Menu

ಕಲಬುರಗಿಯಲ್ಲಿ ತೆರಿಗೆ ಇಲಾಖೆ ಅಧಿಕಾರಿಯ ಮಗ ಸುಸೈಡ್‌

ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯ ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಮಾನಸ ಲೇಔಟ್ ನಲ್ಲಿರುವ ಮನೆಯಲ್ಲಿ ನಡೆದಿದೆ. ಕೃಷ್ಣ ಪಾಟೀಲ್ ( 25 ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಭಾರತಿ- ಅಪ್ಪಾರಾವ್ ಮಾಲಿಪಾಟೀಲ್ ಪುತ್ರ ಅವರ ಮಗ ಕೃಷ್ಣ ಪಾಟೀಲ್‌. ಭಾರತಿ ಮಾಲಿಪಾಟೀಲ್ ವಿಜಯಪುರ ಜಿಲ್ಲೆಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನ ಸಿಟಿಒ ವಿಭಾಗದ ಅಧಿಕಾರಿ. ಇಂಜಿನಿಯರಿಂಗ್ ಮುಗಿಸಿದ್ದ ಕೃಷ್ಣ ಮಾಲಿಪಾಟೀಲ್  ಮಾನಸ ಲೇಔಟ್

ಲಿವ್ ಇನ್ ರಿಲೇಷನ್‌ಶಿಪ್‌ ಬೇಡ: ಬುದ್ಧಿ ಹೇಳಿದ ತಂದೆ, ತಾಯಿ, ತಂಗಿಯ ಕೊಲೆಗೈದ ಯುವತಿ

ಲಿವ್-ಇನ್ ರಿಲೇಷನ್‌ಶಿಪ್‌ಗೆ  ವಿರೋಧ ವ್ಯಕ್ತಪಡಿಸಿ, ಬುದ್ಧಿ ಹೇಳಿ ಮನೆಗೆ ಕರೆದುಕೊಂಡು ಹೋಗಲು ಬಂದಿದ್ದ ತಂದೆ, ತಾಯಿ, ತಂಗಿಯನ್ನು ಪ್ರಿಯಕರನೊಂದಿಗೆ ಸೇರಿ ಯುವತಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಕೆಆರ್ ಪುರದ ಸಿಗೇಹಳ್ಳಿಯಲ್ಲಿ ನಡೆದಿದೆ. ಸೋಮಸುಂದರ್ (55), ಮುತ್ತುಲಕ್ಷ್ಮಿ (48) ಹಾಗೂ ಮಗಳು

ಕಡೂರಿನಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿದ ಯುವಕ ಆತ್ಮಹತ್ಯೆ

ಕಡೂರು ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಇಪ್ಪತ್ತು ವರ್ಷದ ಯುವಕ ಪ್ರಕರಣವೊಂದರಲ್ಲಿ ಪೊಲೀಸ್‌ ವಿಚಾರಣೆ ಎದುರಿಸಿ ಮನೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಚಂದನ್  ಆತ್ಮಹತ್ಯೆ ಮಾಡಿಕೊಂಡ ಯುವಕ. ಕುಡ್ಲೂರು ಗ್ರಾಮದ ಯುವತಿಯೊಬ್ಬಳು ಪ್ರಿಯಕರನೊಂದಿಗೆ ತೆರಳಿದ್ದ ಪ್ರಕರಣದ ತನಿಖೆ ನಡೆಸುತ್ತಿದ್ದ ಬೀರೂರು ಪೊಲೀಸರು, ಆಕೆಯ

ಶ್ರೀಮಂತರೊಂದಿಗೆ ಸ್ನೇಹದ ನಾಟಕವಾಡಿ ಹಣ ವಂಚಿಸುತ್ತಿದ್ದ ಮಹಿಳೆ ಅರೆಸ್ಟ್‌

ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತರನ್ನು ಪರಿಚಯಿಸಿಕೊಂಡ ಬಳಿಕ ಸ್ನೇಹದ ನಾಟಕವಾಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿ ವನಿತಾ ಎಂಬಾಕೆಯನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಸಾಮಾಜಿಕ ಜಾಲತಾಣಗಳಲ್ಲಿ ತಾನು ಕಿರುತೆರೆ ನಟಿ ಎಂದು ಪರಿಚಯ

ಮೈಸೂರಿನಲ್ಲಿ ವಿಷ ಸೇವಿಸಿ ಮದುವೆ ನಿಗದಿಯಾಗಿದ್ದ ಮಗಳು,ತಂದೆ, ತಾಯಿ ಸುಸೈಡ್‌

ಮೈಸೂರು ಟಿ.ನರಸೀಪುರದ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ತಂದೆ, ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಣ್ಣ, ಪತ್ನಿ ನಾಗರತ್ನ ಮತ್ತು ಮಗಳು ರಕ್ಷಿತಾಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್​ನೋಟ್​​

ಮುಧೋಳದಲ್ಲಿ ಬಸ್‌ಗೆ ಬೈಕ್‌ ಡಿಕ್ಕಿ: ಯುವಕ ಸಜೀವ ದಹನ

ಮುಧೋಳ ತಾಲೂಕಿನ ಸೊರಗಾಂವ್ ಗ್ರಾಮದ ಬಳಿ ಬಸ್‌ಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ಗೆ ಬೆಂಕಿ ತಗುಲಿ ಯುವಕ ಜೀವಂತವಾಗಿ ದಹನಗೊಂಡಿರುವ ಭೀಕರ ಘಟನೆ ನಡೆದಿದೆ. ಮುಧೋಳ ಪಟ್ಟಣದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೋರ್ಕ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬಾದಾಮಿಯಿಂದ

NEET ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳ ಬಂಧನ

ಬಿಹಾರದ ಪರೀಕ್ಷಾ ಕೇಂದ್ರಗಳಲ್ಲಿ ಜೂ 21ರಂದು ನಡೆದ ನೀಟ್‌-ಯುಜಿ ಮರುಪರೀಕ್ಷೆ ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಪರೀಕ್ಷಾ ಕೇಂದ್ರಗಳ ಮೇಲೆ

ಬೆಂಗಳೂರಿನಲ್ಲಿ ಉದ್ಯಮಿಗೆ 2.66 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್‌

ದುರಾಸೆಯ ಬೆನ್ನು ಹತ್ತಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳು. 30

ಸಾಯಲು ಹೋಗಿದ್ದ ಮಗನ ಉಳಿಸಲು ಯತ್ನಿಸಿ ತಂದೆಯೂ ಸಾವು

ಜಗಳವಾಡಿ ಸಾಯಲು ಹೋಗಿದ್ದ ಮಗನನನ್ನು ಉಳಿಸಲು ಹೋದ ವ್ಯಕ್ತಿ ಮೇಲೆ ರೈಲು ಹರಿದು ತಂದೆ-ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೇವರಿಯಾದಲ್ಲಿ ನಡೆದಿದೆ. ಗೋರಖ್‌ಪುರ-ಛಾಪ್ರಾ ರೈಲು ವಿಭಾಗದ ಗೌರಿಬಜಾರ್ ಪಶ್ಚಿಮ ರೈಲ್ವೆ ಕ್ರಾಸಿಂಗ್ ಬಳಿ ಈ ದುರಂತ ಸಂಭವಿಸಿದೆ. ಗೌರಿಬಜಾರ್ ಪೊಲೀಸ್

ಗಿಫ್ಟ್‌ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ

ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು