಬಳಿಕ 21 ವರ್ಷದ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ನಿರ್ಲಕ್ಷ್ಯತನ ಆರೋಪದಡಿ ಕೇಸ್‌ ದಾಖಲಾಗಿದೆ. ಶಸ್ತ್ರಚಿಕಿತ್ಸೆಯ ನಂತರ ಉಂಟಾದ ಗಂಭೀರ ಸಮಸ್ಯೆಗಳಿಂದಾಗಿ ಮಹಿಳೆ ಮೃತಪಟ್ಟಿದ್ದಾರೆ. ಕಳೆದ ವರ್ಷ ಮಾರ್ಚ್

ಬೆಂಗಳೂರಿನಲ್ಲಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು ನಗರದ ನಾನಾ ಕಡೆ ದಾಳಿ ನಡೆಸಿದ ಪೊಲೀಸರು 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ. ಯಲಹಂಕ,

ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್‌ ಆಮಿಷ: ಕಡೂರು ರೈತರಿಗೆ 1.35 ಕೋಟಿ ರೂ. ವಂಚನೆ

ಕೃಷಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆಸರ್ಕಾರಿ ಇಲಾಖೆಗಳಿಂದ ರಿಯಾಯಿತಿ ದರದಲ್ಲಿ ಟ್ರ್ಯಾಕ್ಟರ್ ಮತ್ತು ಇತರ ಕೃಷಿ ಉಪಕರಣಗಳನ್ನು ಕೊಡಿಸುವುದಾಗಿ ರೈತರನ್ನು ನಂಬಿಸಿ 1,34,98,400 ರೂಪಾಯಿ ಪಡೆದು ವಂಚಿಸಿರುವ ಪ್ರಕರಣ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೈ.

ಐಎಎಸ್ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳಿಗೆ ಕೋಟ್ಯಾಂತರ ರೂ. ವಂಚನೆ

2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ತಾನೆಂದು ನಂಬಿಸಿ ಸರ್ಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ್ದ ಮಿಥುನ್ ಎಂಬಾತನನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಈ ವಂಚನಕ ಬಲೆಗೆ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಸರ್ಜನ್ ಬಿದ್ದಿದ್ದಾರೆಂಬುದು

ಡಿಜಿಟಲ್ ಅರೆಸ್ಟ್: ದಾವಣಗೆರೆಯ ನಿವೃತ್ತ ಪ್ರಾಂಶುಪಾಲರಿಗೆ 15 ಲಕ್ಷ ರೂ. ವಂಚನೆ

ದಾವಣಗೆರೆ  ನಗರದ ಎಸ್.ಎಸ್ ಲೇಔಟ್‌ನ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ‘ಡಿಜಿಟಲ್ ಅರೆಸ್ಟ್’ ಮಾಡುವ ಮೂಲಕ ಸೈಬರ್ ವಂಚಕರು  15.12 ಲಕ್ಷ ರೂಪಾಯಿಗಳನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾರ್ಚ್ 25ರಂದು 79 ವರ್ಷದ ನಿವೃತ್ತ ಪ್ರಾಂಶುಪಾಲರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ. ತಾನು

ಮಂತ್ರಾಲಯ ಸನ್ನಿಧಿಗೆ ತೆರಳುತ್ತಿದ್ದ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ: ಚಿಕ್ಕಮಗಳೂರಿನ ಎಂಟು ಮಂದಿ ಸಾವು

ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಿಕ್ಕಮಗಳೂರಿನ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶ್ರೀ ಗುರು ರಾಘವೇಂದ್ರ ಸನ್ನಿಧಿ ಮಂತ್ರಾಲಯ ಕ್ಷೇತ್ರದಲ್ಲಿ ಗುರುಗಳ ದರ್ಶನಕ್ಕಾಗಿ ತೆರಳುತ್ತಿದ್ದ ವಾಹನಕ್ಕೆ ಸಿಮೆಂಟ್ ಮತ್ತು ಜಲ್ಲಿಕಲ್ಲು

ರಾಯಚೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮೂವರ ಬಂಧನ

ರಾಯಚೂರು ನಗರ ಹೊರವಲಯದ ನ್ಯಾಷನಲ್ ಲೇಔಟ್‌ನಲ್ಲಿರುವ ವಸತಿ ಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ಅಕ್ರಮ ದಂಧೆಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ರಾಯಚೂರು ಪೊಲೀಸ್ ಠಾಣೆಯ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು, ದಂಧೆಗೆ ಬಲವಂತವಾಗಿ ಬಳಸಿಕೊಳ್ಳಲಾಗಿದ್ದ ಒಬ್ಬ

ಹುಕ್ಕೇರಿಯಲ್ಲಿ ಪತಿಯ ತೊರೆದು ಪ್ರಿಯಕರನ ಜೊತೆ ಹೋದ ತಂಗಿಗೆ ವಿಷವಿಕ್ಕಿ ಹತ್ಯೆ

ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ತೆರಳಿದ್ದ ಯುವತಿಗೆ ಸೋದರ ಸೇರಿದಂತೆ ಕುಟುಂಬದವರು ವಿಷವಿಕ್ಕಿ ಸಾಯಿಸಿ ಸಾಕ್ಷಿ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಬೆಳಗಾವಿಯ ಹುಕ್ಕೇರಿ ನದಿಗುಡಿ ಪ್ರದೇಶದಲ್ಲಿ ನಡೆದಿದೆ. ಸತ್ತೆವ್ವಾ ಹೆಳವರ್ (25) ಎಂಬ ಯುವತಿಯನ್ನು ಕುಟುಂಬಸ್ಥರೇ ವಿಷ ನೀಡಿ ಹತ್ಯೆ

ವಿಜಯಪುರದಲ್ಲಿ ಗುಂಡಿಕ್ಕಿ ರಿಯಲ್‌ ಎಸ್ಟೇಟ್‌ ಉದ್ಯಮಿಯ ಹತ್ಯೆ

ವಿಜಯಪುರ ಹೊರವಲಯದ ಅಲಿಯಾಬಾದ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಜೊತೆಗೆ ಕೃಷಿಕನಾಗಿದ್ದ ವ್ಯಕ್ತಿಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾಜು ಕಡೆ ಗುಂಡಿನ ದಾಳಿಗೆ ಬಲಿಯಾದ ವ್ಯಕ್ತಿ. ಆತ ಕಾರಿನಲ್ಲಿ ವಿಜಯಪುರದತ್ತ ಬರುತ್ತಿರುವಾಗ ಹಂತಕರು ಎದುರಿನಿಂದ ಟಿಪ್ಪರ್‌ ಗುದ್ದಿಸಿದ್ದಾರೆ. ಕಾರಿನ ಡೋರ್