Thursday, November 27, 2025
Menu

ತಂಗಿಯ ಆರತಕ್ಷತೆ ಸಂಭ್ರಮದಲ್ಲಿದ್ದ ಯುವಕರಿಬ್ಬರು ಬೇಲೂರಿನಲ್ಲಿ ಅಪಘಾತಕ್ಕೆ ಬಲಿ

ಬೇಲೂರು ತಾಲೂಕಿನ ಮುತ್ತಗನ್ನೆ ಗ್ರಾಮದ ಬಳಿ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಬೇಲೂರು ಹೊನ್ನೇನಹಳ್ಳಿ ಗ್ರಾಮದ ಲೋಕೇಶ್ (25),‌ ಚಿಕ್ಕಮಗಳೂರು ಮೇನಹಳ್ಳಿ ಗ್ರಾಮದ ಕಿರಣ್ (32) ಮೃತಪಟ್ಟ ಯುವಕರು. ಗುರುವಾರ (ಇಂದು) ಲೋಕೇಶ್ ತಂಗಿ ಆರತಕ್ಷತೆ ಇತ್ತು. ಅದಕ್ಕಾಗಿ ಮಜ್ಜಿಗೆ, ಮೊಸರು ತರಲು ಇಬ್ಬರೂ ಬೈಕ್‌ನಲ್ಲಿ ಬೇಲೂರಿಗೆ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿ ಹೊಡೆದ

ಸೂಟ್‌ಕೇಸ್‌ನಲ್ಲಿ ಥಾಣೆಯ ಯುವತಿ ಶವ: ಲಿವ್ಇನ್ ಪಾರ್ಟ್‌ನರ್ ಅರೆಸ್ಟ್‌

ಥಾಣೆಯ ದೇಸಾಯಿ ಗ್ರಾಮದಲ್ಲಿ ತೊರೆಯೊಂದರ ಸಮೀಪ ಸೂಟ್‌ಕೇಸ್‌ನಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿದ ಆರೋಪದಡಿ ಲಿವ್-ಇನ್ ಪಾರ್ಟನರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ವಾರದ ಹಿಂದೆ ಇಬ್ಬರ ನಡುವೆ ಜಗಳ ನಡೆದಿದ್ದು, ಅದಾದ ಮರುದಿನ ಆರೋಪಿಯು ಯುವತಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ

ವೈಟ್‌ಹೌಸ್‌ ಬಳಿ ಗುಂಡಿನ ದಾಳಿ: ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ಅಮೆರಿಕದ ಶ್ವೇತಭವನ ಸಮೀಪ ನಡೆದ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ರಾಷ್ಟ್ರೀಯ ಭದ್ರತಾ ಪಡೆಯ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯ ಬಳಿಕ ವಾಷಿಂಗ್ಟನ್‌ನಲ್ಲಿ ಬಿಗಿ ಭದ್ರತೆ ಕೈಗೊಂಡು 500 ಹೆಚ್ಚುವರಿ ರಾಷ್ಟ್ರೀಯ ಗಾರ್ಡ್ ಸಿಬ್ಬಂದಿ ನಿಯೋಜಿಸುವಂತೆ ಟ್ರಂಪ್ ಸೂಚಿಸಿದ್ದಾರೆ.

ಮಾನ್ಯತಾ ಟೆಕ್‌ ಪಾರ್ಕ್‌ ಸಮೀಪ ಆ್ಯಂಬುಲೆನ್ಸ್ ಸಂಚಾರಕ್ಕೆ ದುಸ್ತರವಾದ ರಸ್ತೆ: ಗಾಯಾಳು ಸಾವು

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದು, ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸಂಚರಿಸಲಾಗದ ಕಾರಣ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ವರ್ತೂರಿನ 35 ವರ್ಷದ ಆನಂದ್ ಮೃತಪಟ್ಟ ಗಾಯಾಳು.

ಪೋಕ್ಸೋ ಪ್ರಕರಣ: ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ

ಪೋಕ್ಸೋ ಪ್ರಕರಣದ ಆರೋಪಿ, ಚಿತ್ರದುರ್ಗ ಮುರುಘಾಮಠದ ಮಾಜಿ ಪೀಠಾಧಿಪತಿ  ಶಿವಮೂರ್ತಿ ಅವರನ್ನು ಎರಡನೇ  ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷ ಪ್ರಕರಣದ ವಿಚಾರಣೆ ನಡೆದಿದೆ. ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯಲ್ಲಿ ಆರೋಪಿ ಶಿವಮೂರ್ತಿ ಕೋರ್ಟ್‌ಗೆ

ಮಗುವಿಗೆ ಜನ್ಮವಿತ್ತ ಕೊಪ್ಪಳ ವಸತಿನಿಲಯದ ವಿದ್ಯಾರ್ಥಿನಿ

ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದಾಳೆ. ಕುಕನೂರು ಪೋಲಿಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿ ಹೊಟ್ಟೆನೋವಿನಿಂದ ನರಳಾಡಿದ್ದು ತಕ್ಷಣ ಕೊಪ್ಪಳದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ

ನಕಲಿ ನಂದಿನಿ ತುಪ್ಪ: ಕಿಂಗ್‌ಪಿನ್‌ ದಂಪತಿ ಅರೆಸ್ಟ್‌

ರಾಜ್ಯದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಮತ್ತು ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಬೆಂಗಳೂರು ಸಿಸಿಬಿ ಪೊಲೀಸರು ಈ ಅಕ್ರಮದ ಪ್ರಮುಖ ಸೂತ್ರಧಾರರಾದ ಮೈಸೂರಿನ ಗಂಡ ಮತ್ತು ಹೆಂಡತಿಯನ್ನು ಬಂಧಿಸಿದ್ದಾರೆ. ಶಿವಕುಮಾರ್ ಮತ್ತು ಪತ್ನಿ ರಮ್ಯಾ ಬಂಧಿತರಾಗಿದ್ದು, ಸಿಸಿಬಿ ಪೊಲೀಸರ

ಮೈಸೂರಿನಲ್ಲಿ ಯುವಕನ ಕೊಚ್ಚಿ ಕೊಲೆ

ಮೈಸೂರಿನ ಶಾಂತಿ ನಗರದಲ್ಲಿ ಬುಧವಾರ ಬೆಳಗ್ಗೆಯೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಹತ್ಯೆ ಮಾಡಿರುವ ಘಟನೆಯೊಂದು ನಡೆದಿದೆ. ಸೈಯದ್ ಸೂಫಿಯಾನ್ (19) ಕೊಲೆಯಾಗಿರುವ ಯುವಕ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸೈಯದ್ ಸೂಫಿಯಾನ್ ಸ್ನೇಹಿತನ ಜೊತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಕೈದಿಗಳೇ ವೈನ್‌ ತಯಾರಿಸಿ ಪಾರ್ಟಿ, ಮಾರಾಟ

ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಕೈದಿಗಳೇ ಮದ್ಯ ತಯಾರಿಸಿ ಬಳಿಕ ಪಾರ್ಟಿ ಮಾಡಿಕೊಳ್ಳುತ್ತಿದ್ದಾರೆ ಮಾತ್ರವಲ್ಲ ಮದ್ಯವನ್ನು ಮಾರಾಟ ಕೂಡ ಮಾಡುತ್ತಾರೆ ಎಂಬ ವಿಚಾರ ಬಯಲಾಗಿದೆ. ಜೈಲಲ್ಲಿ ಮದ್ಯ ತಯಾರಿಸಿ ಮಾರಾಟ ಮಾಡಿ ದುಡ್ಡು ಪಡೆದು ಕೆಲವು ಕೈದಿಗಳು ಐಷಾರಾಮಿಯಾಗಿ ಜೀವನ ಮಾಡುತ್ತಿದ್ದಾರೆ ಎಂಬುದನ್ನು

ದಾವಣಗೆರೆಯಲ್ಲಿ ನೀರು ತುಂಬಿದ್ದ ಪಾತ್ರೆಗೆ ಬಿದ್ದು ಮಗು ಸಾವು

ದಾವಣಗೆರೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನೀರು ತುಂಬಿದ್ದ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ. ನಿಬಗೂರು ಗೊಲ್ಲರಹಟ್ಟಿ ಗ್ರಾಮದ ಮಂಜುನಾಥ್, ರಾಜೇಶ್ವರಿ ದಂಪತಿಯ ಪುತ್ರಿ ವೇದ(2) ಮೃತಪಟ್ಟ ಮಗು. ಮನೆಯಲ್ಲಿಯೇ ಆಟವಾಡುತ್ತ ಸ್ನಾನಗೃಹದಲ್ಲಿನ ನೀರು ತುಂಬಿದ ಪ್ಲಾಸ್ಟಿಕ್